July 23, 2026
Mumbai News Kannada
ಸುದ್ದಿ

“ಕಾಂತಾರ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ







​ಮಂಗಳೂರು: ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ತಯಾರಾದ ರಿಷಬ್ ಶೆಟ್ಟಿ ನಿರ್ದೇಶನದ “ಕಾಂತಾರ” ಸಿನಿಮಾದ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಸಿನಿಮಾದಲ್ಲಿ ಎಲ್ಲೂ ದೈವಗಳಿಗೆ ಅಪಚಾರ ನಡೆದಿಲ್ಲ. ಸಿನಿಮಾವನ್ನು ಸಿನಿಮಾದ ರೀತಿಯಲ್ಲಿ ನೋಡಿದರೆ ಚೆಂದ. ಸಿನಿಮಾದ ಉದ್ದಕ್ಕೂ ಎಲ್ಲೂ ದೈವಗಳ ನಿಂದನೆಯಾಗಿಲ್ಲ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ.

​ಕಾಂತಾರ ಸಿನಿಮಾ ಇಂದು ವಿಶ್ವದೆಲ್ಲೆಡೆ ಬಿಡುಗಡೆಯಾಗಿ ಸಂಚಲನವನ್ನೇ ಸೃಷ್ಟಿ ಮಾಡಿದೆ. ಇದರ ಬೆನ್ನಲ್ಲೇ ಸಿನಿಮಾದ ಕುರಿತು ಅಪಸ್ವರಗಳು ಎದ್ದಿದ್ದು, ಪರ-ವಿರೋಧ ಚರ್ಚೆಗಳು ನಡೆದಿವೆ.

​ದೈವ ನಂಬಿದವರ ಸ್ವತ್ತು. ದೈವ ಒಂದು ಜಾತಿಗೆ ಸೀಮಿತವಾದ ಸ್ವತ್ತಲ್ಲ. ದೈವ ಜಾತಿ-ಮತಕ್ಕೆ ಮೀರಿದ ಸ್ವತ್ತು. ಕಾಂತಾರದಿಂದ ದೈವಭಕ್ತಿ ಹೆಚ್ಚಿದೆ. ಈ ಸಿನಿಮಾವನ್ನು ನಿರ್ದೇಶಿಸಿ ಪಾತ್ರ ನಿರ್ವಹಿಸಿರುವ ರಿಷಬ್ ಶೆಟ್ಟಿ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಈ ನೆಲದ ಭಾಷೆಯ ಕಂಪನ್ನು ರಾಷ್ಟ್ರದೆಲ್ಲೆಡೆ ಪಸರಿಸಿದ್ದಾರೆ. ಸಿನಿಮಾದಿಂದ ದೈವಗಳ ಅವಹೇಳನ ಆಗಿಲ್ಲ. ಸಿನಿಮಾವನ್ನು ಸಿನಿಮಾದ ರೀತಿಯಲ್ಲೇ ನೋಡಿ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ.



Related posts

ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಕಾರ್ಕಳದ ಪ್ರತಿಭೆ ಸಿಂಚನ್ ಎ. ಪೂಜಾರಿ ಆಯ್ಕೆ: ಕರ್ನಾಟಕಕ್ಕೆ ಹೆಮ್ಮೆಯ ಗೌರವ

Mumbai News Desk

ಮಂಗಳೂರು : ತೊಕ್ಕೊಟ್ಟು ಫೈಓವರ್ ನಲ್ಲಿ ರೌಡಿಶೀಟರ್ ನ ಹತ್ಯೆ

Mumbai News Desk

ಕರ್ನಾಟಕ : ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಬರ – ಹಾಲಿನ ದರ ಹೆಚ್ಚಳ

Mumbai News Desk

ಮಹಾರಾಷ್ಟ್ರ, ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ : ನ. 20 ರಂದು ರಾಜ್ಯದಲ್ಲಿ ಮತದಾನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (14/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಕರ್ನಾಟಕ ಸಂಘ ಶಾರ್ಜಾ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಅಧಿಕಾರ ಸ್ವೀಕಾರ

Mumbai News Desk