32 C
Mumbai
March 7, 2026
Mumbai News Kannada
ಸುದ್ದಿ

ಮುಂಬೈ ಕುಲಾಲ ಸಂಘದ ಕುಲಾಲ ಭವನಕ್ಕೆ ಎಸ್. ಆರ್. ಬಂಜನ್ ಅವರಿಂದ ರೂ. 20 ಲಕ್ಷ ದೇಣಿಗೆ





ಪುಣೆ: ಕುಲಾಲ ಸಂಘ, ಮುಂಬೈ, ಬಹುಕೋಟಿ ವೆಚ್ಚದಲ್ಲಿ ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಸಮೀಪದಲ್ಲಿ ನಿರ್ಮಿಸಿರುವ ಕುಲಾಲ ಭವನಕ್ಕೆ ಪುಣೆಯ ಉದ್ಯಮಿ, ಕುಲಾಲ ಸಮಾಜದ ಹಿರಿಯ ನಾಯಕರಾದ ಮತ್ತು ಎಸ್. ಬಂಜನ್ ಅಂಡ್ ಕಂಪನಿಯ ಆಡಳಿತ ನಿರ್ದೇಶಕರಾದ ಎಸ್. ಆರ್. ಬಂಜನ್ ಅವರು ₹20 ಲಕ್ಷ ರೂಪಾಯಿಗಳ ದೇಣಿಗೆಯನ್ನು ನೀಡಿದ್ದಾರೆ.

​ನವೆಂಬರ್ 23 ರಂದು ಲೋಕಾರ್ಪಣೆಗೊಳ್ಳಲಿರುವ ಕುಲಾಲ ಭವನ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಎಸ್. ಆರ್. ಬಂಜನ್ ಅವರನ್ನು ಸಂಘದ ಅಧ್ಯಕ್ಷರಾದ ರಘು ಮೂಲ್ಯ, ಕಟ್ಟಡ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷರಾದ ಗಿರೀಶ್ ಬಿ. ಸಾಲಿಯಾನ್, ಉಪಕಾರ್ಯಾಧ್ಯಕ್ಷರಾದ ಸುನಿಲ್ ಸಾಲಿಯಾನ್ ಮತ್ತು ಕಾರ್ಯದರ್ಶಿ ಉಮೇಶ್ ಬಂಗೇರ ಅವರು ಪುಣೆಯಲ್ಲಿ ಭೇಟಿಯಾಗಿ ಆಮಂತ್ರಿಸಿದರು.

​ಕಾರ್ಯಕ್ರಮಕ್ಕೆ ಪರಿವಾರ ಸಮೇತ ಸೇರಿಕೊಳ್ಳುವುದಾಗಿ ತಿಳಿಸಿದ ಎಸ್. ಆರ್. ಬಂಜನ್ ಅವರು, ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಮತ್ತು ದೇಶ-ವಿದೇಶಗಳಿಂದ ಕುಲಾಲ ಬಾಂಧವರು ಇದರಲ್ಲಿ ಪಾಲ್ಗೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.



Related posts

ದಿ. ದಾಮೋದರ್ ಸುವರ್ಣ ಜನ್ಮಶತಾಬ್ದಿ ಆಚರಣೆ : ಡಾ. ಮೋಹನ್ ಬಿ ಅವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ

Mumbai News Desk

ಜಮ್ಮು-ಕಾಶ್ಮೀರ ಉಗ್ರರ ದಾಳಿಗೆ ಶಿವಮೊಗ್ಗ ನಿವಾಸಿ ಬಲಿ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಜಿಲ್ಲಾಧ್ಯಕ್ಷ, ಸಮಾಜ ಸೇವಕ ಡಿ. ಆರ್. ರಾಜು ನಿಧನ,ಗಣ್ಯರ ಸಂತಾಪ

Mumbai News Desk

ಕಲಾಪೋಷಕ .ಉದ್ಯಮಿ ಕೆ.ಕೆ. ಶೆಟ್ಟಿ ಅಹ್ಮದ್ ನಗರರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ.

Mumbai News Desk

ಕೋಡಿಕಲ್ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್ ಆರೋಗ್ಯ ತಪಾಸಣಾ ರಕ್ತದಾನ ಶಿಬಿರ 

Mumbai News Desk

ಮಂಗಳೂರಿನಲ್ಲಿ ಕುಲಾಲ ಭವನ ಲೋಕಾರ್ಪಣೆ: ಸಮಾಜ ಬಾಂಧವರ ಕನಸು ನನಸು

Mumbai News Desk