ಮುಂಬಯಿ ಕನ್ನಡಿಗರ ಅಸ್ಮಿತೆ, ಚಿಂತನ ಮಂಥನ – ವಿಶೇಷ ಉಪನ್ಯಾಸ
ಕನ್ನಡ ವಿಭಾಗ ಮುಂಬೈ ವಿಶ್ವವಿದ್ಯಾಲಯ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋಯದ 70ರ ಸಂಭ್ರಮ ಕಾರ್ಯಕ್ರಮವು ನವೆಂಬರ್ 1 ರಂದು ಮಧ್ಯಾಹ್ನ 2ರಿಂದ ಇಂಗ್ಲಿಷ್ ವಿಭಾಗ ಸೆಮಿನಾರ್ ಹಾಲ್, ನೆಲಮಹಡಿ, ರಾನಡೆ ಭವನ, ಮುಂಬೈ ವಿಶ್ವವಿದ್ಯಾಲಯ, ಸಾಂತಾಕ್ರೂಜ್ ಪೂರ್ವ ಇಲ್ಲಿ ಆಯೋಜಿಸಲಾಗಿದೆ.
ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಪ್ರೊ. ಜಿ ಎನ್ ಉಪಾಧ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಂಬೈ ಕನ್ನಡಿಗರ ಅಸ್ಮಿತೆ, ಚಿಂತನ ಮಂಥನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಂಬೈಯ ಕವಿ, ಲೇಖಕಿ ಡಾ. ಜಿ. ಪಿ.ಕುಸುಮ ಅವರು ‘ಸಮುದಾಯ ಅಧ್ಯಯನದ ಅಗತ್ಯ ಮತ್ತು ಮಹತ್ವ” ( ಮೊಗವೀರ ಸಮುದಾಯದ ಹಿನ್ನೆಲೆಯಲ್ಲಿ )ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳಾದ ಅನಿತಾ ತಾಕೋಡೆ “ಸ್ವಾತಂತ್ರ ಹೋರಾಟದಲ್ಲಿ ಮುಂಬೈ ಬಿಲ್ಲವರು”, ಸುರೇಖಾ ಹರಿಪ್ರಸಾದ್ ಶೆಟ್ಟಿ, “ಮುಂಬೈಯಲ್ಲಿ ಉದಯಿಸಿದ ದಿನಕರ ” ಹಾಗೂ ಜಯ ಸಾಲ್ಯಾನ್ “ಮುಂಬೈಯಲ್ಲಿ ಅರಳಿದ ಕರ್ನಾಟಕದ ಕಲಾವಿದರು” ಎಂಬ ವಿಷಯಗಳ ಕುರಿತು ಮಾತನಾಡಲಿದ್ದಾರೆ ಎಂದು ಕನ್ನಡ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಜಿ ಎನ್ ಉಪಾಧ್ಯಾಯ ಹಾಗೂ ಜಾಗತಿಕ ಬಂಟರ ಸಂಘಗಳ ಅಧ್ಯಕ್ಷ ಐಕಳ ಹರಿಶ್ ಶೆಟ್ಟಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
.
.
.
.
.




