32 C
Mumbai
April 24, 2026
Mumbai News Kannada
ಸುದ್ದಿ

ಸವಿತಾ ಎಸ್. ರೈ ಅವರಿಗೆ ಪಿಎಚ್.ಡಿ ಪದವಿ





ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಮಣಿಪಾಲ ವಿಶ್ವವಿದ್ಯಾಲಯವು, ಸಂಶೋಧಕಿ ಸವಿತಾ ಎಸ್. ರೈ ಅವರಿಗೆ ಪಿಎಚ್‌ಡಿ ಪದವಿಯನ್ನು ಪ್ರದಾನ ಮಾಡಿದೆ.

‘ಸಾಂಸ್ಥಿಕ ಬದ್ಧತೆಯ ನಿರ್ಧಾರಕಗಳು: ನೈತಿಕ ನಾಯಕತ್ವವು ಆಟವನ್ನು ಬದಲಾಯಿಸುವವರೇ?’ ಎಂಬ ಮಹತ್ವದ ವಿಷಯದ ಮೇಲೆ ಅವರು ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದರು. ಈ ಸಂಶೋಧನಾ ಕಾರ್ಯವನ್ನು ಮಾಹೆ, ಮಣಿಪಾಲದ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಸಹ ಪ್ರಾಧ್ಯಾಪಕರಾದ ಡಾ. ನವೀನ್ ಕುಮಾರ್ ಕೂಡಮಾರ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ.

ಸವಿತಾ ಎಸ್. ರೈ ಅವರು ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತಸರರಾದ ಮಾಣಿಗುತ್ತು ಸಚಿನ್ ರೈ ಅವರ ಪತ್ನಿಯಾಗಿದ್ದು, ಶಂಕರ ಎನ್. ಶೆಟ್ಟಿ (ತಾಳಿಪಾಡಿ ಮೂಡ್ರಗುತ್ತು) ಮತ್ತು ವಿಜಯ ಎಸ್. ಶೆಟ್ಟಿ (ಬೇಳೂರು ದನ್ಯಾಡಿ ಮನೆ) ದಂಪತಿಯ ಪುತ್ರಿ.

ಅವರು ಬೈಲು ಕೆಳಗಿನಮನೆ ದಿ. ಕೋಚ್ಚಣ್ಣ ರೈ ಹಾಗೂ ಮಾಣಿಗುತ್ತು ಪ್ರಫುಲ್ಲ ಕೆ. ರೈ ಅವರ ಸೊಸೆಯೂ ಆಗಿದ್ದಾರೆ.

ಮಣಿಪಾಲ ವಿಶ್ವವಿದ್ಯಾಲಯವು ಸಮಾಜ ಮತ್ತು ಸಂಸ್ಥೆಗಳ ಬೆಳವಣಿಗೆಗೆ ದಾರಿದೀಪವಾಗುವಂತಹ ಮಹತ್ವದ ವಿಷಯದ ಮೇಲೆ ಸಂಶೋಧನೆ ನಡೆಸಿ ಪಿಎಚ್‌ಡಿ ಪದವಿಯನ್ನು ಗಳಿಸಿರುವ ಸವಿತಾ ಎಸ್. ರೈ ಅವರನ್ನು ಅಭಿನಂದಿಸಿದೆ.



Related posts

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಹಲ್ಲೆ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ – ಕೋಟ ಶ್ರೀನಿವಾಸ ಪೂಜಾರಿ

Mumbai News Desk

ಖ್ಯಾತ ಆರ್ಥಿಕ ಸಲಹೆಗಾರ ಡಾ. ಆರ್. ಕೆ. ಶೆಟ್ಟಿಯವರಿಗೆ “ಸಂಸ್ಕೃತಿ ಸಿರಿ” ಪ್ರಶಸ್ತಿ

Mumbai News Desk

ಸದಾನಂದ ಪೂಜಾರಿ ಆಕಸ್ಮಿಕ ಸಾವು

Mumbai News Desk

ದುಬೈ ಯಲ್ಲಿ ಅದ್ದೂರಿಯಾಗಿ ಜರಗಿದ “ಅಂತಾರಾಷ್ಟ್ರೀಯ ಜನಪದ ಉತ್ಸವ – 2025”

Mumbai News Desk

ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಟಿ.ಕರ್ಕೇರ ಅವರಿಗೆ ಸಹಕಾರ ರತ್ನ ಪ್ರಶಸ್ತಿ

Mumbai News Desk

ಪೇಜಾವರ ಮಠದಲ್ಲಿ ಶ್ರೀ ಕೃಷ್ಣನವಮಿ ಪ್ರತಿಷ್ಠಾ ವರ್ಧಂತಿ ಉತ್ಸವ ಆಚರಣೆ.

Mumbai News Desk