July 23, 2026
Mumbai News Kannada
ತುಳುನಾಡು

ಮೂಲ್ಕಿ : ವಿಜಯಾ ರೈತರ ಸೇವಾ ಸಂಘದ ಮಹಾಸಭೆ ಸದಸ್ಯರಿಗೆ ಶೇ ೧೨ ಡಿವಿಡೆಂಡ್







ಮೂಲ್ಕಿ ೨೦೨೪-೨೫ನೇ ಆರ್ಥಿಕ ವರ್ಷದಲ್ಲಿ ಮೂಲ್ಕಿ ವಿಜಯಾ ರೈತರ ಸೇವಾ ಸಹಕಾರಿ ಸಂಘ ೪೦.೮೦ ಲಕ್ಷ ರೂ ಲಾಭಾಂಶ ಗಳಿಸಿ, ಸದಸ್ಯರಿಗೆ ಶೇ.೧೨ ಡಿವಿಡೆಂಡ್ ನೀಡಲಾಗುವುದು. ಸಂಘಕ್ಕೆ ಸ್ವಂತ ಕಟ್ಟಡ ಹೊಂದಲು ನಿವೇಶನ ಖರೀದಿಸಲಾಗಿದ್ದು, ಮುಂದಿನ ವರ್ಷ ಸ್ವರ್ಣ ಮಹೋತ್ಸವದ ಹಿನ್ನೆಲೆ ಕಟ್ಟಡ ನಿರ್ಮಾಣದ ಬಗ್ಗೆ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ರಂಗನಾಥ ಶೆಟ್ಟಿ ಹೇಳಿದರು.
ಸಂಘದ ವ್ಯಾಪ್ತಿಯ ಪ್ರಗತಿಪರ ಕೃಷಿಕರಾದ ಭುಜಂಗ ಆರ್ ಶೆಟ್ಟಿ, ಸದಾನಂದ ಸನಿಲ್ ನಾಕದೈಲು ಚಿತ್ರಾಪು, ಗಿರಿಧರ್ ಕಾಮತ್ ಅತಿಕಾರಿಬೆಟ್ಟು, ದಿನಕರ ಕಾಂಚನ್ ಮಾನಂಪಾಡಿ, ನೀಲು ಪೂಜರ‍್ತಿ ಅತಿಕಾರಿಬೆಟ್ಟು ಅವರನ್ನು ಸನ್ಮಾನಿಸಲಾಯಿತು. ಸಂಘದ ಸದಸ್ಯರ ಮಕ್ಕಳಾದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ೨೫ ಪ್ರತಿಭಾವಂತರಿಗೆ ವಿದ್ಯಾರ್ಥಿವೇತನದೊಂದಿಗೆ ಗೌರವಿಸಲಾಯಿತು.


ಮೂಲ್ಕಿ ಬಿಲ್ಲವ ಸಂಘದಲ್ಲಿ ವಿಜಯಾ ರೈತರ ಸೇವಾ ಸಹಕಾರಿ ಸಂಘದ ೪೯ನೇ ವಾರ್ಷಿಕ ಮಹಾಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು. ಸಂಘ ಕೃಷಿ, ಹೈನುಗಾರಿಕೆ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತಿದ್ದು ಶಾಸಕ ಉಮಾನಾಥ ಕೋಟ್ಯಾನ್ ಸೂಚನೆಯಂತೆ ಮುಂದಿನ ಬಾರಿ ಶಿಕ್ಷಣದ ಜತೆಗೆ ಯಕ್ಷಗಾನ, ಭರತನಾಟ್ಯ ಸಹಿತ ವಿವಿಧ ಕಲಾ ಪ್ರಾಕಾರಗಳು ಮತ್ತು ಕ್ರೀಡಾ ಸಾಧಕರಿಗೂ ಪ್ರೋತ್ಸಾಹ ನೀಡಲಾಗುವುದು ಎಂದರು.


