30.5 C
Mumbai
June 8, 2026
Mumbai News Kannada
ಪ್ರಕಟಣೆ

ನ. 1ರಂದು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋದಯ 70ರ ಸಂಭ್ರಮ.





ಮುಂಬಯಿ ಕನ್ನಡಿಗರ ಅಸ್ಮಿತೆ, ಚಿಂತನ ಮಂಥನ – ವಿಶೇಷ ಉಪನ್ಯಾಸ

ಕನ್ನಡ ವಿಭಾಗ ಮುಂಬೈ ವಿಶ್ವವಿದ್ಯಾಲಯ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋಯದ 70ರ ಸಂಭ್ರಮ ಕಾರ್ಯಕ್ರಮವು ನವೆಂಬರ್ 1 ರಂದು ಮಧ್ಯಾಹ್ನ 2ರಿಂದ ಇಂಗ್ಲಿಷ್ ವಿಭಾಗ ಸೆಮಿನಾರ್ ಹಾಲ್, ನೆಲಮಹಡಿ, ರಾನಡೆ ಭವನ, ಮುಂಬೈ ವಿಶ್ವವಿದ್ಯಾಲಯ, ಸಾಂತಾಕ್ರೂಜ್ ಪೂರ್ವ ಇಲ್ಲಿ ಆಯೋಜಿಸಲಾಗಿದೆ.
ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಪ್ರೊ. ಜಿ ಎನ್ ಉಪಾಧ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಂಬೈ ಕನ್ನಡಿಗರ ಅಸ್ಮಿತೆ, ಚಿಂತನ ಮಂಥನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಂಬೈಯ ಕವಿ, ಲೇಖಕಿ ಡಾ. ಜಿ. ಪಿ.ಕುಸುಮ ಅವರು ‘ಸಮುದಾಯ ಅಧ್ಯಯನದ ಅಗತ್ಯ ಮತ್ತು ಮಹತ್ವ” ( ಮೊಗವೀರ ಸಮುದಾಯದ ಹಿನ್ನೆಲೆಯಲ್ಲಿ )ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳಾದ ಅನಿತಾ ತಾಕೋಡೆ “ಸ್ವಾತಂತ್ರ ಹೋರಾಟದಲ್ಲಿ ಮುಂಬೈ ಬಿಲ್ಲವರು”, ಸುರೇಖಾ ಹರಿಪ್ರಸಾದ್ ಶೆಟ್ಟಿ, “ಮುಂಬೈಯಲ್ಲಿ ಉದಯಿಸಿದ ದಿನಕರ ” ಹಾಗೂ ಜಯ ಸಾಲ್ಯಾನ್ “ಮುಂಬೈಯಲ್ಲಿ ಅರಳಿದ ಕರ್ನಾಟಕದ ಕಲಾವಿದರು” ಎಂಬ ವಿಷಯಗಳ ಕುರಿತು ಮಾತನಾಡಲಿದ್ದಾರೆ ಎಂದು ಕನ್ನಡ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಜಿ ಎನ್ ಉಪಾಧ್ಯಾಯ ಹಾಗೂ ಜಾಗತಿಕ ಬಂಟರ ಸಂಘಗಳ ಅಧ್ಯಕ್ಷ ಐಕಳ ಹರಿಶ್ ಶೆಟ್ಟಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

.

.

.

.

.



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು – ಮಾ. 6ಕ್ಕೆ ಸ್ತನಪಾನ ಕೊಠಡಿ ಉದ್ಘಾಟನೆ

Mumbai News Desk

ಶ್ರೀ ಮಹಿಷಮರ್ಧಿನಿ ದೇವಸ್ಥಾನ ಬೊರಿವಿಲಿ 35ನೇ ವಾರ್ಷಿಕ ಶರನ್ನವರಾತ್ರಿ ಉತ್ಸವ.

Mumbai News Desk

ಸೆ.21.ಶ್ರೀ ಸಾಯಿಬಾಬಾ ಪೂಜಾ ಸಮಿತಿ,ಕಾಲಘೋಡ (ರಿ).ಹೊಲಿಗೆ ತರಬೇತಿ ಪ್ರಮಾಣಪತ್ರ ವಿತರಣೆ, 31ನೇ ವಾರ್ಷಿಕ ಮಹಾಸಭೆ.

Mumbai News Desk

ಕರ್ನಾಟಕ ಸಮಾಜ ಸೂರತ್ : ಜೂ29 ತುಳು ಪರ್ಬ”, ಸಾಧಕರಿಗೆ ಸನ್ಮಾನ, ನೃತ್ಯ‌, ತುಳು ನಾಟಕ.

Mumbai News Desk

ಫೆ.1ರಂದು ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ; ಪ್ರಶಸ್ತಿ ಪ್ರದಾನ

Mumbai News Desk

ಸೆ.7: ಸಾಫಲ್ಯ ಸೇವಾ ಸಂಘ, ಮುಂಬೈ – ವಿದ್ಯಾರ್ಥಿ ಸಹಾಯಧನ, ಮಹಿಳೆಯರಿಗೆ ಘರ್‌ಘಂಟಿ ವಿತರಣೆ ಹಾಗೂ ನಾನಾ ಸಮಾಜಮುಖಿ ಕಾರ್ಯಕ್ರಮಗಳು

Mumbai News Desk