30.9 C
Mumbai
June 8, 2026
Mumbai News Kannada
ಪ್ರಕಟಣೆ

ಆ 26. ಕುಲಾಲ ಸಂಘ ಮುಂಬಯಿ: ಥಾಣೆ, ಕಸರ, ಖರ್ಜತ್, ಭಿವಂಡಿ ಸ್ಥಳೀಯ ಸಮಿತಿಯಿಂದ ಮಂಗಳೂರು ಕುಲಾಲ ಭವನ ಉದ್ಘಾಟನಾ ಆಮಂತ್ರಣ ಪತ್ರಿಕೆ ವಿತರಣೆ





​ಕಲ್ಯಾಣ, ಅಕ್ಟೋಬರ್ 24: ಕುಲಾಲ ಸಂಘ ಮುಂಬಯಿಯ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮಂಗಳಾದೇವಿ ಹತ್ತಿರದ ಕುಲಾಲ ಭವನದ ಉದ್ಘಾಟನಾ ಸಮಾರಂಭವು ನವೆಂಬರ್ 23, 2025 ರಂದು ನಡೆಯಲಿದೆ.

​ಈ ಹಿನ್ನೆಲೆಯಲ್ಲಿ, ಭವನದ ಉದ್ಘಾಟನಾ ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮವನ್ನು ಅಕ್ಟೋಬರ್ 26, 2025 ರಂದು ಬೆಳಿಗ್ಗೆ 10:00 ಗಂಟೆಗೆ ಸರಿಯಾಗಿ ಪ್ರಿನ್ಸ್ ಬ್ಯಾಂಕ್ವೆಟ್ ಹಾಲ್, 4ನೇ ಮಹಡಿ, ಕೆ.ಇ. ಜೋಜ್ವಾಲ್ ಕಮರ್ಷಿಯಲ್ ಸೆಂಟರ್, ಕಲ್ಯಾಣ ರೈಲ್ವೆ ಸ್ಟೇಷನ್, ಕೋರ್ಟ್ ಹತ್ತಿರ, ಕಲ್ಯಾಣ (ಪ), ಪಿನ್ ಕೋಡ್: 421301 ಇಲ್ಲಿ ಆಯೋಜಿಸಲಾಗಿದೆ.

​ಸಭಾ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಶ್ರೀ ರಘು ಮೂಲ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಸಂಘದ ಗೌರವ ಅಧ್ಯಕ್ಷರಾದ ಶ್ರೀ ದೇವದಾಸ್ ಕುಲಾಲ್, ಉಪಾಧ್ಯಕ್ಷರಾದ ಶ್ರೀ ಡಿ.ಐ. ಮೂಲ್ಯ, ಕಾರ್ಯದರ್ಶಿ ಶ್ರೀ ಕರುಣಾಕರ್ ಸಾಲಿಯಾನ್, ಕೋಶಾಧಿಕಾರಿ ಶ್ರೀ ಜಯ ಅಂಚನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಸುಚಿತ ಬಂಜನ್, ಕಟ್ಟಡ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಗಿರೀಶ್ ಬಿ. ಸಾಲಿಯಾನ್, ಉಪ ಕಾರ್ಯಾಧ್ಯಕ್ಷರಾದ ಶ್ರೀ ಸುನಿಲ್ ಆರ್. ಸಾಲಿಯಾನ್ ಹಾಗೂ ಇತರ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

​ಕಾರ್ಯಕ್ರಮದಲ್ಲಿ ದಾನಿಗಳಾದ ಶ್ರೀ ಜಗದೀಶ್ ಆರ್. ಬಂಜನ್, ಶ್ರೀ ಅಶೋಕ್ ಆರ್. ಮೂಲ್ಯ, ಶ್ರೀ ಕರುಣಾಕರ್ ಜಿ.ಕೆ., ಮತ್ತು ಶ್ರೀ ಸುಧಾಕರ ಎಸ್. ಮೂಲ್ಯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

​ಸಭೆಯಲ್ಲಿ ಉದ್ಘಾಟನೆಯ ಸಂಪೂರ್ಣ ಮಾಹಿತಿ ಹಾಗೂ ಭವನದ ಕುರಿತಾದ ಸಮಗ್ರ ವರದಿಯನ್ನು ಸಮಾಜ ಬಾಂಧವರಿಗೆ ತಿಳಿಸಲಾಗುವುದು.

​ಈ ಮಹತ್ವದ ಕಾರ್ಯಕ್ರಮದಲ್ಲಿ ಕುಲಾಲ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಥಾಣೆ, ಕಸರ, ಖರ್ಜತ್, ಭಿವಂಡಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಲಕ್ಷ್ಮಣ್ ಸಿ. ಮೂಲ್ಯ, ಉಪ ಕಾರ್ಯಾಧ್ಯಕ್ಷರಾದ ಶ್ರೀ ಕುಶ ಕುಲಾಲ್, ಕಾರ್ಯದರ್ಶಿ ಶ್ರೀ ಹರಿಯಪ್ಪ ಮೂಲ್ಯ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಕುಶಲ ಜಿ. ಬಂಗೇರ ಹಾಗೂ ಇತರ ಪದಾಧಿಕಾರಿಗಳು ಮತ್ತು ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

.

.



Related posts

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮುಂಬೈ ಭೇಟಿಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ. 

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ, ಆ. 10 ರಂದು ಮುನಿರಾಜ್ ಜೈನ್ ಶ್ರದ್ಧಾಂಜಲಿ ಸಭೆ

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ, ಜೋಗೇಶ್ವರಿ ಪೂರ್ವ – ಸೆ. 22ರಿಂದ ಶರನ್ನವರಾತ್ರಿ ಹಾಗೂ ವಿಜಯದಶಮಿ ಮಹೋತ್ಸವ

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ಮಂದಿರ ಡೊಂಬಿವಲಿ ಪೂರ್ವ : ಫೆ. 8ಕ್ಕೆ ವಾರ್ಷಿಕ ಮಂಗಳೂತ್ಸವ

Mumbai News Desk

ಫೆ. 1, ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk

ಮಲಾಡ್ ಪೂರ್ವದ ಶ್ರೀ ದೇವಿ  ಮಹಮ್ಮಾಯಿ ದೇವಸ್ಥಾನ,  ಎ13 ; ವಾರ್ಷಿಕ ಮಹೋತ್ಸವ ಮತ್ತು ಪಾಲ್ಕಿ ಉತ್ಸವ,

Mumbai News Desk