July 23, 2026
Mumbai News Kannada
ಪ್ರಕಟಣೆ

ಸೆ. 22 ರಿಂದ ಅ. 2 ರ ವರೆಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ತಾನ – 48ನೇ ವರ್ಷದ ನವರಾತ್ರಿ ಮಹೋತ್ಸವ 2025







ಮುಂಬಯಿ: ತಾನಾಜಿ ನಗರ, ಕುರಾರ್ ಗ್ರಾಮ, ಮಲಾಡ್ (ಪೂ), ಮುಂಬಯಿ–400097 ರಲ್ಲಿ ನೆಲೆಸಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ತಾನದಲ್ಲಿ ಸಮಿತಿ ವತಿಯಿಂದ 48ನೇ ವರ್ಷದ ನವರಾತ್ರಿ ದಸರಾ ಮಹೋತ್ಸವವು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ವಿಜೃಂಭಣೆಯಿಂದ ಜರುಗಲಿದೆ.

ಪ್ರತಿದಿನ ಬೆಳಗ್ಗೆ 8.00ಕ್ಕೆ ಮಹಾಪೂಜೆ, ಮಧ್ಯಾಹ್ನ 12.00ಕ್ಕೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ, ಸಂಜೆ ಭಜನೆ, ಗಾನವಿನೋದ, ಕುಂಕುಮಾರ್ಚನೆ, ಮಹಾನೈವೇದ್ಯ, ಪ್ರಸಾದ ವಿತರಣೆ ನಡೆಯಲಿದೆ.

ಈ ಅವಧಿಯಲ್ಲಿ ಆರತಿ ದುರ್ಗಾ ಪೂಜೆ, ಮಹಿಷಾಸುರಮರ್ಧಿನಿ ಪೂಜೆ, ಚಂಡಿಕಾ ಹೋಮ, ಕುಮಾರಿ ದುರ್ಗಾ ಕಲ್ಯಾಣ, ಅಂಬಿಕಾ ದುರ್ಗಾ ಕಲ್ಯಾಣ, ಕಾಳಿಕಾಂಬಾ ಪೂಜೆ, ಮಹಾಸರಸ್ವತಿ ಗೀತೆ ಕಲ್ಯಾಣ, ಮಹಾಲಕ್ಷ್ಮಿ ಕಲ್ಯಾಣ ಹಾಗೂ ದುರ್ಗಾಪರಮೇಶ್ವರಿ ಕಲ್ಯಾಣ ಸೇರಿದಂತೆ ವೈವಿಧ್ಯಮಯ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಅಕ್ಟೋಬರ್ 1 ರಂದು ಮಹಾಪೂಜೆಯೊಂದಿಗೆ ವಿಶೇಷ ಅನ್ನಸಂತರ್ಪಣೆ, ಹಾಗೂ ಅಕ್ಟೋಬರ್ 2 ರಂದು ವಿಜಯದಶಮಿಯಂದು ರಾತ್ರಿ 8 ಗಂಟೆಗೆ ರಂಗಪೂಜೆ ಜರುಗಲಿದೆ.

ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಶಂಕರನಾರಾಯಣ ತಂತ್ರಿ, ಡೊಂಬಿವಲಿ ಮತ್ತು ಮಂದಿರದ ಪ್ರಧಾನ ಅರ್ಚಕರಾದ ಶ್ರೀ ರಾಘವೇಂದ್ರ ಭಟ್ ಸೂಡಾ ಇವರ ಪೌರೋಹಿತ್ಯದಲ್ಲಿ ಜರುಗಲಿದೆ.

ಸಮಿತಿಯ ಪದಾಧಿಕಾರಿಗಳು :

ಅಧ್ಯಕ್ಷರು: ಶ್ರೀ ರಘುನಾಥ್ ಕೆ. ಕೊಟ್ಟಾರಿ – 📱 9892748470

ಗೌ. ಪ್ರ. ಕಾರ್ಯದರ್ಶಿ: ಶ್ರೀ ಸೋಮಪ್ಪ ಬಿ. ಕೊಟ್ಯಾನ್ – 📱 8976549430

ಗೌ. ಕೊಶಾಧಿಕಾರಿ: ಶ್ರೀ ಬಾಬು ಎಮ್ . ಸುವರ್ಣ – 📱 9324567720

ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು – ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ



Related posts

ಮೀರಾಗಾಂವ್: ಜ.1ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk

ಅ. 24ರಂದು ಮಾಲಾಡ್ ಪೂರ್ವ  ಓಂ ಶ್ರೀ ಸಾಯಿ ದುರ್ಗಾ ನಿತ್ಯಾನಂದ ಟ್ರಸ್ಟ್  ನವರಾತ್ರಿ ಪೂಜೆ 

Chandrahas

ಏ. 12 ರಿಂದ 21 ರ ವರಗೆ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ 62 ನೇ ವಾರ್ಷಿಕ ಮಹೋತ್ಸವ

Mumbai News Desk

ಫೆ. 11 ರಂದು ಜಗಜ್ಯೋತಿ ಕಲಾವೃಂದ (ರಿ.) ಮುಂಬಯಿ 37ನೇ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ.

Mumbai News Desk

ಜಯ ಸಿ. ಸುವರ್ಣ ಅಭಿಮಾನಿಗಳು ಹಾಗೂ ಮುಂಬಯಿ ಬಿಲ್ಲವರಿಂದ ಎ. 25ರಂದು ಭಜನಾ ಮಂಡಳಿ ಉದ್ಘಾಟನೆ

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಇಂದಿನಿಂದ ಜಾತ್ರೆ, ಕುಂಭ ಮಹೋತ್ಸವ,.

Mumbai News Desk