30.9 C
Mumbai
June 8, 2026
Mumbai News Kannada
ತುಳುನಾಡು

ಮೂಲ್ಕಿ : ವಿಜಯಾ ರೈತರ ಸೇವಾ ಸಂಘದ ಮಹಾಸಭೆ ಸದಸ್ಯರಿಗೆ ಶೇ ೧೨ ಡಿವಿಡೆಂಡ್





ಮೂಲ್ಕಿ ೨೦೨೪-೨೫ನೇ ಆರ್ಥಿಕ ವರ್ಷದಲ್ಲಿ ಮೂಲ್ಕಿ ವಿಜಯಾ ರೈತರ ಸೇವಾ ಸಹಕಾರಿ ಸಂಘ ೪೦.೮೦ ಲಕ್ಷ ರೂ ಲಾಭಾಂಶ ಗಳಿಸಿ, ಸದಸ್ಯರಿಗೆ ಶೇ.೧೨ ಡಿವಿಡೆಂಡ್ ನೀಡಲಾಗುವುದು. ಸಂಘಕ್ಕೆ ಸ್ವಂತ ಕಟ್ಟಡ ಹೊಂದಲು ನಿವೇಶನ ಖರೀದಿಸಲಾಗಿದ್ದು, ಮುಂದಿನ ವರ್ಷ ಸ್ವರ್ಣ ಮಹೋತ್ಸವದ ಹಿನ್ನೆಲೆ ಕಟ್ಟಡ ನಿರ್ಮಾಣದ ಬಗ್ಗೆ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ರಂಗನಾಥ ಶೆಟ್ಟಿ ಹೇಳಿದರು.
ಸಂಘದ ವ್ಯಾಪ್ತಿಯ ಪ್ರಗತಿಪರ ಕೃಷಿಕರಾದ ಭುಜಂಗ ಆರ್ ಶೆಟ್ಟಿ, ಸದಾನಂದ ಸನಿಲ್ ನಾಕದೈಲು ಚಿತ್ರಾಪು, ಗಿರಿಧರ್ ಕಾಮತ್ ಅತಿಕಾರಿಬೆಟ್ಟು, ದಿನಕರ ಕಾಂಚನ್ ಮಾನಂಪಾಡಿ, ನೀಲು ಪೂಜರ‍್ತಿ ಅತಿಕಾರಿಬೆಟ್ಟು ಅವರನ್ನು ಸನ್ಮಾನಿಸಲಾಯಿತು. ಸಂಘದ ಸದಸ್ಯರ ಮಕ್ಕಳಾದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ೨೫ ಪ್ರತಿಭಾವಂತರಿಗೆ ವಿದ್ಯಾರ್ಥಿವೇತನದೊಂದಿಗೆ ಗೌರವಿಸಲಾಯಿತು.


ಮೂಲ್ಕಿ ಬಿಲ್ಲವ ಸಂಘದಲ್ಲಿ ವಿಜಯಾ ರೈತರ ಸೇವಾ ಸಹಕಾರಿ ಸಂಘದ ೪೯ನೇ ವಾರ್ಷಿಕ ಮಹಾಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು. ಸಂಘ ಕೃಷಿ, ಹೈನುಗಾರಿಕೆ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತಿದ್ದು ಶಾಸಕ ಉಮಾನಾಥ ಕೋಟ್ಯಾನ್ ಸೂಚನೆಯಂತೆ ಮುಂದಿನ ಬಾರಿ ಶಿಕ್ಷಣದ ಜತೆಗೆ ಯಕ್ಷಗಾನ, ಭರತನಾಟ್ಯ ಸಹಿತ ವಿವಿಧ ಕಲಾ ಪ್ರಾಕಾರಗಳು ಮತ್ತು ಕ್ರೀಡಾ ಸಾಧಕರಿಗೂ ಪ್ರೋತ್ಸಾಹ ನೀಡಲಾಗುವುದು ಎಂದರು.


