July 23, 2026
Mumbai News Kannada
ಕರ್ನಾಟಕ

ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ: ರಾಜ್ಯ ಸರಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್







ಕಳೆದ ಹಲವು ದಿನಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಬಿಜೆಪಿ ನಡುವೆ RSS ಪಥಸಂಚಲನ ಮತ್ತು ಚಟುವಟಿಕೆಗಳ ವಿಚಾರದಲ್ಲಿ ನಡೆಯುತ್ತಿದ್ದ ವಾದ-ವಿವಾದಕ್ಕೆ ತಾರ್ಕಿಕ ಅಂತ್ಯ ಸಿಗುವ ಲಕ್ಷಣ ಕಾಣುತ್ತಿದೆ.

ಸರ್ಕಾರಿ ಆವರಣದಲ್ಲಿ ಚಟುವಟಿಕೆಗಳನ್ನು ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಇತ್ತೀಚಿನ ನಿರ್ದೇಶನಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್​ನಲ್ಲಿ ಹಿನ್ನಡೆಯಾಗಿದೆ.

ಖಾಸಗಿ ಸಂಸ್ಥೆಗಳು, ಸಂಘಗಳು ಮತ್ತು ಗುಂಪುಗಳು ತಮ್ಮ ಚಟುವಟಿಕೆಗಳಿಗೆ ಸರ್ಕಾರಿ ಆಸ್ತಿ ಅಥವಾ ಸಾರ್ವಜನಿಕ ಸ್ಥಳಗಳನ್ನು ಬಳಸುವ ಮೊದಲು ಅನುಮೋದನೆ ಪಡೆಯಬೇಕೆಂದು ಸರ್ಕಾರ ಅಕ್ಟೋಬರ್ 18 ರಂದು ಆದೇಶ ಹೊರಡಿಸಿತ್ತು.

ಸರ್ಕಾರಿ ಆದೇಶವು ನಿರ್ದಿಷ್ಟವಾಗಿ ಆರ್‌ಎಸ್‌ಎಸ್ ಅನ್ನು ಹೆಸರಿಸದಿದ್ದರೂ, ಆದೇಶದ ನಿಬಂಧನೆಗಳು ಹಿಂದೂ ಬಲಪಂಥೀಯ ಸಂಘಟನೆಯ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಗುರಿಯನ್ನು ಹೊಂದಿವೆ ಎಂದು ಹೇಳಲಾಗುತ್ತದೆ. ಇದರಲ್ಲಿ RSS ರೂಟ್ ಮಾರ್ಚ್‌ಗಳು ಸೇರಿವೆ.

ಪಂಚಾಯತ್ ರಾಜ್ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

ಈ ಹಿನ್ನೆಲೆಯಲ್ಲಿ ಇತ್ತೀಚಿನ ಸಚಿವ ಸಂಪುಟ ನಿರ್ಧಾರವನ್ನು ಆಧರಿಸಿ ಈ ಆದೇಶವನ್ನು ನೀಡಲಾಗಿತ್ತು.

ವಿರೋಧ ಪಕ್ಷ ಬಿಜೆಪಿ ಕೂಡ ಈ ಕ್ರಮವನ್ನು ಟೀಕಿಸಿತ್ತು, ಇದು ಆರ್‌ಎಸ್‌ಎಸ್‌ನ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳನ್ನು ತಡೆಯುವ ಉದ್ದೇಶವನ್ನು ಹೊಂದಿದೆ ಎಂದು ಆರೋಪಿಸಿತ್ತು

ಆರ್​​ಎಸ್​ಎಸ್ ಪಥಸಂಚಲನ ನಿರ್ಬಂಧಿಸುವ ಸಂಬಂಧ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್​ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಇಂದು ಮಧ್ಯಂತರ ತಡೆಯಾಜ್ಞೆ ನೀಡಿದೆ.

