September 6, 2026
Mumbai News Kannada
ಪ್ರಕಟಣೆ

ನ. 1ರಂದು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋದಯ 70ರ ಸಂಭ್ರಮ.





ಮುಂಬಯಿ ಕನ್ನಡಿಗರ ಅಸ್ಮಿತೆ, ಚಿಂತನ ಮಂಥನ – ವಿಶೇಷ ಉಪನ್ಯಾಸ

ಕನ್ನಡ ವಿಭಾಗ ಮುಂಬೈ ವಿಶ್ವವಿದ್ಯಾಲಯ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋಯದ 70ರ ಸಂಭ್ರಮ ಕಾರ್ಯಕ್ರಮವು ನವೆಂಬರ್ 1 ರಂದು ಮಧ್ಯಾಹ್ನ 2ರಿಂದ ಇಂಗ್ಲಿಷ್ ವಿಭಾಗ ಸೆಮಿನಾರ್ ಹಾಲ್, ನೆಲಮಹಡಿ, ರಾನಡೆ ಭವನ, ಮುಂಬೈ ವಿಶ್ವವಿದ್ಯಾಲಯ, ಸಾಂತಾಕ್ರೂಜ್ ಪೂರ್ವ ಇಲ್ಲಿ ಆಯೋಜಿಸಲಾಗಿದೆ.
ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಪ್ರೊ. ಜಿ ಎನ್ ಉಪಾಧ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಂಬೈ ಕನ್ನಡಿಗರ ಅಸ್ಮಿತೆ, ಚಿಂತನ ಮಂಥನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಂಬೈಯ ಕವಿ, ಲೇಖಕಿ ಡಾ. ಜಿ. ಪಿ.ಕುಸುಮ ಅವರು ‘ಸಮುದಾಯ ಅಧ್ಯಯನದ ಅಗತ್ಯ ಮತ್ತು ಮಹತ್ವ” ( ಮೊಗವೀರ ಸಮುದಾಯದ ಹಿನ್ನೆಲೆಯಲ್ಲಿ )ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳಾದ ಅನಿತಾ ತಾಕೋಡೆ “ಸ್ವಾತಂತ್ರ ಹೋರಾಟದಲ್ಲಿ ಮುಂಬೈ ಬಿಲ್ಲವರು”, ಸುರೇಖಾ ಹರಿಪ್ರಸಾದ್ ಶೆಟ್ಟಿ, “ಮುಂಬೈಯಲ್ಲಿ ಉದಯಿಸಿದ ದಿನಕರ ” ಹಾಗೂ ಜಯ ಸಾಲ್ಯಾನ್ “ಮುಂಬೈಯಲ್ಲಿ ಅರಳಿದ ಕರ್ನಾಟಕದ ಕಲಾವಿದರು” ಎಂಬ ವಿಷಯಗಳ ಕುರಿತು ಮಾತನಾಡಲಿದ್ದಾರೆ ಎಂದು ಕನ್ನಡ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಜಿ ಎನ್ ಉಪಾಧ್ಯಾಯ ಹಾಗೂ ಜಾಗತಿಕ ಬಂಟರ ಸಂಘಗಳ ಅಧ್ಯಕ್ಷ ಐಕಳ ಹರಿಶ್ ಶೆಟ್ಟಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

.

.

.

.

.



Related posts

ನ. 26, 27 ಕಾಪುವಿನ ಮೂರೂ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಜಾರ್ದೆ ಮಾರಿಪೂಜೆ

Mumbai News Desk

ಬೊರಿವಲಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ನಾಗರ ಪಂಚಮಿ ಉತ್ಸವ

Mumbai News Desk

ಅ 11: ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಆಟಿದ ಸೊಗಸ್ ಕಾರ್ಯಕ್ರಮ

Mumbai News Desk

ಕಲ್ಚರಲ್ ಟೀಮ್ ಭಿವಂಡಿ : ನ. 17ರಂದು 5ನೇ ವಾರ್ಷಿಕೋತ್ಸವ

Mumbai News Desk

ಭಾಯಂದರ್: ಏಪ್ರಿಲ್ 12 ರಂದು ಶ್ರೀ ಮೂಕಾಂಬಿಕಾ ಶಾಂತದುರ್ಗಾ ದೇವಸ್ಥಾನದ ವಾರ್ಷಿಕ ಮಹಾಪೂಜೆ

Mumbai News Desk

ಫೆ. 9. ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಮೀರಾ – ಭಾಯಂದರ್ ಶಾಖೆಯ ವಾರ್ಷಿಕೋತ್ಸವ

Mumbai News Desk