30 C
Mumbai
April 24, 2026
Mumbai News Kannada
ಸುದ್ದಿ

ಕನ್ನಡ ಸಂಘ ಬಹರೈನ್‌ಗೆ ಒಂದು ಕೋಟಿ ರೂಪಾಯಿಗಳ ಅನುದಾನ – ಮುಖ್ಯಮಂತ್ರಿಗಳ ಅನುಮೋದನೆ





ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸನ್ಮಾನ್ಯ ಬಸವರಾಜ ಹೊರಟ್ಟಿ ಅವರ ವಿಶೇಷ ಶಿಫಾರಸಿನ ಮೇರೆಗೆ, ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಎಂ. ಸಿದ್ಧರಾಮಯ್ಯ ಅವರು ಕನ್ನಡ ಸಂಘ ಬಹರೈನ್‌ಗೆ ಒಂದು ಕೋಟಿ ರೂಪಾಯಿಗಳ ಅನುದಾನವನ್ನು ಅಧಿಕೃತವಾಗಿ ಅನುಮೋದಿಸಿದ್ದಾರೆ.

ಈ ಸಂದರ್ಭದಲ್ಲಿ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ, ಹಾಗೂ ನಿನ್ನೆ ತಾನೇ ವಿಧಾನ ಪರಿಷತ್ತಿನ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ, ಅನಿವಾಸಿ ಭಾರತೀಯ ಸಮಿತಿ – ಕರ್ನಾಟಕ ಇದರ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ ಉಪಸ್ಥಿತಿಯಲ್ಲಿ, ಸಂಘದ ಅಧ್ಯಕ್ಷ ಅಜಿತ್ ಬಂಗೇರ ಅವರು ಮುಖ್ಯಮಂತ್ರಿಗಳಿಗೆ ಅನುದಾನಕ್ಕಾಗಿ ಮನವಿ ಸಲ್ಲಿಸಿದರು.

ಇಂದು, ಕನ್ನಡ ಸಂಘದ ಅಧ್ಯಕ್ಷ ಅಜಿತ್ ಬಂಗೇರ ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಕರ್ನಾಟಕ ಸರಕಾರದ ಅನುದಾನ ನಿಧಿಯಿಂದ ಬಿಡುಗಡೆ ಮಾಡಲು ಅನುಮತಿ ನೀಡಿದ್ದಾರೆ.

ಇತ್ತೀಚೆಗೆ ಕನ್ನಡ ಸಂಘ ಕಟ್ಟಡ ಸಮುಚ್ಚಯ – “ವಿದೇಶದಲ್ಲಿ ನಿರ್ಮಿತ ಪ್ರಥಮ ಕನ್ನಡ ಭವನ” ವನ್ನು ಭೇಟಿ ಮಾಡಿದ ಸಂದರ್ಭದಲ್ಲಿ, ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಆರೋಗ್ಯ ಸಚಿವ ಶ್ರೀ ದಿನೇಶ್ ಗುಂಡೂರಾವ್ ಅವರು ಸಂಘದ ಮೂಲಭೂತ ಅಗತ್ಯಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ ಧನಸಹಾಯ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದ್ದರು.

ಮುಖ್ಯಮಂತ್ರಿಗಳ ಈ ಅನುಮೋದನೆಯೊಂದಿಗೆ, ಕನ್ನಡ ಸಂಘ ಬಹರೈನ್ ತನ್ನ ಮೂಲಸೌಕರ್ಯ, ಅಭಿವೃದ್ಧಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸಲು ಮಹತ್ವದ ನೆರವನ್ನು ಪಡೆಯಲಿದೆ ಹಾಗೂ ಸಂಘದ ಅಧ್ಯಕ್ಷರು ಅಜಿತ್ ಬಂಗೇರ ಅವರು ವೈಯಕ್ತಿಕವಾಗಿ ಹಾಗೂ ಬಹರೈನ್ ಕನ್ನಡಿಗರ ಪರವಾಗಿ ‌ಕೃತಜ್ಞತೆ ಸಲ್ಲಿಸಿದರು.



Related posts

ನೆಲೆ ಫೌಂಡೇಶನ್ ಗೆ 11ನೇ ಮೂಲತ್ವ ವಿಶ್ವ ಪ್ರಶಸ್ತಿ ಪ್ರದಾನ : ಮೂಲತ್ವ ಪೌಂಡೇಶನ್ ನ ಕಾರ್ಯ ಶ್ಲಾಘನೀಯ – ಆರ್ ಎಸ್ ಎಸ್ ಮುಖಂಡ ವಾಮನ್ ಶೆಣೈ ಅಭಿಮತ

Mumbai News Desk

ವೆಂಕಪ್ಪ ನಾರಾಯಣ ಶೆಟ್ಟಿ ನಿಧನ.

Mumbai News Desk

ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಶ್ರೀರಕ್ಷೆಯೇ, ಸಾಧನೆಗೆ ಪ್ರೇರಣೆ : ದೇವಿಪ್ರಸಾದ್ ಶೆಟ್ಟಿ ಬೆಳಪು.

Mumbai News Desk

ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನ: ಸಚಿವ ಸೋಮಣ್ಣ

Mumbai News Desk

ಫರಂಗಿಪೇಟೆ : ಬಾಲಕ ನಾಪತ್ತೆ ಪ್ರಕರಣ, ನಾಳೆ (ಶನಿವಾರ ) ಫರಂಗಿಪೇಟೆ ಬಂದ್

Mumbai News Desk

ಉಡುಪಿ : ಕನಕನ ಕಿಂಡಿ ಸ್ವರ್ಣ ಕವಚ ಉದ್ಘಾಟನೆ ವಿವಾದ : ಕಡೆಗಣನೆ ಆರೋಪಗಳನ್ನು ತಳ್ಳಿ ಹಾಕಿದ ಪ್ರಮೋದ್ ಮಧ್ವರಾಜ್

Mumbai News Desk