ಸAಘ ಮೂಲ್ಕಿಯಲ್ಲಿ ಪ್ರಧಾನ ಕಚೇರಿ ಹೊಂದಿದ್ದು, ಸದಾಶಿವ ರಾವ್ ನಗರ, ಶಿಮಂತೂರು, ಬಳ್ಕುಂಜೆ, ಅತಿಕಾರಿಬೆಟ್ಟು, ಕುಕ್ಕಟ್ಟೆ, ಕರ್ನಿರೆ ಶಾಖೆ ಹೊಂದಿವೆ. ಕಳೆದ ಆರ್ಥಿಕ ವರ್ಷದಲ್ಲಿ ಸಂಸ್ಥೆ ೧೪೨.೧೩ ರೂ. ಕೋಟಿ ವ್ಯವಹಾರ ನಡೆಸಿದ್ದು ಲೆಕ್ಕಪರಿಶೋಧನಾ ವರ್ಗೀಕರಣ ‘ಎ’ ತರಗತಿ ಗಳಿಸಿದೆ ಎಂದರು. ಸಂಘದ ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ ನಿದೇಶಕರಾದ ನರಸಿಂಹ ಪೂಜಾರಿ, ದೇವಪ್ರಸಾದ್ ಕೆಂಪುಗುಡ್ಡೆ, ಮಮತಾ ಡಿ.ಪೂಂಜ, ಪದ್ಮಿನಿ ವಿ.ಶೆಟ್ಟಿ, ರಾಜೇಶ್ ಶೆಟ್ಟಿ, ಪ್ರಭಾಕರ ದೇವಾಡಿಗ, ರಾಮ ನಾÊಕ್, ನಂಜುAಡ ಆರ್.ಕೆ.ಮುಖ್ಯ ಅತಿಥಿಗಳಾಗಿದ್ದರು.
ಸಂಘದ ನಿರ್ದೇಶಕ ಗಂಗಾಧರ ವಿ. ಶೆಟ್ಟಿ ಸ್ವಾಗತಿಸಿದರು, ಆಡಳಿತ ನಿದೇಶಕ ಸಂತೋಷ್ ಕುಮಾರ್ ಶೆಟ್ಟಿ ಪ್ರಸ್ತಾವಿಸಿದರು. ವ್ಯವಸ್ಥಾಪಕ ಚಂದ್ರಕಾAತ ಶೆಟ್ಟಿ ವರದಿ ಮಂಡಿಸಿದರು. ಅತಿಕಾರಿಬೆಟ್ಟು ಗ್ರಾಪಂ ಉಪಾಧ್ಯಕ್ಷ ಮನೋಹರ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿ, ಸಂಘದ ನಿರ್ದೇಶಕ ಅಶೋಕ್ ಕುಮಾರ್ ಚಿತ್ರಾಪು ವಂದಿಸಿದರು.



Related posts

ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ನೂತನ ಮೊಕ್ತೆಸರರುಗಳು

Mumbai News Desk

ಹಿರಿಯ ಸಮಾಜ ಬಂಧುಗಳ ನಿಸ್ವಾರ್ಥ ಸೇವೆಯೇ ಸಂಘದ ಬೆಳವಣಿಗೆಗೆ ಅಡಿಪಾಯ – ಮೋಹನ್ ದಾಸ್ ಹೆಜ್ಮಾಡಿ

Mumbai News Desk

ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್ ನ 16ನೇ ವರ್ಷದ ವಾರ್ಷಿಕೋತ್ಸವ

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಇಂದಿನಿಂದ ಮಾ. 5ರ ತನಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Mumbai News Desk

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಹೆತ್ತವರು ಮತ್ತು ಮಕ್ಕಳಿಗೆ ಉಪಯುಕ್ತ ಮಾಹಿತಿ ಇರುವ ಕೈ ಪಿಡಿ ಬಿಡುಗಡೆ

Mumbai News Desk

ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಅನಂದ ಶೆಟ್ಟಿ ಎಕ್ಕಾರ್ ಕುಟುಂಬಿಕರಿಂದ ಡಕ್ಕೆಬಲಿ ಸೇವೆ

Mumbai News Desk