32 C
Mumbai
March 7, 2026
Mumbai News Kannada
ಸುದ್ದಿ

ಸವಿತಾ ಎಸ್. ರೈ ಅವರಿಗೆ ಪಿಎಚ್.ಡಿ ಪದವಿ





ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಮಣಿಪಾಲ ವಿಶ್ವವಿದ್ಯಾಲಯವು, ಸಂಶೋಧಕಿ ಸವಿತಾ ಎಸ್. ರೈ ಅವರಿಗೆ ಪಿಎಚ್‌ಡಿ ಪದವಿಯನ್ನು ಪ್ರದಾನ ಮಾಡಿದೆ.

‘ಸಾಂಸ್ಥಿಕ ಬದ್ಧತೆಯ ನಿರ್ಧಾರಕಗಳು: ನೈತಿಕ ನಾಯಕತ್ವವು ಆಟವನ್ನು ಬದಲಾಯಿಸುವವರೇ?’ ಎಂಬ ಮಹತ್ವದ ವಿಷಯದ ಮೇಲೆ ಅವರು ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದರು. ಈ ಸಂಶೋಧನಾ ಕಾರ್ಯವನ್ನು ಮಾಹೆ, ಮಣಿಪಾಲದ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಸಹ ಪ್ರಾಧ್ಯಾಪಕರಾದ ಡಾ. ನವೀನ್ ಕುಮಾರ್ ಕೂಡಮಾರ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ.

ಸವಿತಾ ಎಸ್. ರೈ ಅವರು ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತಸರರಾದ ಮಾಣಿಗುತ್ತು ಸಚಿನ್ ರೈ ಅವರ ಪತ್ನಿಯಾಗಿದ್ದು, ಶಂಕರ ಎನ್. ಶೆಟ್ಟಿ (ತಾಳಿಪಾಡಿ ಮೂಡ್ರಗುತ್ತು) ಮತ್ತು ವಿಜಯ ಎಸ್. ಶೆಟ್ಟಿ (ಬೇಳೂರು ದನ್ಯಾಡಿ ಮನೆ) ದಂಪತಿಯ ಪುತ್ರಿ.

ಅವರು ಬೈಲು ಕೆಳಗಿನಮನೆ ದಿ. ಕೋಚ್ಚಣ್ಣ ರೈ ಹಾಗೂ ಮಾಣಿಗುತ್ತು ಪ್ರಫುಲ್ಲ ಕೆ. ರೈ ಅವರ ಸೊಸೆಯೂ ಆಗಿದ್ದಾರೆ.

ಮಣಿಪಾಲ ವಿಶ್ವವಿದ್ಯಾಲಯವು ಸಮಾಜ ಮತ್ತು ಸಂಸ್ಥೆಗಳ ಬೆಳವಣಿಗೆಗೆ ದಾರಿದೀಪವಾಗುವಂತಹ ಮಹತ್ವದ ವಿಷಯದ ಮೇಲೆ ಸಂಶೋಧನೆ ನಡೆಸಿ ಪಿಎಚ್‌ಡಿ ಪದವಿಯನ್ನು ಗಳಿಸಿರುವ ಸವಿತಾ ಎಸ್. ರೈ ಅವರನ್ನು ಅಭಿನಂದಿಸಿದೆ.



Related posts

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ ಸಂಪನ್ನ

Mumbai News Desk

ತೀಯಾ ಬೆಳಕು ಮಾಜಿ ಸಂಪಾದಕ ಶ್ರೀಧರ್ ಸುವರ್ಣ ಅವರಿಗೆ ಮಾತೃ ವಿಯೋಗ

Mumbai News Desk

ಹಿರಿಯ ಪತ್ರಕರ್ತ, ನಿರೂಪಕ, ಕವಿ ಮನೋಹರ್ ಪ್ರಸಾದ್ ವಿಧಿವಶ.

Mumbai News Desk

ವಿಧಾನ ಪರಿಷತ್ ಉಪಚುನಾವಣೆ – ಬಿಜಿಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು

Mumbai News Desk

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ

Mumbai News Desk

ಆಂಧ್ರಪ್ರದೇಶದ ಪಟಾಕಿ ಘಟಕದಲ್ಲಿ ಭಾರಿ ಸ್ಫೋಟ, 18 ಮಂದಿ ಸಾವು

Mumbai News Desk