July 23, 2026
Mumbai News Kannada
ಸುದ್ದಿ

ಸವಿತಾ ಎಸ್. ರೈ ಅವರಿಗೆ ಪಿಎಚ್.ಡಿ ಪದವಿ







ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಮಣಿಪಾಲ ವಿಶ್ವವಿದ್ಯಾಲಯವು, ಸಂಶೋಧಕಿ ಸವಿತಾ ಎಸ್. ರೈ ಅವರಿಗೆ ಪಿಎಚ್‌ಡಿ ಪದವಿಯನ್ನು ಪ್ರದಾನ ಮಾಡಿದೆ.

‘ಸಾಂಸ್ಥಿಕ ಬದ್ಧತೆಯ ನಿರ್ಧಾರಕಗಳು: ನೈತಿಕ ನಾಯಕತ್ವವು ಆಟವನ್ನು ಬದಲಾಯಿಸುವವರೇ?’ ಎಂಬ ಮಹತ್ವದ ವಿಷಯದ ಮೇಲೆ ಅವರು ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದರು. ಈ ಸಂಶೋಧನಾ ಕಾರ್ಯವನ್ನು ಮಾಹೆ, ಮಣಿಪಾಲದ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಸಹ ಪ್ರಾಧ್ಯಾಪಕರಾದ ಡಾ. ನವೀನ್ ಕುಮಾರ್ ಕೂಡಮಾರ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ.

ಸವಿತಾ ಎಸ್. ರೈ ಅವರು ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತಸರರಾದ ಮಾಣಿಗುತ್ತು ಸಚಿನ್ ರೈ ಅವರ ಪತ್ನಿಯಾಗಿದ್ದು, ಶಂಕರ ಎನ್. ಶೆಟ್ಟಿ (ತಾಳಿಪಾಡಿ ಮೂಡ್ರಗುತ್ತು) ಮತ್ತು ವಿಜಯ ಎಸ್. ಶೆಟ್ಟಿ (ಬೇಳೂರು ದನ್ಯಾಡಿ ಮನೆ) ದಂಪತಿಯ ಪುತ್ರಿ.

ಅವರು ಬೈಲು ಕೆಳಗಿನಮನೆ ದಿ. ಕೋಚ್ಚಣ್ಣ ರೈ ಹಾಗೂ ಮಾಣಿಗುತ್ತು ಪ್ರಫುಲ್ಲ ಕೆ. ರೈ ಅವರ ಸೊಸೆಯೂ ಆಗಿದ್ದಾರೆ.

ಮಣಿಪಾಲ ವಿಶ್ವವಿದ್ಯಾಲಯವು ಸಮಾಜ ಮತ್ತು ಸಂಸ್ಥೆಗಳ ಬೆಳವಣಿಗೆಗೆ ದಾರಿದೀಪವಾಗುವಂತಹ ಮಹತ್ವದ ವಿಷಯದ ಮೇಲೆ ಸಂಶೋಧನೆ ನಡೆಸಿ ಪಿಎಚ್‌ಡಿ ಪದವಿಯನ್ನು ಗಳಿಸಿರುವ ಸವಿತಾ ಎಸ್. ರೈ ಅವರನ್ನು ಅಭಿನಂದಿಸಿದೆ.



Related posts

ಕುಲಾಲ ಪ್ರತಿಷ್ಠಾನ (ರಿ) ಮಂಗಳೂರು ಆಶ್ರಯದಲ್ಲಿ ತುಳು ನಾಟಕ ಪ್ರದರ್ಶನ   ಸಾಧಕರಿಗೆ ಸನ್ಮಾನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (02/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಹಿರಿಯ ಸಾಹಿತಿ ಪತ್ರಕರ್ತ ಶ್ರೀ ಪರಮಾನಂದ ಸಾಲ್ಯಾನ್ ರಿಗೆ ರಂಗಭಾಸ್ಕರ- 2026 ಪ್ರಶಸ್ತಿ ಪ್ರದಾನ

Mumbai News Desk

ಅಹಮದಾಬಾದ್ : 242 ಪ್ರಯಾಣಿಕರನ್ನು ಹೊತ್ತು ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ AI -171 (Air India)ವಿಮಾನ ಪತನ, ಹಲವರ ಸಾವು ಶಂಕೆ

Mumbai News Desk

ಮುಂಬೈ : ಶಾಂತಾ ಸುಬ್ಬಯ್ಯ ನಿಧನ

Mumbai News Desk

ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಸದಸ್ಯ ಪ್ರವೀಣ್ ಪೂಜಾರಿ (50) ನಿಧನ: ಮಂಡಳಿಯಿಂದ ತೀವ್ರ ಸಂತಾಪ

Mumbai News Desk