32 C
Mumbai
March 7, 2026
Mumbai News Kannada
ತುಳುನಾಡು

ಶ್ರೀ ಬಪ್ಪನಾಡು ಸೌಹರ್ದ ಸಹಕಾರಿ ಸಂಘ(ನಿ)ಇದರ ವಾರ್ಷಿಕ ಮಹಾಸಭೆಯಲ್ಲಿ ಹರಿಶ್ಚಂದ್ರ ಪಿ. ಸಾಲಿಯಾನ್‌ರವರಿಗೆ ಸನ್ಮಾನ





ಸೌಹರ್ದ ಸಹಕಾರಿ ಸಂಘದ ಅಭಿವೃದ್ದಿಗೆ ಸಂಘದ ಸದಸ್ಯರು ಹಾಗೂ ಊರಿನ ನಮ್ಮ ಮಿತ್ರರು ಬಹಳಷ್ಟು ಸಹಾಯ ಸಹಕಾರವನ್ನು ಕೊಟ್ಟು ಸಂಘದ ವ್ಯವಹಾರವು ಒಳ್ಳೆಯ ರೀತಿಯಿಂದ ನಡೆಯುವಂತೆ ೧೫ವರ್ಷಗಳಿಂದ ನಮ್ಮೊಟ್ಟಿಗೆ ಇದ್ದು ೧೫ ವರ್ಷದ ಈ ಮಹಾಸಭೆಯಲ್ಲಿ ನಮ್ಮ ಸಂಘಕ್ಕೆ ಬೇಕಾಗುವ ನಿವೇಶನ ಹಾಗೂ ಸ್ವಂತ ಕಟ್ಟಡವನ್ನು ನಿರ್ಮಾಣ ಮಾಡುವಂತಹ ಯೋಜನೆಯೂ ನಮ್ಮಲ್ಲಿದೆ. ಇದಕ್ಕೆ ಎಲ್ಲಾ ಸದಸ್ಯರು ಸಹಕರಿಸಬೇಕೆಂದು ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್‌ರವರು ಹೇಳಿದರು.
ಈ ಮಹಾಸಭೆಯಲ್ಲಿ ಸಂಘದ ಸ್ಥಾಪಕ ಸದಸ್ಯರು ಹಾಗೂ ಇತರ ರಂಗದಲ್ಲಿ ಸಾಧನೆ ಮಾಡಿದ ಮೂವÀರಿಗೆ ಸನ್ಮಾನ ಮಾಡಲಾಯಿತು. ಇದರಲ್ಲಿ ಮೂಲ್ಕಿಯ ಸಾಹಿತಿ ಸಮಾಜ ಸೇವಕ ಜ್ಯೋತಿಷರಾದ ಹರಿಶ್ಚಂದ್ರ ಪಿ ಸಾಲಿಯಾನ್‌ರವರಿಗೆ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಹರಿಶ್ಚಂದ್ರ ಪಿ ಸಾಲಿಯಾನ್‌ರವರು ಮಾತನಾಡಿ ೧೫ ವರ್ಷದ ಮೊದಲು ಈ ಸಂಘ ಸ್ಥಾಪನೆಯಾಗುವಾಗ ಬಹಳಷ್ಟು ಜನ ಸದಸ್ಯರಾಗಿ ಸಂಘಕ್ಕೆ ಪ್ರೋತ್ಸಾಹ ನೀಡಿದ್ದಾರೆ. ಈ ದಿನ ಇ-ಸ್ಟಾಂಪ್ ಸೌಲಭ್ಯವನ್ನು ಸಂಘದ ವತಿಯಿಂದ ಆರಂಭ ಮಾಡಿರುವುದರಿಂದ ಜನರಿಗೆ ಪ್ರಯೋಜನವಾಗಿದೆ. ಸಂಘವು ನಿರಂತರ ಪ್ರಗತಿಯನ್ನು ಕಂಡು ಸಂಘಕ್ಕೆ ಸ್ವಂತ ಕಟ್ಟಡವನ್ನು ಅದಷ್ಟು ಬೇಗ ಮಾಡಲು ನಾವೆಲ್ಲರೂ ಪ್ರೋತ್ಸಾಹಿಸಬೇಕೆಂದು ಹೇಳಿದರು. ಇವರೊಂದಿಗೆ ನಿವೃತ ಗ್ರಂಥಪಾಲಕ ಮೋಹನ್ ರಾವ್ ಮತ್ತು ಯೋಗಪಟು ಜಯಮುದ್ದು ಶೆಟ್ಟಿ ಇವರಿಗೆ ಸನ್ಮಾನ ಮಾಡಲಾಯಿತು. ಸಂಘದ ಉಪಾಧ್ಯಕ್ಷರಾದ ಶ್ಯಾಮ್ ಪ್ರಸಾದ್ ನಿರ್ದೇಶಕರಾದ ಶ್ರೀಮತಿ ಕಸ್ತೂರಿ ಪಂಜ, ಸಂಪತ್ ಕಾರ್ನಾಡ್, ಜಯಾನಂದ ರಾವ್, ಶೈಲೇಶ್ ಕುಮಾರ್, ರಮಾನಾಥ ಪೈ, ಅರುಣ್ ಭಂಡಾರಿ, ಶ್ರೀಮತಿ ಶಕುಂತಲಾ ಬಂಗೇರ ಉಪಸ್ಥಿತರಿದ್ದರು. ನವೀನ್ ಕುಮಾರ್ ಮುಖ್ಯ ಕಾರ್ಯಾನಿರ್ವಾಹಣಾಧಿಕಾರಿ ಸ್ವಾಗತಿಸಿ, ಕೆ ಉಮೇಶ್ ಪಂಜ ವಂದಿಸಿದರು.



