30 C
Mumbai
April 24, 2026
Mumbai News Kannada
ಪ್ರಕಟಣೆ

ಸೆ.20 : ಮಾತೃಭೂಮಿ ಕೋ -ಆಪರೇಟಿವ್ ಕ್ರೆಡಿಟ್ ಸೊಸೈಟಿ ಇದರ 37ನೇ ವಾರ್ಷಿಕ ಮಹಾಸಭೆ





ಮುಂಬೈ, ಮಾತೃಭೂಮಿ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಇದರ 37ನೇ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ 20 ರಂದು ಶನಿವಾರ ಬೆಳಿಗ್ಗೆ 10.30ಕ್ಕೆ ಕುರ್ಲಾ ಪೂರ್ವದ ಬಂಟರ ಭವನ ರಾಧಾಬಾಯಿ ಭಂಡಾರ ಸಭಾಗೃಹದಲ್ಲಿ ಮಾತೃಭೂಮಿ ಸೊಸೈಟಿ ಕಾರ್ಯಾಧ್ಯಕ್ಷರಾಗಿರುವ ಉಳ್ತೂರು ಮೋಹನದಾಸ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಅಂದಿನ ಮಹಾಸಭೆಯಲ್ಲಿ ಬಂಟರ ಸಂಘದ ಅಧ್ಯಕ್ಷ ಹಾಗೂ ಮಾತೃಭೂಮಿ ಸೊಸೈಟಿ ನಿರ್ದೇಶಕರಾದ ಪ್ರವೀಣ್ ಭೋಜ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಬಾಂಬೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಅಡ್ವೊಕೇಟ್ ಡಿ. ಕೆ. ಶೆಟ್ಟಿ, ಮಾತೃಭೂಮಿಯ ಉಪಕಾರ್ಯಾಧ್ಯಕ್ಷರಾದ ಡಾ. ಆರ್.ಕೆ. ಶೆಟ್ಟಿ, ಗೌರವ ಕಾರ್ಯದರ್ಶಿ ಕಿಶೋರ್ ಕುಮಾರ್ ಕುತ್ಯಾರು, ಗೌರವ ಖಜಾಂಚಿ ಸಿಎ ಹರೀಶ್ ಡಿ. ಶೆಟ್ಟಿ, ನಿರ್ದೇಶಕರಾದ ಮಹೇಶ್ ಎಸ್. ಶೆಟ್ಟಿ, ಶಶಿಧರ್ ಕೆ. ಶೆಟ್ಟಿ ಇನ್ನಂಜೆ, ಸಿಎ, ಜಗದೀಶ್ ಬಿ. ಶೆಟ್ಟಿ, ಸುನಂದಾ ಡಿ. ಶೆಟ್ಟಿ, ಸಿಎ, ರಾಜೇಶ್ ಜಿ. ಶೆಟ್ಟಿ, ಮಾತೃಭೂಮಿಯ ಸಲಹಾ ಸಮಿತಿ ಸದಸ್ಯರು, ಮಾಜಿ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

ಮಾತೃಭೂಮಿ ಸಂಸ್ಥೆಯು ಮುಂಬೈಯ ಆರ್ಥಿಕ ಕೋ-ಆಪರೇಟಿವ್ ಸೊಸೈಟಿಗಳಲ್ಲಿ ತಾನು ಸಾಧಿಸಿದ ಸ್ಥಾನಮಾನದಿಂದ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗುತ್ತ ಜನಮನ ಗೆದ್ದಿದೆ. ಸಂಸ್ಥೆಯನ್ನು ಆರ್ಥಿಕವಾಗಿ ಶಕ್ತಿಗೊಳಿಸಿ, ಅದರ ಅಭಿವೃದ್ದಿಗೆ ಕಾರಣರಾದ ಸಂಸ್ಥೆಯ ಸ್ಥಾಪನೆಯಿಂದ ಇಂದಿನವರೆಗಿನ ಕಾರ್ಯಾಧ್ಯಕ್ಷರು, ಆಡಳಿತ ನಿರ್ದೇಶಕರು ಹಾಗೂ ಸಲಹಾ ಸಮಿತಿಯ ಸದಸ್ಯರ ಸೇವೆ ಮರೆಯುವಂತಿಲ್ಲ.