10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು ಪರಿಗಣಿಸಿ ಆರ್​ಎಸ್​​ಎಸ್ ಪಥಸಂಚಲನಕ್ಕೆ ಅನುಮತಿ ನೀಡದೇ ಇರುವ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ನ ಧಾರವಾಡ ಪೀಠಕ್ಕೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ರಾಜ್ಯ ಸರ್ಕಾರ, ಗೃಹ ಇಲಾಖೆ, ಹುಬ್ಬಳ್ಳಿ ಕಮಿಷನರ್​ಗೆ ನೋಟಿಸ್ ನೀಡಿದೆ.

ಅ.18 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಆರ್​ಎಸ್​​ಎಸ್ ಪ್ರಶ್ನೆ ಮಾಡಿ ಅರ್ಜಿ ಸಲ್ಲಿಸಿತ್ತು. ಈ ಸಂಬಂಧ ಸರ್ಕಾರಕ್ಕೆ ನೋಟಿಸ್ ನೀಡಿರುವ ಹೈಕೋರ್ಟ್​ನ ಧಾರವಾಡ ಪೀಠ, ಅನುಮತಿಯಿಲ್ಲದೇ 10 ಜನ ಜನ ಸೇರಿದರೆ ಅಪರಾಧವೆಂದು ಸರ್ಕಾರದ ಆದೇಶದಲ್ಲಿದೆ. ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಪೊಲೀಸ್ ಕಾಯ್ದೆಯಲ್ಲಿ ಇರುವ ಅಧಿಕಾರವನ್ನು ಸರ್ಕಾರ ಆದೇಶದ ಮೂಲಕ ಚಲಾಯಿಸಿದೆ. ಸಂವಿಧಾನದ ಆರ್ಟಿಕಲ್ 19 (1)A, B, ನೀಡಿರುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ. ಸಂವಿಧಾನ ನೀಡಿರುವ ಹಕ್ಕನ್ನು ಸರ್ಕಾರಿ ಆದೇಶ ಕಿತ್ತುಕೊಳ್ಳಲಾಗದು ಎಂದು ಅಭಿಪ್ರಾಯ ವ್ಯಕ್ತ ಪಡಿಸಿದೆ.



Related posts

ಧರ್ಮಸ್ಥಳ ಬುರುಡೆ ಕೇಸ್ನಲ್ಲಿ ಮೇಜರ್ ಟ್ವಿಸ್ಟ್, ಮಾಸ್ಕ್ ಮ್ಯಾನ್ ಅರೆಸ್ಟ್.

Mumbai News Desk

ಕರ್ನಾಟಕದಲ್ಲಿ ನಾಳೆಯಿಂದ ಜೂನ್ 6ರ ವರೆಗೆ ಮದ್ಯ ಮಾರಾಟ ಬಂದ್

Mumbai News Desk

ಚಿಕ್ಕಮಗಳೂರು: ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳನ್ನ ಹೊರಗೆ ಕಳ್ಸಿದ ಪ್ರಿನ್ಸಿಪಾಲ್ : ನಗರದಲ್ಲಿ ರೊಚ್ವಿಗೆದ್ದ ಹಿಂದೂ ಸಂಘಟನೆಗಳು

Mumbai News Desk

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನವಂಬರ್ 12ರವರೆಗೆ ಮಧ್ಯಂತರ ತಡೆ.

Mumbai News Desk

ಜೆಸಿಐ ವಲಯ 15ರ ವಲಯಾಧ್ಯಕ್ಷರಾಗಿ ಗಿರೀಶ್ ಎಸ್ ಪಿ ಆಯ್ಕೆ

Mumbai News Desk

ಕರ್ನಾಟಕ : ವಿಧಾನಮಂಡಲದಲ್ಲಿ ರಾಜ್ಯಪಾಲರ ಭಾಷಣ ಬಹಿಷ್ಕಾರ ಮತ್ತು ಸದನದ ಇತಿಹಾಸದಲ್ಲೇ ನಡೆದ ಅತಿ ದೊಡ್ಡ ಹೈಡ್ರಾಮಾ

Mumbai News Desk