ಸAಘ ಮೂಲ್ಕಿಯಲ್ಲಿ ಪ್ರಧಾನ ಕಚೇರಿ ಹೊಂದಿದ್ದು, ಸದಾಶಿವ ರಾವ್ ನಗರ, ಶಿಮಂತೂರು, ಬಳ್ಕುಂಜೆ, ಅತಿಕಾರಿಬೆಟ್ಟು, ಕುಕ್ಕಟ್ಟೆ, ಕರ್ನಿರೆ ಶಾಖೆ ಹೊಂದಿವೆ. ಕಳೆದ ಆರ್ಥಿಕ ವರ್ಷದಲ್ಲಿ ಸಂಸ್ಥೆ ೧೪೨.೧೩ ರೂ. ಕೋಟಿ ವ್ಯವಹಾರ ನಡೆಸಿದ್ದು ಲೆಕ್ಕಪರಿಶೋಧನಾ ವರ್ಗೀಕರಣ ‘ಎ’ ತರಗತಿ ಗಳಿಸಿದೆ ಎಂದರು. ಸಂಘದ ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ ನಿದೇಶಕರಾದ ನರಸಿಂಹ ಪೂಜಾರಿ, ದೇವಪ್ರಸಾದ್ ಕೆಂಪುಗುಡ್ಡೆ, ಮಮತಾ ಡಿ.ಪೂಂಜ, ಪದ್ಮಿನಿ ವಿ.ಶೆಟ್ಟಿ, ರಾಜೇಶ್ ಶೆಟ್ಟಿ, ಪ್ರಭಾಕರ ದೇವಾಡಿಗ, ರಾಮ ನಾÊಕ್, ನಂಜುAಡ ಆರ್.ಕೆ.ಮುಖ್ಯ ಅತಿಥಿಗಳಾಗಿದ್ದರು.
ಸಂಘದ ನಿರ್ದೇಶಕ ಗಂಗಾಧರ ವಿ. ಶೆಟ್ಟಿ ಸ್ವಾಗತಿಸಿದರು, ಆಡಳಿತ ನಿದೇಶಕ ಸಂತೋಷ್ ಕುಮಾರ್ ಶೆಟ್ಟಿ ಪ್ರಸ್ತಾವಿಸಿದರು. ವ್ಯವಸ್ಥಾಪಕ ಚಂದ್ರಕಾAತ ಶೆಟ್ಟಿ ವರದಿ ಮಂಡಿಸಿದರು. ಅತಿಕಾರಿಬೆಟ್ಟು ಗ್ರಾಪಂ ಉಪಾಧ್ಯಕ್ಷ ಮನೋಹರ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿ, ಸಂಘದ ನಿರ್ದೇಶಕ ಅಶೋಕ್ ಕುಮಾರ್ ಚಿತ್ರಾಪು ವಂದಿಸಿದರು.



Related posts

ಸಸಿಹಿತ್ಲು: ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಧನ್ಯೋತ್ಸವ ಕಾರ್ಯಕ್ರಮ

Mumbai News Desk

ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಷಡಾಧಾರ ಪ್ರತಿಷ್ಠೆ ಭಕ್ತಿಭಾವದಿಂದ ಸಂಪನ್ನ.

Mumbai News Desk

ಪ್ರಪಂಚದಾದ್ಯಂತ ನೆಲೆಸಿರುವ ಭಕ್ತರಿಗೆ ರಕ್ಷಣಾಪುರ ಕಾಪುವಿನ ಅಮ್ಮ ರಕ್ಷೆಯಾಗಿದ್ದಾಳೆ : ಕೇರಳ ಕೈಮುಕ್ಕು ನಾರಾಯಣನ್ ನಂಬೂದರಿ

Mumbai News Desk

ಕೋಸ್ಟಲ್ ಫಿಲ್ಮ್ ಅವಾರ್ಡ್ಸ್: “ಜೈ” ತುಳು ಚಿತ್ರದ ನಟನೆಗೆ ಅಕ್ಷರ್ ಜಗನ್ನಾಥ್ ಶೆಟ್ಟಿ ಬಾಳಗೆ ಅತ್ಯುತ್ತಮ ಬಾಲನಟ ಪ್ರಶಸ್ತಿ

Mumbai News Desk

ಹರಿಶ್ಚಂದ್ರ ಪಿ. ಸಾಲ್ಯಾನ್ ಅವರ “ಮೂಲ್ಕಿಯ ಕೀರ್ತಿಶೇಷ ಸಾಧಕರು” ಕೃತಿ ಬಿಡುಗಡೆ ಸಮಾರಂಭ

Mumbai News Desk

ಹೆಜಮಾಡಿ ಬಿರುವೆರ್ ಬ್ರದರ್ಸ್ ನ ನೂತನ ಅಧ್ಯಕ್ಷರಾಗಿ ಗುರುಪ್ರಸಾದ್ ಪೂಜಾರಿ ಆಯ್ಕೆ.

Mumbai News Desk