30 C
Mumbai
April 24, 2026
Mumbai News Kannada
ಪ್ರಕಟಣೆ

ಸೆ. 27, ಭಾಯಂದರ್ ಪೂರ್ವ: ಮೂಕಾಂಬಿಕಾ ಶಾಂತ ದುರ್ಗಾ ದೇವಿಯ ಶರನ್ನವರಾತ್ರಿ ಮಹಾಪೂಜೆ





ಭಾಯಂದರ್ ಪೂರ್ವದಲ್ಲಿರುವ ಶ್ರೀ ಮೂಕಾಂಬಿಕಾ ಶಾಂತ ದುರ್ಗಾ ದೇವಿಯ ಶರನ್ನವರಾತ್ರಿ ಮಹಾಪೂಜೆಯು ಪ್ರತಿವರ್ಷದಂತೆ ಈ ವರ್ಷವೂ ನಡೆಯಲಿದೆ. ಸುಂದರಿ ಶೆಟ್ಟಿ ಪರಿವಾರ, ಸಮಿತಿಯ ಸದಸ್ಯರು ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ, ಧರ್ಮಸೇವಕ ಶೇಖರ್ ಶೆಟ್ಟಿ ಅವರ ನೇತೃತ್ವದಲ್ಲಿ ಈ ಪೂಜಾ ಕಾರ್ಯಕ್ರಮ ಸನ್ನಿಧಾನದಲ್ಲಿ (ಜಿ-03, ನ್ಯೂ ಕೃಷ್ಣ ಪ್ಯಾಲೇಸ್, ನರೇಶ್ ಸ್ಟೀಲ್ ಸಮೀಪ, ಎಸ್.ವಿ. ರಸ್ತೆ, ಭಾಯಂದರ್ ಪೂರ್ವ) ಜರುಗಲಿದೆ.

ಪೂಜಾ ಕಾರ್ಯಕ್ರಮಗಳ ವಿವರ:

  • ಬೆಳಿಗ್ಗೆ 7.30ಕ್ಕೆ: ವನದುರ್ಗಾ ಹೋಮ
  • ಬೆಳಿಗ್ಗೆ 10.00ರಿಂದ: ಭಜನೆ
  • ಬೆಳಿಗ್ಗೆ 11.30ಕ್ಕೆ: ಪುಷ್ಪಾಲಂಕಾರ ಮತ್ತು ಶ್ರೀ ದೇವಿ ದರ್ಶನದೊಂದಿಗೆ ಮಂಗಳಾರತಿ
  • ಮಧ್ಯಾಹ್ನ 12.30ಕ್ಕೆ: ಮಹಾ ಪ್ರಸಾದ ಅನ್ನಸಂತರ್ಪಣೆ

ಸಂಜೆಯ ಕಾರ್ಯಕ್ರಮಗಳು:

  • ಸಂಜೆ 6.00ರಿಂದ: ಮಾತೆ ಶಾಂತ ದುರ್ಗೆಗೆ ಭಜನೆ
  • ಸಂಜೆ 7.00ಕ್ಕೆ: ಹೂವಿನ ಪೂಜೆ ಮತ್ತು ಮಂಗಳಾರತಿ
  • ರಾತ್ರಿ 8.00ರಿಂದ: ಅನ್ನಸಂತರ್ಪಣೆ

​ಈ ಪುಣ್ಯ ಕಾರ್ಯಕ್ರಮಕ್ಕೆ ತಮ್ಮ ಬಂಧು-ಮಿತ್ರರೊಂದಿಗೆ ಆಗಮಿಸಿ, ಶ್ರೀ ದೇವಿಯ ಅನುಗ್ರಹಕ್ಕೆ ಪಾತ್ರರಾಗಿ ತೀರ್ಥ ಪ್ರಸಾದ ಮತ್ತು ಅನ್ನ ಪ್ರಸಾದ ಸ್ವೀಕರಿಸಬೇಕೆಂದು ಧರ್ಮಸೇವಕ ಶೇಖರ್ ಶೆಟ್ಟಿ, ಸುಂದರಿ ಶೆಟ್ಟಿ ಪರಿವಾರ, ಶ್ರೀ ಮೂಕಾಂಬಿಕಾ ಶಾಂತ ದುರ್ಗಾ ಸೇವಾ ಸಮಿತಿ ಹಾಗೂ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ.



Related posts

ನವೆಂಬರ್ 23ರಿಂದ ಸತತ 17ನೇ ವರ್ಷದ ಮುಂಬಯಿ ಪ್ರವಾಸದಲ್ಲಿ ಕರಾವಳಿಯ ಪ್ರಸಿದ್ಧ ನಾಟಕ ತಂಡಕಿನ್ನಿಗೋಳಿ

Mumbai News Desk

ಮಾ. 9, ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ಮಹಿಳಾ ಸಂಪದ ಸಂಯೋಜನೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Mumbai News Desk

ನ.16 ರಂದು ಕರ್ನಾಟಕ ಸಂಘ, ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk

ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನ, ಅಸಲ್ಫಾ : ಜು. 29ರಂದು 38ನೇ ನಾಗರ ಪಂಚಮಿ ಹಾಗೂ ಅಶ್ಲೇಷ ಬಲಿ ಉತ್ಸವ

Mumbai News Desk

  ಜ 22 :  ಪುಣೆ  ಪಿಂಪ್ರೀ ಚಿಂಚ್ವಾಡ್ ಬಂಟರ ಸಂಘ ವತಿಯಿಂದ ವಿದ್ವಾನ್ ಕೈರಬೆಟ್ಟು ವಿಶ್ವನಾಥ್ ಭಟ್ ರಿಂದ  “ಸೀತಾರಾಮ ಕಲ್ಯಾಣ” ಹರಿಕಥೆ, ಶ್ರೀರಾಮ ದೇವರಿಗೆ ಮಹಾಪೂಜೆ .

Mumbai News Desk

ಆಗಸ್ಟ್ 3ರಂದು ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಬಾಲ್ಕೂಮ್ ಥಾಣೆ, ಆಶ್ರಯದಲ್ಲಿ ಮಂದಾರ್ತಿ ಮೇಳದ ಕಲಾವಿದರಿಂದ “ಜಗನ್ಮಾತೆ ಶ್ರೀ ವನದುರ್ಗಿ” ಯಕ್ಷಗಾನ ಪ್ರದರ್ಶನ

Mumbai News Desk