
ಜೋಗೇಶ್ವರಿ ಪೂರ್ವ ಸ್ಕಾಟರ್ಸ್ ಕೊಲನಿ ರೋಡ್, ಪ್ರೇಮ ನಗರ ಇಲ್ಲಿ, ಭಕ್ತಾದಿಗಳ ಶ್ರದ್ಧಾ ಭಕ್ತಿಯ ಕೇಂದ್ರವಾಗಿರುವ ಶ್ರೀ ಮಹಾಕಾಳಿ ಮಂದಿರದಲ್ಲಿ 61ನೇ ಸ್ವರ್ಣ ಮಹೋತ್ಸವ ದಸರಾ ಕಾರ್ಯಕ್ರಮಗಳು ಸೆಪ್ಟೆಂಬರ್ 22ರಿಂದ ಮೊದಲ್ಗೊಂಡು ಅಕ್ಟೋಬರ್ 2ರ ತನಕ ವಿವಿಧ ಸೇವೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ಮಹಾಕಾಳಿ ಅಮ್ಮನವರ ಪ್ರಸಾದ ಸ್ವೀಕರಿಸುವಂತೆ ಗೌರವ ಅಧ್ಯಕ್ಷ ಸುರೇಂದ್ರ ಟಿ ಪೂಜಾರಿ, ಗೌರವ ಪ್ರಧಾನ ಕಾರ್ಯದರ್ಶಿ ವಾರಿಜಾ ಏ ಕೋಟ್ಯಾನ್, ಗೌರವ ಕೋಶಾಧಿಕಾರಿ ದಿನೇಶ್ ಜಿ ಸುವರ್ಣ ಹಾಗೂ ಎಲ್ಲಾ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.