ಮಾತೃಭೂಮಿಯ ಸ್ಥಾಪಕ ಕಾರ್ಯಾಧ್ಯಕ್ಷರಾಗಿದ್ದ ದಿವಂಗತ ಕೆ. ಶೆಟ್ಟಿ, ಆನಂತರ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಭಜಂಗ ಎಂ. ಶೆಟ್ಟಿ, ದಿವಂಗತ ಸತ್ಯರಾಮ ಶೆಟ್ಟಿ ಕಡಂದಲೆ, ಶರತ್ ರಾಮ್ ಜಿ. ಶೆಟ್ಟಿ, ಕೆ.ಡಿ. ಶೆಟ್ಟಿ, ಸಿಎ ಶಂಕರ್ ಶೆಟ್ಟಿ, ರತ್ನಾಕರ್ ಶೆಟ್ಟಿ ಮುಂಡೆಕಾರು, ಪ್ರಸ್ತುತ ಕಾರ್ಯಾಧ್ಯಕ್ಷರಾಗಿರುವ ಉಳ್ತೂರು ಮೋಹನದಾಸ್ ಶೆಟ್ಟಿ ಇವರ ಅದೆಮಾತು ಉತ್ಸಾಹ, ಪರಿಶ್ರಮದಿಂದ ಅಂದು ಸ್ಥಾಪಿಸಲಾದ ಈ ಸಂಸ್ಥೆಯು 1.19 ಲಕ್ಷದ ಸ್ಥಿರ ಷೇರು ಬಂಡವಾಳ ಮತ್ತು 612 ಸದಸ್ಯರಿಂದ ಪ್ರಾರಂಭಗೊಂಡು 2025 ಮಾರ್ಚ್ 31ರ ಲೆಕ್ಕಪರಿಶೋಧಕರ ವರದಿಯಂತೆ ಶೇರು ಬಂಡವಾಳ 25.61 ಕೋಟಿ, ಒಟ್ಟು ಸಂಗ್ರಹ ರೂ. 37.71 ಕೋಟಿ, ಒಟ್ಟು ಠೇವಣಿ ರೂ. 170.20 ಕೋಟಿ, ಒಟ್ಟು ಸ್ಥಾವರ ಹಾಗೂ ಮುಂಗಡ ರೂ. 189.93 ಕೋಟಿ, ನಿವ್ವಳ ಮೌಲ್ಯ ರೂ. 60.13 ಕೋಟಿಗೆ ತಲುಪಿದೆ. ಮಾತೃಭೂಮಿ ಸಂಸ್ಥೆಯ ಕಾರ್ಯವ್ಯಾಪ್ತಿ ಮುಂಬೈ ಮಹಾನಗರ ಹಾಗೂ ಉಪನಗರದ ಸಕಿನಾಕಾ, ಥಾಣೆ, ಸ್ಥಾಯಿ, ವಾಶಿ, ಕುರ್ಲಾ (ಪೂ), ಪುಣೆ, ನಾಸಿಕ್, ರಾಯಗಡ ಜಿಲ್ಲೆಗಳಿಗೂ ವಿಸ್ತರಿಸಿದೆ.

ಆಡಳಿತ ಮಂಡಳಿಯ ನಿರ್ಧಾರದ ಪ್ರಕಾರ, ಡಿವಿಡೆಂಡ್ ಅನ್ನು ಷೇರುದಾರರ ವಿಳಾಸಕ್ಕೆ ಕಳುಹಿಸದೆ ನೇರವಾಗಿ ಷೇರುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಡಿವಿಡೆಂಡ್ ಪಡೆಯಲು ಷೇರುದಾರರು ತಮ್ಮ KYC ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಕಡ್ಡಾಯವಾಗಿ ನವೀಕರಿಸಲು ವೆಬ್‌ಸೈಟ್: www.matrubhumisociety.com ಮೂಲಕ ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಮೊಬೈಲ್ ಸಂಖ್ಯೆ 7400187906 / 8828800735ನ್ನು ಸಂಪರ್ಕಿಸಲು ಕೋರಲಾಗಿದೆ.



Related posts

ಡಿ. 24ರಂದು ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನ (ರಿ) ಮುಂಬೈಯ 26ನೇ ವಾರ್ಷಿಕ ಉತ್ಸವ ಸಂಭ್ರಮ

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್, ಮುಂಬಯಿ, ಸೆ 16: ಶ್ರೀ ವಿಶ್ವಕರ್ಮ ಮಹೋತ್ಸವ.

Mumbai News Desk

ಡಿ. 17ರಂದು  ಪೊವಾಯಿ  ವಿದೂಶಿ ಗೀತಾ ವೇದ್ (ಸಾಲ್ಯಾನ್) ರ ನಟನಾ ನೃತ್ಯ ಅಕಾಡೆಮಿಯ 11ನೇ ವಾರ್ಷಿಕೋತ್ಸವ

Mumbai News Desk

ಮುಂಬೈ: ಯಕ್ಷಗಾನದ ಕಂಪನ್ನು ಪಸರಿಸುತ್ತಿರುವ ‘ಯಕ್ಷಪ್ರಿಯ ಬಳಗ’; ಫೆ. 14ರಂದು ಯಕ್ಷನವಮಿ ಸಂಭ್ರಮ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ಮಾ. 9ರಂದು ಮೊಗವೀರ ಮಾಸಿಕದ 85ರ ಸಂಭ್ರಮ

Mumbai News Desk

ಬಂಟರ ಸಂಘ ಮುಂಬಯಿ : ಎ. 18 ರಂದು ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ವತಿಯಿಂದ  ಅರೋಗ್ಯ ಉಪನ್ಯಾಸ

Mumbai News Desk