May 8, 2026
Mumbai News Kannada
ಮುಂಬಯಿ

ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ) ಮುಂಬಯಿ: ನೂತನ ಅಧ್ಯಕ್ಷರಾಗಿ ಸಂತೋಷ್ ಕೆ ಪುತ್ರನ್ ಆಯ್ಕೆ





ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ), ಮುಂಬಯಿ ಇದರ 83ನೇ ವಾರ್ಷಿಕ ಮಹಾಸಭೆ ಅಕ್ಟೋಬರ್ 5ರಂದು (ರವಿವಾರ) ಮುಂಬಯಿ ಪೊರ್ಟ್‌ನ ಕಾಂಜಿಕೇತ್ಸಿ ಸಭಾಗೃಹದಲ್ಲಿ ಸಂಸ್ಥೆಯ ಅಧ್ಯಕ್ಷರಾದ ರಾಜು ಮೆಂಡನ್ ವಂಡ್ಸೆ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನೆರವೇರಿತು.

ಈ ಸಂದರ್ಭದಲ್ಲಿ ಮಹಾಸಭೆಗೂ ಮುನ್ನ ನಡೆದ ವಿಶೇಷ ಮಹಾಸಭೆಯಲ್ಲಿ ಆಯ್ಕೆಯಾದ ಆಡಳಿತ ಸಮಿತಿಯನ್ನು ಮತ್ತು ಸಂಘದ 2025–27ನೇ ಸಾಲಿನ ನೂತನ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರನ್ನು ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರ ಸರ್ವಾನುಮತದೊಂದಿಗೆ ಅಧಿಕೃತವಾಗಿ ದೃಢೀಕರಿಸಲಾಯಿತು.
ಮುಂದಿನ ಅವಧಿಗೆ ಅಧ್ಯಕ್ಷರಾಗಿ ಯಶಸ್ವಿ ಉದ್ಯಮಿ ಸಂತೋಷ್ ಕೃಷ್ಣ ಪುತ್ರನ್ ರವರು ಅವಿರೋಧವಾಗಿ ಆಯ್ಕೆಯಾದರು.
ಗೌರವಾಧ್ಯಕ್ಷರಾಗಿ ಸುರೇಶ್ ಕಾಂಚನ್,
ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಮೆಂಡನ್,
ಗೌರವ ಕೋಶಾಧಿಕಾರಿಯಾಗಿ ನಾಗರಾಜ್ ಶ್ರೀಯಾನ್, ಉಪಾಧ್ಯಕ್ಷರಾಗಿ ಮಹಾಬಲ ಕುಂದರ್ ಹಾಗೂ ರಮೇಶ್ ಬಂಗೇರ ರವರನ್ನು ನೇಮಕ ಮಾಡಲಾಯಿತು. ಹಾಗೂ
ಜೊತೆ ಕಾರ್ಯದರ್ಶಿಗಳಾಗಿ ಕೃಷ್ಣಮೂರ್ತಿ ನಾಯ್ಕ್ ಮತ್ತು ಅಶೋಕ್ ಮೆಂಡನ್,
ಜೊತೆ ಕೋಶಾಧಿಕಾರಿಯಾಗಿ ಪ್ರವೀಣ್ ನಾಯ್ಕ್,
ಕಾಂಚಿನೀ ಕಲಾಕೇಂದ್ರ ಹಾಗೂ ವಾಗ್ವರ್ಧಿನಿ ಸಭಾ ಕಾರ್ಯದರ್ಶಿಯಾಗಿ ಭಾಸ್ಕರ್ ಶ್ರೀಯಾನ್,
ಕ್ರೀಡಾ ಸಮಿತಿಯ ಕಾರ್ಯದರ್ಶಿಗಳಾಗಿ ರಘುರಾಮ್ ಮೆಂಡನ್ ಮತ್ತು ಸುನಿಲ್ ಕುಂದರ್,
ಸೇವಾ ದಳದ ದಳಪತಿಯಾಗಿ ದಿನೇಶ್ ಮೊಗವೀರ,
ಹಾಗೂ ಆಡಳಿತ ಸಮಿತಿಯ ಸದಸ್ಯರಾಗಿ ರಾಜೇಂದ್ರ ಚಂದನ್, ಸುರೇಶ್ ತೋಳಾರ್, ಎನ್‌.ಎಚ್‌. ಬಗ್ವಾಡಿ, ರಾಘವೇಂದ್ರ ಮೊಗವೀರ, ಮಾದವ್ ಸುವರ್ಣ, ಉಮೇಶ್ ಮೊಗವೀರ, ಉದಯಕುಮಾರ್ ಪುತ್ರನ್, ರಾಘವೇಂದ್ರ ಚಂದನ್, ರಾಜೀವ್ ನಾಯ್ಕ್, ಮಂಜುನಾಥ ನಾಯ್ಕ್, ಮತ್ತು ಸತೀಶ್ ಶ್ರೀಯಾನ್ ರವರನ್ನು ಆಯ್ಕೆ ಮಾಡಲಾಯಿತು.

ಸಂಸ್ಥೆಯ ಈ ನೂತನ ಮಂಡಳಿಯು ಮುಂದಿನ ಅವಧಿಯಲ್ಲಿ ಸಂಘದ ಅಭಿವೃದ್ಧಿ, ಸದಸ್ಯರ ಕಲ್ಯಾಣ ಮತ್ತು ಸಾಮಾಜಿಕ ಸೇವೆಗಳಲ್ಲಿ ತೊಡಗಿಕೊಳ್ಳುವ ವಿಶ್ವಾಸವನ್ನು ಸಭೆಯು ವ್ಯಕ್ತಪಡಿಸಿದೆ.



Related posts

ನಾನಿಲ್ತಾರ್ ಅಭಿಮಾನಿ ಬಳಗ ಮುಂಡ್ಕೂರು : ನಾನಿಲ್ತಾರ್ನಲ್ಲಿ  ಸ್ನೇಹ ಸಮ್ಮಿಲನದ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಮುಂಬೈ ಮೇಯರ್ ಗಾದಿ ಯಾರಿಗೆ? ಬಿಜೆಪಿ ‘ದೊಡ್ಡಣ್ಣ’ನಾದರೂ ಶಿಂಧೆ ಪಟ್ಟು; ಜನವರಿ 28ರ ಮತದಾನದತ್ತ ಎಲ್ಲರ ಚಿತ್ತ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ    ಯುಗ್ ಸಂತೋಷ್ ಶೆಟ್ಟಿ  ಗೆ ಶೇ 82. 60 ಅಂಕ.

Mumbai News Desk

ಗೋರೆಗಾಂವ್ ಕರ್ನಾಟಕ ಸಂಘದ 63ನೇ ನಾಡಹಬ್ಬ ಸಮಾರಂಭಕ್ಕೆ ಚಾಲನೆ ,ಕೃತಿ ಲೋಕಾರ್ಪಣೆ,

Mumbai News Desk

ಎಸ್ ಎಸ್ ಸಿ ಯಲ್ಲಿ ಅದಿತಿ ಆರ್ ಶೆಟ್ಟಿ ಯವರಿಗೆ ಶೇಕಡಾ 96.20 ಅಂಕ

Mumbai News Desk

ಭಾಂಡೂಪ್ ಶ್ರೀ ಶನೀಶ್ವರ ಭಕ್ತವೃಂದ ಮಿತ್ರ ಮಂಡಳಿಯ ವತಿಯಿಂದ ನಾಗೇಶ್ ಸುವರ್ಣ ಅವರಿಗೆ ಸನ್ಮಾನ

Mumbai News Desk