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು: ಮೂರನೇ ಸ್ಥನ್ಯಪಾನ ಕೊಠಡಿ ಉದ್ಘಾಟನೆ

Mumbai News Desk

ಮೂಲ್ಕಿ ಹೊಸ ಅಂಗಣ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ಆದಿಕಿಲ್ಲಾಡಿ ಶ್ರೀ ಕೊಡ್ದಬ್ಬು ದೈವಸ್ಥಾನದ ಗುರಿಕಾರರಾದ ವಿ ಎಸ್ ವಸಂತ್ ಗುರಿಕಾರಯವರಿಗೆ ಸನ್ಮಾನ

Mumbai News Desk

ವಿಷಮುಕ್ತ ಆಹಾರಕ್ಕಾಗಿ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳೋಣ – ಕೊಂಡೆವೂರು ಶ್ರೀಗಳು.

Mumbai News Desk

ಮಂಗಳೂರು ಕುಲಾಲ ಭವನ ಉದ್ಘಾಟನೆ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ, ಸಿಎಂ ಆಗಮನಕ್ಕೆ ಮನವಿ

Mumbai News Desk

ಕಾಪು ನವದುರ್ಗಾ ಲೇಖನ ಯಜ್ಞ ಸಮಿತಿ ಉದ್ಘಾಟನಾ ಕಾರ್ಯಕ್ರಮದ ತುಣುಕುಗಳು.

Mumbai News Desk

ತುಳು ರಂಗಭೂಮಿಯಲ್ಲಿ ಐತಿಹಾಸಿಕ ಮೈಲಿಗಲ್ಲು:ಶ್ರೀಮತಿ ಲಾವಣ್ಯ ವಿಶ್ವಾಸ್ ದಾಸ್ ನಿರ್ದೇಶನದ “ಜೋಡು ಜೀಟಿಗೆ “ 100ನೇ ಪ್ರದರ್ಶನ – 100 ಕಲಾವಿದರಿರುವ ಏಕೈಕ ತಂಡದ ಅಪೂರ್ವ ಸಾಧನೆ

Mumbai News Desk