30 C
Mumbai
April 24, 2026
Mumbai News Kannada
ಸುದ್ದಿ

ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಗೆ ಬೆಂಕಿ – 20 ಪ್ರಯಾಣಿಕರು ಸಜೀವ ದಹನ





 ಹೈದರಾಬಾದ್​ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್​ಗೆ ಬೆಂಕಿ ಹೊತ್ತಿಕೊಂಡು 20ಕ್ಕೂ ಹೆಚ್ಚು ಜನರು ಸಜೀವ ದಹನಗೊಂಡಿದ್ದಾರೆ. 15ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆಂಧ್ರ ಪ್ರದೇಶದ ಕರ್ನೂಲ್​ ಚಿನ್ನಟೆಕೋರು ಗ್ರಾಮದ ಬಳಿ ಖಾಸಗಿ ಕಾವೇರಿ ಸ್ವೀಪರ್ ಬಸ್​ ಹೈದರಾಬಾದ್​ನಿಂದ ಬೆಂಗಳೂರಿಗೆ ಬರುತಿತ್ತು. ಈ ವೇಳೆ ಏಕಾಏಕಿ ಬಸ್​ನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಧಗ ಧಗ ಹೊತ್ತಿ ಉರಿದಿದೆ. ಇದರಿಂದ ಪ್ರಯಾಣಿಕರು ತಕ್ಷಣಕ್ಕೆ ಹೊರ ಬರಲು ಆಗಿಲ್ಲ. ಬಸ್​​ನಲ್ಲಿದ್ದ 42 ಪ್ರಯಾಣಿಕರ ಪೈಕಿ 20ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಇದರಲ್ಲಿ 15ಕ್ಕೂ ಅಧಿಕ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಸ್​ಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿದ್ದರಿಂದ ಪ್ರಯಾಣಿಕರು ಹೊರಬರಲು ಹರಸಾಹಸ‌ ಪಟ್ಟಿದ್ದಾರೆ. ಕೆಲವರು ಎಮರ್ಜೆನ್ಸಿ ಡೋರ್​ನಿಂದ ಹೊರ ಬಂದರೆ, ಇನ್ನು ಕೆಲವರು ಕಿಟಕಿಯ ಗ್ಲಾಸ್ ಒಡೆದು ಹೊರ ಬಂದಿದ್ದಾರೆ. ಸದ್ಯ ಘಟನೆಯಲ್ಲಿ ಗಾಯಗೊಂಡವರನ್ನ ಕರ್ನೂಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗಿನ ಜಾವ 3 ಗಂಟೆಗೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಎಸ್​ಪಿ ವಿಕ್ರಾಂತ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

.

.

.

.



Related posts

ತುಳುವ ಸಿರಿ ಕಲಾವಿದೆರ್ ನಂದಳಿಕೆ ನಾಟಕ ತಂಡ – “ಆಯೆ ಮನಿಪುಜೆ” ವರ್ಷದ ನೂತನ ತುಳು ನಾಟಕದ ಶೀರ್ಷಿಕೆ ಬಿಡುಗಡೆ.

Mumbai News Desk

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ  ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಮುಂಬೈ ಕನ್ನಡತಿ ನ್ಯಾ. ಮೀನಾಕ್ಷಿ ಅಚಾರ್ಯರಿಗೆ ಗ್ಲೋಬಲ್ ಲೀಗಲ್ ಅವಾರ್ಡ್ಸ್ ನಿಂದ, “ವರ್ಷದ ವ್ಯವಸ್ಥಾಪಕಿ ಪಾಲುದಾರ ಮಹಿಳೆ” ಪ್ರಶಸ್ತಿ.

Mumbai News Desk

ಕರ್ನಿರೆ ಫೌಂಡೇಷನ್ ವತಿಯಿಂದ 27ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮ,

Mumbai News Desk

ಗೋರೆಗಾಂವ್ ; ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ನ ಆಧ್ಯಕ್ಷ, ಸಮಾಜಸೇವಕ ಪುರುಷೋತ್ತಮ ಕೆ. ಐಲ್ ನಿಧನ

Mumbai News Desk

ಕುಕ್ಕಳ ಶ್ರೇಯಸ್ ಪೂಜಾರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ

Mumbai News Desk