30 C
Mumbai
April 24, 2026
Mumbai News Kannada
ಪ್ರಕಟಣೆ

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಗುರು ಸಂದೇಶ ಸಾಮರಸ್ಯ ಜಾಥಾ 2025..





​ಉಡುಪಿ: ‘ಒಂದೇ ಜಾತಿ, ಒಂದೇ ಮತ, ಒಬ್ಬರೇ ದೇವರು’ ಎಂಬ ವಿಶ್ವಗುರುಗಳ ಸಾರ್ವಕಾಲಿಕ ಸತ್ಯ ಸಂದೇಶವನ್ನು ಸಾರಿದ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ರಾಂತಿಯ ಹರಿಕಾರ, ಸಮಾಜ ಸುಧಾರಣೆಯ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಅಂಗವಾಗಿ ‘ಗುರು ಸಂದೇಶ ಸಾಮರಸ್ಯ ಜಾಥಾ 2025’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ ಪ್ರವೀಣ್ ಪೂಜಾರಿ ತಿಳಿಸಿದರು.

​ಉಡುಪಿ ಜಿಲ್ಲಾ ಯುವ ವೇದಿಕೆಯ ನೇತೃತ್ವದಲ್ಲಿ ಮತ್ತು ಜಿಲ್ಲೆಯ ಎಲ್ಲ ಬಿಲ್ಲವ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಆದಿತ್ಯವಾರ ಮಧ್ಯಾಹ್ನ 2:00 ಗಂಟೆಗೆ ಈ ಜಾಥಾ ನಡೆಯಲಿದೆ. ಬನ್ನಂಜೆ ಜಯಲಕ್ಷ್ಮಿ ಎದುರುಗಡೆಯಿಂದ ಜಾಥಾ ಪ್ರಾರಂಭವಾಗಲಿದ್ದು, ದಕ್ಷ ಮಹಿಳಾ ಪೊಲೀಸ್ ಅಧಿಕಾರಿ ಶ್ರೀಮತಿ ರೀನಾ ಸುವರ್ಣ ಮತ್ತು ಕರಾವಳಿಯ ನಿಷ್ಠಾವಂತ ದೈವಾರಾಧಕರಾದ ದೈವ ನರ್ತಕ ಶ್ರೀ ರವಿ ಪಡ್ಡಂ ಅವರು ಗುರು ಸಂದೇಶ ಸಾಮರಸ್ಯ ರಥಕ್ಕೆ ಚಾಲನೆ ನೀಡಲಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

​ಈ ಕಾರ್ಯಕ್ರಮದಲ್ಲಿ ಸಂಸದರು, ಶಾಸಕರು, ರಾಜಕೀಯ ನಾಯಕರು, ಜನಪ್ರತಿನಿಧಿಗಳು, ಸಮಾಜದ ಮುಖಂಡರು ಮತ್ತು ಉಡುಪಿ ಪರಿಸರದ ಎಲ್ಲ ಬಿಲ್ಲವ ಸಂಘ-ಸಂಸ್ಥೆಗಳ ಅಧ್ಯಕ್ಷರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

​ಜಾಥಾವು ಬನ್ನಂಜೆ ಜಯಲಕ್ಷ್ಮಿ ಎದುರುಗಡೆಯಿಂದ ಹೊರಟು ಸಿಟಿ ಬಸ್ ನಿಲ್ದಾಣ, ಕೋರ್ಟ್ ರಸ್ತೆ, ಮಿಷನ್ ಕಾಂಪೌಂಡ್, ಮಹಿಷಮರ್ದಿನಿ ದೇವಸ್ಥಾನ, ಕೊರಂಗ್ರಪಾಡಿ, ಮಾರ್ಪಳ್ಳಿ, ಕುಕ್ಕಿಕಟ್ಟೆ, ಅಲೆವೂರು, ರಾಂಪುರ, ದೆಂದೂರ್‌ ಕಟ್ಟೆ, ಮಣಿಪುರ ಮಾರ್ಗವಾಗಿ ಕಟಪಾಡಿಯ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಗುರುಪೂಜೆಯೊಂದಿಗೆ ಸಂಪನ್ನಗೊಳ್ಳಲಿದೆ.

​ಈ ಸೌಹಾರ್ದಯುತ ಕಾರ್ಯಕ್ರಮದಲ್ಲಿ ಬಿಲ್ಲವ ಸಮಾಜದ ಬಂಧುಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಮತ್ತು ನಾರಾಯಣ ಗುರುಗಳ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರು ಸಂದೇಶ ಸಾಮರಸ್ಯ ಜಾಥಾವನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಪ್ರವೀಣ್ ಪೂಜಾರಿ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಸುಧಾಕರ್ ಡಿ. ಅಮೀನ್, ದಿವಾಕರ್ ಸನಿಲ್, ವಿಜಯ್ ಉದ್ಯಾವರ, ಮಹೇಶ್ ಬಂಗೇರ ಹಾಗೂ ಇತರರು ಉಪಸ್ಥಿತರಿದ್ದರು.



Related posts

ಜೂ. 23ಕ್ಕೆ ಸಾರಂತಾಯ ಗರೋಡಿ, ಉಲ್ಲಾಯ ದೈವಸ್ಥಾನ, ಸಸಿಹಿತ್ಲು, ಇದರ ಜೀರ್ಣೋದ್ಧಾರದ ಸಭೆ,

Mumbai News Desk

ಸಾಂತಾಕ್ರೂಸ್ :  ಶ್ರೀ ಮಂತ್ರ ದೇವಿ ದೇವಸ್ಥಾನದಲ್ಲಿ ಅ 3 ರಿಂದ 11 ವರೆಗೆ ನವರಾತ್ರಿ ಉತ್ಸವ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಡಿ 7ರಂದು “ಕುರ್ಲಾ ಬಂಟರ ಭವನದಲ್ಲಿ ” ವಿಶ್ವಬಂಟರ ಸಮಾಗಮ “ಜಾಗತಿಕ ಮಟ್ಟದ ಕಾರ್ಯಕ್ರಮದ ವಿಶೇಷ ಸಭೆ.

Mumbai News Desk

ಕರ್ನಿರೆ ಶ್ರೀ ದೈವರಾಜ ಕೋರ್ದಬ್ಬು ದೇವಸ್ಥಾನ: ಮಾರ್ಚ್ 25 ರಿಂದ 29 ರವರೆಗೆ ಪುನರ್ ಪ್ರತಿಷ್ಠೆ ಮತ್ತು ನೇಮೋತ್ಸವ

Mumbai News Desk

ಫೆ.15 ರಂದು ಶಹಾಡ್‌ನ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ 24 ಗಂಟೆಗಳ ಅಖಂಡ ಭಜನೆ

Mumbai News Desk

ಜಗಜ್ಯೋತಿ ಕಲಾವೃಂದದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಕಥಾ ಮತ್ತು ಕವಿತಾ ಸ್ಪರ್ಧೆ – 2025

Mumbai News Desk