July 23, 2026
Mumbai News Kannada
ಸುದ್ದಿ

ತಮಿಳುನಾಡು : ನಟ-ರಾಜಕಾರಣಿ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 31 ಮಂದಿ ಬಲಿ, 40 ಜನರ ಸ್ಥಿತಿ ಚಿಂತಾಜನಕ







ತಮಿಳುನಾಡಿನ ಕರೂರ್‌ನಲ್ಲಿ ನಟ-ರಾಜಕಾರಣಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಸಮಾವೇಶದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 31 ಮಂದಿ ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ವಿಜಯ್ ತಡವಾಗಿ ಬಂದಿದ್ದರಿಂದ ಮತ್ತು ವಿಪರೀತ ಜನಸಂದಣಿಯಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ.

ತಮಿಳುನಾಡು ಆರೋಗ್ಯ ಸಚಿವ ಎಂ. ಸುಬ್ರಮಣಿಯನ್ ಅವರು ಸಾವಿನ ಸಂಖ್ಯೆಯನ್ನು ದೃಢಪಡಿಸಿದ್ದು, ಮೃತರರಲ್ಲಿ 6 ಮಕ್ಕಳು, 9 ಪುರುಷರು ಮತ್ತು 16 ಮಹಿಳೆಯರು ಸೇರಿದ್ದಾರೆ ಎಂದು ತಿಳಿಸಿದ್ದಾರೆ. ವಿಜಯ್ ಅವರ ರಾಜ್ಯಾದ್ಯಂತ ಪ್ರವಾಸದ ಭಾಗವಾಗಿ ಈ ರ‍್ಯಾಲಿಯನ್ನು ಆಯೋಜಿಸಲಾಗಿತ್ತು. ತಮ್ಮ ನೆಚ್ಚಿನ ನಾಯಕನನ್ನು ನೋಡಲು ಸುಮಾರು 30,000ಕ್ಕೂ ಹೆಚ್ಚು ಜನರು ಕರೂರ್‌ನಲ್ಲಿ ಸೇರಿದ್ದರು. ಆದರೆ, ವಿಜಯ್ ಕಾರ್ಯಕ್ರಮಕ್ಕೆ ತಡವಾಗಿ ಬಂದಿದ್ದರಿಂದ, ವಿಪರೀತ ಬಿಸಿಲು ಮತ್ತು ಜನಸಂದಣಿಯ ಕಾರಣದಿಂದಾಗಿ ಹಲವರು ಮೊದಲೇ ಅಸ್ವಸ್ಥಗೊಂಡು ಮೂರ್ಛೆ ಹೋಗಿದ್ದರು.

ಪರಿಸ್ಥಿತಿ ಕೈಮೀರುತ್ತಿದ್ದಂತೆ, ವಿಜಯ್ ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ, ನೆರವಿಗೆ ಧಾವಿಸುವಂತೆ ಪೊಲೀಸರಲ್ಲಿ ಮನವಿ ಮಾಡಿದರು. ವೇದಿಕೆಯಿಂದಲೇ ಜನರಿಗೆ ನೀರಿನ ಬಾಟಲಿಗಳನ್ನು ಎಸೆದು ಸಹಾಯ ಮಾಡಲು ಪ್ರಯತ್ನಿಸಿದರು. ಆದರೆ, ಇದೇ ವೇಳೆ ಕಾಲ್ತುಳಿತ ಸಂಭವಿಸಿದ್ದು, ನೂಕುನುಗ್ಗಲಿನಲ್ಲಿ ಸಿಲುಕಿ ಹಲವರು ಪ್ರಾಣ ಕಳೆದುಕೊಂಡರು. ಬೃಹತ್ ಜನಸ್ತೋಮದ ಕಾರಣ ಆಂಬುಲೆನ್ಸ್‌ಗಳು ಸಹ ಸ್ಥಳಕ್ಕೆ ತಲುಪಲು ಪರದಾಡುವಂತಾಯಿತು.

10 ಸಾವಿರ ಮಂದಿ ಸೇರುವ ನಿರೀಕ್ಷೆ ಇತ್ತು. ಹೀಗಾಗಿ ಪೊಲೀಸರಿಗೆ ಭದ್ರತೆ ನೀಡುವಂತೆ ವಿಜಯ್ ಕೇಳಿಕೊಂಡಿದ್ದರು. ಆದರೆ ಅಂದಾಜಿನ ಪ್ರಕಾರ ಸುಮಾರು 30,000 ಜನರು ರ‍್ಯಾಲಿಗೆ ಸೇರಿದ್ದು ಹೀಗಾಗಿ ಕಾಲ್ತುಳಿತ ಸಂಭವಿಸಿದೆ. ಇನ್ನು ಡಿಎಂಕೆ ಪಕ್ಷ ಈ ಕಾಲ್ತುಳಿತಕ್ಕೆ ವಿಜಯ್ ಅವರ ನಿರ್ಲಕ್ಷ್ಯಕ್ಕೆ ಕಾರಣ ಎಂದು ದೂಷಿಸಿದ್ದು, ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದೆ.



Related posts

ಬೊಯಿಸರ್ ನಿತ್ಯಾನಂದ ಸ್ವಾಮಿ ಮಂದಿರದ 14 ನೆಯ ವಾರ್ಷಿಕೋತ್ಸವ ಸಂಪನ್ನ

Mumbai News Desk

ಭಾರತ್ ಬ್ಯಾಂಕ್ ಗೆ ಅತ್ಯುತ್ತಮ ಮಾನವ ಸಂಪನ್ಮೂಲ ನಿರ್ವಹಣಾ ಪ್ರಶಸ್ತಿ ( Best HR Management Award )

Mumbai News Desk

ಭಾರತ ಮತ್ತು ಅಮೆರಿಕ ನಡುವಿನ ಐತಿಹಾಸಿಕ ವ್ಯಾಪಾರ ಒಪ್ಪಂದ 2026: ಸುಂಕ ಕಡಿತ ಮತ್ತು ಆರ್ಥಿಕ ಸಹಭಾಗಿತ್ವದ ಹೊಸ ಯುಗ

Mumbai News Desk

ವಿಶ್ವಕಪ್ ವಿಜೇತ ಕಬ್ಬಡ್ಡಿ ತಂಡದ ಆಟಗಾರ್ತಿ ಕು. ಧನಲಕ್ಷ್ಮಿ ಪೂಜಾರಿಗೆ ಮುಖ್ಯಮಂತ್ರಿಗಳಿಂದ ಅಭಿನಂದನೆ: 5 ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಣೆ

Mumbai News Desk

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಸ್ ಸೇವೆ ಅಗತ್ಯ – ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮನವಿ

Mumbai News Desk

ರಂಗ ಸುದರ್ಶನ (ರಿ) ಸಸಿಹಿತ್ಲು ಇವರಿಂದ, ದೈವ ನಡೆ -ಚಿಂತನ ಮಂಥನ, ರಂಗ ಸ್ನೇಹ ಸಂಗಮ – ಡಾ.ಸುರೇಂದ್ರ ಕುಮಾರ್ ಹೆಗ್ಡೆ “ರಂಗ ಭೀಷ್ಮ” ಬಿರುದು ಪ್ರಧಾನ

Mumbai News Desk