32 C
Mumbai
March 7, 2026
Mumbai News Kannada
ಸುದ್ದಿ

ಬೆಂಗಳೂರು – ಮುಂಬೈ ನಡುವೆ ಸೂಪರ್‌ಫಾಸ್ಟ್‌ ರೈಲು; ಗುಡ್‌ನ್ಯೂಸ್‌ ಕೊಟ್ಟ ಸಂಸದ ತೇಜಸ್ವಿ ಸೂರ್ಯ





ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಈ ಅನುಮೋದನೆಯಿಂದ ಎರಡೂ ನಗರಗಳ ನಾಗರಿಕರ 30 ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ‘ಬೆಂಗಳೂರು ಮತ್ತು ಮುಂಬೈ ನಡುವೆ ನಾವು ಶೀಘ್ರದಲ್ಲೇ ಸೂಪರ್‌ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದು, ಅವುಗಳ ನಿಲ್ದಾಣಗಳಲ್ಲಿನ ಸಾಮರ್ಥ್ಯದ ವಿಸ್ತರಣೆಯಿಂದಾಗಿ ಇದು ಈಗ ಸಾಧ್ಯವಾಗಿದೆ’ ಎಂದಿದ್ದಾರೆ ಎಂದು ತೇಜಸ್ವಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಮತ್ತು ಮುಂಬೈ ಭಾರತದ ಎರಡು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದರೂ, ಈ ಎರಡೂ ನಗರಗಳು ಕೇವಲ ಒಂದೇ ಒಂದು ರೈಲಿನಿಂದ ಸಂಪರ್ಕ ಹೊಂದಿದ್ದವು. ಆ ರೈಲು ಉದ್ಯಾನ ಎಕ್ಸ್‌ಪ್ರೆಸ್ ಆಗಿದ್ದು, ಈ ಪ್ರಯಾಣವನ್ನು ಪೂರ್ಣಗೊಳಿಸಲು 24 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿತ್ತು. ಇದು 30 ವರ್ಷಗಳಿಂದ ಬಾಕಿ ಉಳಿದಿದ್ದ ಬೇಡಿಕೆಯಾಗಿದೆ.

ಕಳೆದ ಮೂರು ದಶಕಗಳಲ್ಲಿ ಎರಡೂ ನಗರಗಳ ಬೆಳವಣಿಗೆಯ ಹೊರತಾಗಿಯೂ, ಬೆಂಗಳೂರು ಮತ್ತು ಮುಂಬೈ ನಡುವೆ ಕೇವಲ ಒಂದು ಸೂಪರ್‌ಫಾಸ್ಟ್ ರೈಲು ಮಾತ್ರ ಇತ್ತು. ಕಳೆದ ವರ್ಷವೊಂದರಲ್ಲೇ 26 ಲಕ್ಷಕ್ಕೂ ಹೆಚ್ಚು ಜನರು ಈ ಎರಡು ನಗರಗಳ ನಡುವೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಈ ಹೊಸ ಸೇವೆಯು ಲಕ್ಷಾಂತರ ನಾಗರಿಕರಿಗೆ ಪ್ರಯಾಣವನ್ನು ಹೆಚ್ಚು ಕೈಗೆಟುಕುವ ದರದಲ್ಲಿ ಅನುಕೂಲಕರವಾಗಿಸಲಿದೆ ಎಂದು ಹೇಳಿದ್ದಾರೆ.



Related posts

ಆಯೋದ್ಯ ಶ್ರೀರಾಮ ಮಂದಿರದಲ್ಲಿ ಹರೀಶ್ ಪೂಜಾರಿ ಅವರಿಂದ ಸೇಕ್ಸೋಪೋನ್ ವಾದನ

Mumbai News Desk

ಮೊದಲು ಕನ್ನಡಿಗರ ಕ್ಷಮೆ ಕೇಳಿ : ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ವಸಯಿಯ ಮೋಹಿತ್ ಆನಂದ ಪೂಜಾರಿಗೆ ಶೇ 86.50%

Mumbai News Desk

*ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ, ಸೇವಕರ್ತ ಪ್ರೇಮಾನಂದ ಕುಲಾಲ್ ವರಿಗೆ ಗೌರವ,

Mumbai News Desk

ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಹರಿಪ್ರಸಾದ್ ನಂದಳಿಕೆ ಅವರಿಗೆ   ಪ್ರಶಸ್ತಿ.

Mumbai News Desk

ಭಾರತ್ ಬ್ಯಾಂಕ್ ಬಗ್ಗೆ ತಪ್ಪು ಮಾಹಿತಿ ಪ್ರಕಟಿಸಿ, ವಿಷಾದ ವ್ಯಕ್ತ ಪಡಿಸಿದ ಇಂಗ್ಲಿಷ್ ಪತ್ರಿಕೆ

Mumbai News Desk