32.3 C
Mumbai
June 7, 2026
Mumbai News Kannada
ತುಳುನಾಡು

ಇಂದ್ರಾಳಿ ಮೇಲ್ಸೇತುವೆ ಸೆಪ್ಟೆಂಬರ್ 22 ವಾಹನ ಸಂಚಾರಕ್ಕೆ ಮುಕ್ತ, ಸೋಮವಾರದಿಂದಲೇ ಕೆಳ ಪರ್ಕಳ ರಸ್ತೆ ಕಾಮಗಾರಿ ಆರಂಭ : ಯಶ್ಪಾಲ್ ಸುವರ್ಣ





ರಾಷ್ಟ್ರೀಯ ಹೆದ್ದಾರಿ 169 ಇಂದ್ರಾಳಿ ಮೇಲ್ಸೇತುವೆ ಹಾಗೂ ಕೆಳ ಪರ್ಕಳ ರಸ್ತೆ ಕಾಮಗಾರಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದು ಸೆಪ್ಟೆಂಬರ್ 22 ರಂದು ವಾಹನ ಸಂಚಾರಕ್ಕೆ ಮುಕ್ತ ಗೊಳಿಸಲಾಗುವುದು. ಮಳೆಯ ಕಾರಣದಿಂದ ಮುಂದೂಡಲ್ಪಟ್ಟಿದ್ದ
ಕೆಳ ಪರ್ಕಳ ರಸ್ತೆ ದುರಸ್ತಿ ಕಾಮಗಾರಿ ಸೋಮವಾರದಿಂದಲೇ ಆರಂಭಗೊಳ್ಳಲಿದ್ದು, ಒಂದು ವಾರದ ಕಾಲ ಮಿತಿಯೊಳಗೆ ಕಾಮಗಾರಿ ಪೂರ್ಣ ಗೊಳಿಸಲು ರಾಷ್ಟೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದರು.

ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ನವರಾತ್ರಿಯ ಮೊದಲ ದಿನದಂದು ಲೋಕಾರ್ಪಣೆಗೊಂಡು ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. ಕೆಳ ಪರ್ಕಳ ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರ ದುಸ್ತರವಾದ ಹಿನ್ನೆಲೆಯಲ್ಲಿ ಸಂಸದರ ವಿಶೇಷ ಮುತುವರ್ಜಿಯಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆ ವಿಶೇಷ ಅನುದಾನ ಒದಗಿಸಿದ್ದು ಅತ್ಯಂತ ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ಆರಂಭಗೊಳ್ಳಲಿದ್ದು, ಒಂದು ವಾರದ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.

ಮಳೆಯ ಕಾರಣದಿಂದ ಕೆಳ ಪರ್ಕಳ ರಸ್ತೆ ಅವ್ಯವಸ್ಥೆಯಿಂದ ವಾಹನ ಸವಾರರು, ಸಾರ್ವಜನಿಕರು ಸಮಸ್ಯೆ ಎದುರಿಸಿದ ಬಗ್ಗೆ ವಿಷಾದಪಡಿಸುತ್ತಾ, ಕಾಮಗಾರಿ ಸಂದರ್ಭದಲ್ಲಿ ಸಾರ್ವಜನಿಕರು, ವಾಹನ ಸವಾರರು ಸಹಕಾರ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ. ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿರಾಮ್ ಶಂಕರ್, ಹೆಚ್ಚುವರಿ ಅಧೀಕ್ಷಕರಾದ ಶ್ರೀ ಸುಧಾಕರ ನಾಯ್ಕ್, ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ಶ್ರೀ ಮಂಜುನಾಥ ನಾಯಕ್, ನಗರಸಭಾ ಸದಸ್ಯರಾದ ಶ್ರೀಮತಿ ಸುಮಿತ್ರಾ ನಾಯಕ್, ಶ್ರೀ ಗಿರೀಶ್ ಅಂಚನ್, ಶ್ರೀ ಅಶೋಕ್ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಪಟ್ಲ ಸತೀಶ್ ಶೆಟ್ಟಿಯವರಿಗೆ  ಗೌರವ.

Mumbai News Desk

ವಿಷಮುಕ್ತ ಆಹಾರಕ್ಕಾಗಿ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳೋಣ – ಕೊಂಡೆವೂರು ಶ್ರೀಗಳು.

Mumbai News Desk

ಮೂಲ್ಕಿ ಹೊಸ ಅಂಗಣ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ಆದಿಕಿಲ್ಲಾಡಿ ಶ್ರೀ ಕೊಡ್ದಬ್ಬು ದೈವಸ್ಥಾನದ ಗುರಿಕಾರರಾದ ವಿ ಎಸ್ ವಸಂತ್ ಗುರಿಕಾರಯವರಿಗೆ ಸನ್ಮಾನ

Mumbai News Desk

ಮುಲ್ಕಿ : ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದಲ್ಲಿ ‘ವನ ಮಹೋತ್ಸವ’ ದಿನಾಚರಣೆ, ಹಸಿರು ಕ್ರಾಂತಿಗೆ ಕರೆ

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮ ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk

ಶ್ರೀ ಶಂಕರಪುರ ಕ್ಷೇತ್ರದಲ್ಲಿ ವಿಶ್ವ ಹಸಿವು ದಿನಾಚರಣೆ – ಶ್ರೀ ಸಾಯಿ ತುತ್ತು ಯೋಜನೆ *ರಾಜ್ಯದೆಲ್ಲೆಡೆ ವಿಸ್ತರಿಸುವ ಸಂಕಲ್ಪ: – ಶ್ರೀ ಸಾಯಿಈಶ್ವರ್ ಗುರೂಜಿ

Mumbai News Desk