31 C
Mumbai
March 6, 2026
Mumbai News Kannada
ಪ್ರಕಟಣೆ

ಶ್ರೀ ಚಕ್ರಪೀಠ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ





ಉಡುಪಿ, ಸೆಪ್ಟೆಂಬರ್ 22: ಉಡುಪಿಯ ದೊಡ್ಡಣ್ಣ ಗುಡ್ಡೆಯಲ್ಲಿರುವ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ವತಿಯಿಂದ ಶರನ್ನವರಾತ್ರಿ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿ ಅವರ ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಈ ಮಹೋತ್ಸವದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ನಿರಂತರ ಅನ್ನಸಂತರ್ಪಣೆ ನಡೆಯಲಿದೆ.

ಧಾರ್ಮಿಕ ಕಾರ್ಯಕ್ರಮಗಳು

​ಮಹೋತ್ಸವದ ಅಂಗವಾಗಿ ಪ್ರತಿದಿನ ಭಕ್ತರ ಸೇವಾರೂಪದಲ್ಲಿ ಜೋಡಿ ಚಂಡಿಕಾಯಾಗ, ಶ್ರೀ ದುರ್ಗಾ ನಮಸ್ಕಾರ ಪೂಜೆ, ಸಹಸ್ರನಾಮ ಅರ್ಚನೆ, ರಂಗಪೂಜೆ, ದೀಪಾರಾಧನೆ, ತುಲಾಭಾರ ಸೇವೆ ಮತ್ತು ವಿದ್ಯಾರಂಭಗಳು ನೆರವೇರಲಿವೆ.

  • ಸೆಪ್ಟೆಂಬರ್ 24: ಶ್ರೀ ಕುಬೇರ ಚಿತ್ರಲೇಖ ಸಹಿತ ಮಹಾಲಕ್ಷ್ಮಿ ಸನ್ನಿಧಾನದಲ್ಲಿ ಲಕ್ಷ್ಮಿ ಸಹಸ್ರನಾಮ ಮಹಾಯಾಗ ನಡೆಯಲಿದೆ.
  • ಸೆಪ್ಟೆಂಬರ್ 27 (ಲಲಿತಾ ಪಂಚಮಿ): ಶ್ರೀ ಲಲಿತಾ ಸಹಸ್ರ ಕದಳೀ ಯಾಗ ನಡೆಯಲಿದೆ.
  • ಅಕ್ಟೋಬರ್ 2 (ವಿಜಯದಶಮಿ): ಸಾಮೂಹಿಕವಾಗಿ ತ್ರಿಶಕ್ತಿ ಮಹಾಯಾಗ, ಸಂಜೆ ಬಲಿ ಉತ್ಸವದ ಜೊತೆಗೆ ಆರಾಧನಾ ರಂಗಪೂಜಾ ಮಹೋತ್ಸವ, ಮಹಾ ಸಂಪ್ರೋಕ್ಷಣೆ ಮತ್ತು ಮಹಾ ಮಂತ್ರಾಕ್ಷತೆ ಸಂಪನ್ನಗೊಳ್ಳಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು

​ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಗಾನ, ನಾಟ್ಯ ಹಾಗೂ ನಾದಪ್ರಿಯರಾದ ಶ್ರೀ ದುರ್ಗಾ ಆದಿಶಕ್ತಿ ದೇವಿಗೆ ವಿವಿಧ ಕಲಾವಿದರಿಂದ ನಾಟ್ಯ ಸೇವೆ, ಸಂಗೀತ ಸೇವೆ ಮತ್ತು ನಾದ ಸೇವೆಗಳು ಸಮರ್ಪಿತವಾಗಲಿವೆ. ಈ ಬಗ್ಗೆ ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ಅವರು ಮಾಹಿತಿ ನೀಡಿದ್ದಾರೆ.



Related posts

ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ -ಜೂನ್ 8 ರಂದು ಉಡುಪಿಯಲ್ಲಿ ಜಸ್ಟಿಸ್ ಎನ್. ಸಂತೋಷ್ ಹೆಗ್ಡೆಯವರಿಗೆ ಪದ್ಮವಿಭೂಷಣ ಜಾರ್ಜ್ ಫೆರ್ನಾಂಡೀಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ – 2025 ಪ್ರದಾನ

Mumbai News Desk

ಜ. 30, ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಹಳದಿಕುಂಕುಮ ಕಾರ್ಯಕ್ರಮ.

Mumbai News Desk

ಮಾ. 23,  ತುಳು ಸಂಘ, ಬೋರಿವಲಿ, 13ನೇ ವಾರ್ಷಿಕೋತ್ಸವ,  ಸಾಂಸ್ಕೃತಿಕ ವೈಭವ, ನಾಟಕ ಪ್ರದರ್ಶನ

Mumbai News Desk

ಜ.13ಕ್ಕೆ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 63ನೇ ವಾರ್ಷಿಕ ದಿನಾಚರಣೆ

Mumbai News Desk

ಕಾಮೋಟೆ ಶ್ರೀ ದುರ್ಗಾಪರಮೇಶ್ವರಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ  ಜ 3 ರಂದು 6ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಂಡಲ ಮಹಾಪೂಜೆ

Mumbai News Desk

ಫೆ 10:ಮೀರಾ -ದಾಹಣು ಬಂಟ್ಸ್ ನ ಕ್ರೀಡೋತ್ಸವ 2024,

Mumbai News Desk