July 23, 2026
Mumbai News Kannada
ಸುದ್ದಿ

ಸಾಗರ ವಿದ್ಯಾ ಮಂದಿರ ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವ ಆಚರಣೆ







ಪಡುಬಿದ್ರಿ ಸಾಗರ ವಿದ್ಯಾ ಮಂದಿರದಲ್ಲಿ ದಿ 1/11 /2025 ರ ಶನಿವಾರ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಸಂಚಾಲಕರಾದ ಸುಕುಮಾರ ಸಿ ಶ್ರೀಯಾನ್ ಅವರು ಕನ್ನಡ ಪತಾಕೆಗೆ ಹಾಗೂ ಕನ್ನಡಾಂಬೆಗೆ ಪುಷ್ಪಾರ್ಚನೆ ಮಾಡಿ ವಿದ್ಯಾರ್ಥಿಗಳಿಗೆ ಶುಭಹಾರೈಸುತ್ತಾ ,ಕನ್ನಡಿಗರಾದ ನಾವು ಕನ್ನಡ ಭಾಷೆಯ ಅಭಿಮಾನದ ಜೊತೆಗೆ ಎಲ್ಲಾ ಭಾಷೆಗಳನ್ನು ಗೌರವಿಸಬೇಕು ಎಂದು ತಿಳಿಸಿದರು.


ಎಂಟನೇ ತರಗತಿ ವಿದ್ಯಾರ್ಥಿನಿ ಆಧ್ಯ ಕನ್ನಡದ ಇತಿಹಾಸದ ಬಗ್ಗೆ ಸವಿವರವಾಗಿ ತಿಳಿಸಿದರು. ಶಾಲಾ ವಿದ್ಯಾರ್ಥಿಗಳ ಸಮೂಹ ನೃತ್ಯ ಹಾಗೂ ಸಮೂಹ ಗೀತೆಗಳು ಕನ್ನಡ ಸಂಸ್ಕೃತಿಯನ್ನು ಬಿಂಬಿಸುವಂತಿತ್ತು. ಶಾಲಾ ಮುಖ್ಯೋಪಾಧ್ಯಾಯನಿ ಪದ್ಮಶ್ರೀ ಸುರೇಶ್ ರಾವ್, ರಜತ ಮಹೋತ್ಸವ ಸಮಾರಂಭದ ಅಧ್ಯಕ್ಷರಾದ ಶಶಿಕಾಂತ್ ಪಡುಬಿದ್ರಿ ಆಡಳಿತ ಮಂಡಳಿಯ ಸದಸ್ಯರಾದ ಕೆ ಎನ್ ಚಂದ್ರಶೇಖರ್, ಲೋಕೇಶ್ ಕರ್ಕೆರ, ಪೋಷಕರು, ಶಿಕ್ಷಕರು ಶಿಕ್ಷಕೇತರವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಸುಶ್ಮಿತಾ ಸ್ವಾಗತಿಸಿದರು, ಇಂಚರ ಆರ್ ರಾವ್ ಹಾಗೂ ಕನ್ನಡ ಶಿಕ್ಷಕಿ ಅಮಿತಾ ಜಗದೀಶ್ ಕಾರ್ಯಕ್ರಮ ನಿರೂಪಿಸಿದರು. ಸ್ತುತಿ ಹೆಚ್ ಕುಂದರ್ ವಂದಿಸಿದರು. ವನದುರ್ಗ ಟ್ರಸ್ಟ್ ಪಡುಬಿದ್ರಿ ಇವರ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (26/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಶಾರದಾ ಎ.ಅಂಚನ್ ಇವರ ವೈದ್ಯಕೀಯ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (25/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ  ಕೆ. ಪ್ರಕಾಶ್ ಶೆಟ್ಟಿ.

Mumbai News Desk

ಪುಣೆ ಶ್ರೀ ಗುರುದೇವ ಸೇವಾ ಬಳಗ 20 ನೆ ವಾರ್ಷಿಕೋತ್ಸವ ಸಂಭ್ರಮ

Mumbai News Desk

ಬಾಲಿವುಡ್ ನಟ ಸೈಪ್ ಆಲಿ ಖಾನ್ ಗೆ ಚಾಕುವಿನಿಂದ ಹಲ್ಲೆ,: ಆಸ್ಪತ್ರೆಗೆ ದಾಖಲು

Mumbai News Desk