September 6, 2026
Mumbai News Kannada
ಸುದ್ದಿ

ಸವಿತಾ ಎಸ್. ರೈ ಅವರಿಗೆ ಪಿಎಚ್.ಡಿ ಪದವಿ





ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಮಣಿಪಾಲ ವಿಶ್ವವಿದ್ಯಾಲಯವು, ಸಂಶೋಧಕಿ ಸವಿತಾ ಎಸ್. ರೈ ಅವರಿಗೆ ಪಿಎಚ್‌ಡಿ ಪದವಿಯನ್ನು ಪ್ರದಾನ ಮಾಡಿದೆ.

‘ಸಾಂಸ್ಥಿಕ ಬದ್ಧತೆಯ ನಿರ್ಧಾರಕಗಳು: ನೈತಿಕ ನಾಯಕತ್ವವು ಆಟವನ್ನು ಬದಲಾಯಿಸುವವರೇ?’ ಎಂಬ ಮಹತ್ವದ ವಿಷಯದ ಮೇಲೆ ಅವರು ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದರು. ಈ ಸಂಶೋಧನಾ ಕಾರ್ಯವನ್ನು ಮಾಹೆ, ಮಣಿಪಾಲದ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಸಹ ಪ್ರಾಧ್ಯಾಪಕರಾದ ಡಾ. ನವೀನ್ ಕುಮಾರ್ ಕೂಡಮಾರ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ.

ಸವಿತಾ ಎಸ್. ರೈ ಅವರು ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತಸರರಾದ ಮಾಣಿಗುತ್ತು ಸಚಿನ್ ರೈ ಅವರ ಪತ್ನಿಯಾಗಿದ್ದು, ಶಂಕರ ಎನ್. ಶೆಟ್ಟಿ (ತಾಳಿಪಾಡಿ ಮೂಡ್ರಗುತ್ತು) ಮತ್ತು ವಿಜಯ ಎಸ್. ಶೆಟ್ಟಿ (ಬೇಳೂರು ದನ್ಯಾಡಿ ಮನೆ) ದಂಪತಿಯ ಪುತ್ರಿ.

ಅವರು ಬೈಲು ಕೆಳಗಿನಮನೆ ದಿ. ಕೋಚ್ಚಣ್ಣ ರೈ ಹಾಗೂ ಮಾಣಿಗುತ್ತು ಪ್ರಫುಲ್ಲ ಕೆ. ರೈ ಅವರ ಸೊಸೆಯೂ ಆಗಿದ್ದಾರೆ.

ಮಣಿಪಾಲ ವಿಶ್ವವಿದ್ಯಾಲಯವು ಸಮಾಜ ಮತ್ತು ಸಂಸ್ಥೆಗಳ ಬೆಳವಣಿಗೆಗೆ ದಾರಿದೀಪವಾಗುವಂತಹ ಮಹತ್ವದ ವಿಷಯದ ಮೇಲೆ ಸಂಶೋಧನೆ ನಡೆಸಿ ಪಿಎಚ್‌ಡಿ ಪದವಿಯನ್ನು ಗಳಿಸಿರುವ ಸವಿತಾ ಎಸ್. ರೈ ಅವರನ್ನು ಅಭಿನಂದಿಸಿದೆ.



Related posts

ಪುಷ್ಪ 2 ಯಶಸ್ಸಿನ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ಬಂಧನ, ಅಭಿಮಾನಿಗಳು ಶಾಕ್

Mumbai News Desk

ಮುಲ್ಕಿ ಬಪ್ಪನಾಡು ದುರ್ಗಾಪರಮೇಶ್ವರಿಯ ಸನ್ನಿಧಾನದಲ್ಲಿ ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ಶ್ರೀ ಗೆ ನುಡಿ ನಮನ,

Mumbai News Desk

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Mumbai News Desk

ಮೀರಾ ಭಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿ ವಿಜಯ

Mumbai News Desk

ಮೊಳಹಳ್ಳಿ ಶಿವರಾವ್ ಸಹಕಾರಿ ಕ್ಷೇತ್ರಕ್ಕೆ ನೀಡಿದ ಕೊಡುಗೆಯ ಸಮಗ್ರ ದಾಖಲೀಕರಣ: ‘ತ್ಯಾಗಮಯಿ ಮೊಳಹಳ್ಳಿ’ ಗ್ರಂಥ ಯುವಪೀಳಿಗೆಗೆ ಸ್ಫೂರ್ತಿ – ಡಾ. ಎಂ.ಎನ್. ರಾಜೇಂದ್ರ ಕುಮಾರ್

Mumbai News Desk

ಚಿತ್ರಾಪು: ವಿಠಲ ಬಂಗೇರ ನಿಧನ

Mumbai News Desk