27.7 C
Mumbai
July 23, 2026
Mumbai News Kannada
ಪ್ರಕಟಣೆ

ನ. 1ರಂದು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋದಯ 70ರ ಸಂಭ್ರಮ.







ಮುಂಬಯಿ ಕನ್ನಡಿಗರ ಅಸ್ಮಿತೆ, ಚಿಂತನ ಮಂಥನ – ವಿಶೇಷ ಉಪನ್ಯಾಸ

ಕನ್ನಡ ವಿಭಾಗ ಮುಂಬೈ ವಿಶ್ವವಿದ್ಯಾಲಯ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋಯದ 70ರ ಸಂಭ್ರಮ ಕಾರ್ಯಕ್ರಮವು ನವೆಂಬರ್ 1 ರಂದು ಮಧ್ಯಾಹ್ನ 2ರಿಂದ ಇಂಗ್ಲಿಷ್ ವಿಭಾಗ ಸೆಮಿನಾರ್ ಹಾಲ್, ನೆಲಮಹಡಿ, ರಾನಡೆ ಭವನ, ಮುಂಬೈ ವಿಶ್ವವಿದ್ಯಾಲಯ, ಸಾಂತಾಕ್ರೂಜ್ ಪೂರ್ವ ಇಲ್ಲಿ ಆಯೋಜಿಸಲಾಗಿದೆ.
ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಪ್ರೊ. ಜಿ ಎನ್ ಉಪಾಧ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಂಬೈ ಕನ್ನಡಿಗರ ಅಸ್ಮಿತೆ, ಚಿಂತನ ಮಂಥನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಂಬೈಯ ಕವಿ, ಲೇಖಕಿ ಡಾ. ಜಿ. ಪಿ.ಕುಸುಮ ಅವರು ‘ಸಮುದಾಯ ಅಧ್ಯಯನದ ಅಗತ್ಯ ಮತ್ತು ಮಹತ್ವ” ( ಮೊಗವೀರ ಸಮುದಾಯದ ಹಿನ್ನೆಲೆಯಲ್ಲಿ )ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳಾದ ಅನಿತಾ ತಾಕೋಡೆ “ಸ್ವಾತಂತ್ರ ಹೋರಾಟದಲ್ಲಿ ಮುಂಬೈ ಬಿಲ್ಲವರು”, ಸುರೇಖಾ ಹರಿಪ್ರಸಾದ್ ಶೆಟ್ಟಿ, “ಮುಂಬೈಯಲ್ಲಿ ಉದಯಿಸಿದ ದಿನಕರ ” ಹಾಗೂ ಜಯ ಸಾಲ್ಯಾನ್ “ಮುಂಬೈಯಲ್ಲಿ ಅರಳಿದ ಕರ್ನಾಟಕದ ಕಲಾವಿದರು” ಎಂಬ ವಿಷಯಗಳ ಕುರಿತು ಮಾತನಾಡಲಿದ್ದಾರೆ ಎಂದು ಕನ್ನಡ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಜಿ ಎನ್ ಉಪಾಧ್ಯಾಯ ಹಾಗೂ ಜಾಗತಿಕ ಬಂಟರ ಸಂಘಗಳ ಅಧ್ಯಕ್ಷ ಐಕಳ ಹರಿಶ್ ಶೆಟ್ಟಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

.

.

.

.

.



Related posts

ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ಕ್ಷೇತ್ರ, ಕಾಸರಗೋಡು, ಮುಂಬೈ ಘಟಕ ಡಿ 21.ಬ್ರಹ್ಮಕಲಶೋತ್ಸವದ ವಿಶೇಷ ಸಭೆ.

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು – ಮಾ. 6ಕ್ಕೆ ಸ್ತನಪಾನ ಕೊಠಡಿ ಉದ್ಘಾಟನೆ

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಇದರ 48 ನೇ  ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ.

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ(ರಿ) ಮುಂಬಯಿ : ಫೆ. 16 ರಂದು “ಅರಸಿನ ಕುಂಕುಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ”

Mumbai News Desk

ಜ. 5 : ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆ ನಾಲಾಸೋಪಾರ, 29ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ

Mumbai News Desk

ಬೊಯಿಸರ್ ಸೋಮೇಶ್ವರ ಮಂದಿರ ನಾಳೆ (ಮಾ. 1)17ನೇ ವರ್ಧಂತ್ಯುತ್ಸವ

Mumbai News Desk