September 6, 2026
Mumbai News Kannada
ಸುದ್ದಿ

“ಕಾಂತಾರ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ





​ಮಂಗಳೂರು: ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ತಯಾರಾದ ರಿಷಬ್ ಶೆಟ್ಟಿ ನಿರ್ದೇಶನದ “ಕಾಂತಾರ” ಸಿನಿಮಾದ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಸಿನಿಮಾದಲ್ಲಿ ಎಲ್ಲೂ ದೈವಗಳಿಗೆ ಅಪಚಾರ ನಡೆದಿಲ್ಲ. ಸಿನಿಮಾವನ್ನು ಸಿನಿಮಾದ ರೀತಿಯಲ್ಲಿ ನೋಡಿದರೆ ಚೆಂದ. ಸಿನಿಮಾದ ಉದ್ದಕ್ಕೂ ಎಲ್ಲೂ ದೈವಗಳ ನಿಂದನೆಯಾಗಿಲ್ಲ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ.

​ಕಾಂತಾರ ಸಿನಿಮಾ ಇಂದು ವಿಶ್ವದೆಲ್ಲೆಡೆ ಬಿಡುಗಡೆಯಾಗಿ ಸಂಚಲನವನ್ನೇ ಸೃಷ್ಟಿ ಮಾಡಿದೆ. ಇದರ ಬೆನ್ನಲ್ಲೇ ಸಿನಿಮಾದ ಕುರಿತು ಅಪಸ್ವರಗಳು ಎದ್ದಿದ್ದು, ಪರ-ವಿರೋಧ ಚರ್ಚೆಗಳು ನಡೆದಿವೆ.

​ದೈವ ನಂಬಿದವರ ಸ್ವತ್ತು. ದೈವ ಒಂದು ಜಾತಿಗೆ ಸೀಮಿತವಾದ ಸ್ವತ್ತಲ್ಲ. ದೈವ ಜಾತಿ-ಮತಕ್ಕೆ ಮೀರಿದ ಸ್ವತ್ತು. ಕಾಂತಾರದಿಂದ ದೈವಭಕ್ತಿ ಹೆಚ್ಚಿದೆ. ಈ ಸಿನಿಮಾವನ್ನು ನಿರ್ದೇಶಿಸಿ ಪಾತ್ರ ನಿರ್ವಹಿಸಿರುವ ರಿಷಬ್ ಶೆಟ್ಟಿ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಈ ನೆಲದ ಭಾಷೆಯ ಕಂಪನ್ನು ರಾಷ್ಟ್ರದೆಲ್ಲೆಡೆ ಪಸರಿಸಿದ್ದಾರೆ. ಸಿನಿಮಾದಿಂದ ದೈವಗಳ ಅವಹೇಳನ ಆಗಿಲ್ಲ. ಸಿನಿಮಾವನ್ನು ಸಿನಿಮಾದ ರೀತಿಯಲ್ಲೇ ನೋಡಿ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ.



Related posts

ಫೆಂಗಲ್ ಚಂಡಮಾರುತದ ಎಫೆಕ್ಟ್ – ದಕ್ಷಿಣ ಕನ್ನಡ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ, ನಾಳೆ (ಡಿ. 3)ಶಾಲಾ-ಕಾಲೇಜ್ ಗೆ ರಜೆ ಘೋಷಣೆ

Mumbai News Desk

ಶ್ರದ್ಧಾಂಜಲಿ: ದಿನೇಶ್ ಆನಂದ್ ಹೆಗ್ಡೆ ಅವರ ನಿಧನ

Mumbai News Desk

ಸರಳ ಸಜ್ಜನಿಕೆಯ ಸಮಾಜ ಸೇವಕ ಕೃಷ್ಣ ಶೀನ ಸಾಲಿಯಾನ್ ನಿಧನ

Mumbai News Desk

ಖ್ಯಾತ ಆರ್ಥಿಕ ಸಲಹೆಗಾರ ಡಾ. ಆರ್. ಕೆ. ಶೆಟ್ಟಿಯವರಿಗೆ “ಸಂಸ್ಕೃತಿ ಸಿರಿ” ಪ್ರಶಸ್ತಿ

Mumbai News Desk

ಸೇವಾನಿಷ್ಠೆ ಮತ್ತು ಸಮಾಜಮುಖಿ ಚಿಂತನೆಯ ಸಾಕಾರಮೂರ್ತಿ ಭಾಸ್ಕರ್ ಎಂ. ಶ್ರೀಯಾನ್ ಇಂದು ಸೇವಾ ನಿವೃತ್ತಿ

Mumbai News Desk

70ನೇ ಕನ್ನಡ ರಾಜ್ಯೋತ್ಸವ: ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

Mumbai News Desk