September 6, 2026
Mumbai News Kannada
ಸುದ್ದಿ

ಸಾಗರ ವಿದ್ಯಾ ಮಂದಿರ ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವ ಆಚರಣೆ





ಪಡುಬಿದ್ರಿ ಸಾಗರ ವಿದ್ಯಾ ಮಂದಿರದಲ್ಲಿ ದಿ 1/11 /2025 ರ ಶನಿವಾರ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಸಂಚಾಲಕರಾದ ಸುಕುಮಾರ ಸಿ ಶ್ರೀಯಾನ್ ಅವರು ಕನ್ನಡ ಪತಾಕೆಗೆ ಹಾಗೂ ಕನ್ನಡಾಂಬೆಗೆ ಪುಷ್ಪಾರ್ಚನೆ ಮಾಡಿ ವಿದ್ಯಾರ್ಥಿಗಳಿಗೆ ಶುಭಹಾರೈಸುತ್ತಾ ,ಕನ್ನಡಿಗರಾದ ನಾವು ಕನ್ನಡ ಭಾಷೆಯ ಅಭಿಮಾನದ ಜೊತೆಗೆ ಎಲ್ಲಾ ಭಾಷೆಗಳನ್ನು ಗೌರವಿಸಬೇಕು ಎಂದು ತಿಳಿಸಿದರು.


ಎಂಟನೇ ತರಗತಿ ವಿದ್ಯಾರ್ಥಿನಿ ಆಧ್ಯ ಕನ್ನಡದ ಇತಿಹಾಸದ ಬಗ್ಗೆ ಸವಿವರವಾಗಿ ತಿಳಿಸಿದರು. ಶಾಲಾ ವಿದ್ಯಾರ್ಥಿಗಳ ಸಮೂಹ ನೃತ್ಯ ಹಾಗೂ ಸಮೂಹ ಗೀತೆಗಳು ಕನ್ನಡ ಸಂಸ್ಕೃತಿಯನ್ನು ಬಿಂಬಿಸುವಂತಿತ್ತು. ಶಾಲಾ ಮುಖ್ಯೋಪಾಧ್ಯಾಯನಿ ಪದ್ಮಶ್ರೀ ಸುರೇಶ್ ರಾವ್, ರಜತ ಮಹೋತ್ಸವ ಸಮಾರಂಭದ ಅಧ್ಯಕ್ಷರಾದ ಶಶಿಕಾಂತ್ ಪಡುಬಿದ್ರಿ ಆಡಳಿತ ಮಂಡಳಿಯ ಸದಸ್ಯರಾದ ಕೆ ಎನ್ ಚಂದ್ರಶೇಖರ್, ಲೋಕೇಶ್ ಕರ್ಕೆರ, ಪೋಷಕರು, ಶಿಕ್ಷಕರು ಶಿಕ್ಷಕೇತರವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಸುಶ್ಮಿತಾ ಸ್ವಾಗತಿಸಿದರು, ಇಂಚರ ಆರ್ ರಾವ್ ಹಾಗೂ ಕನ್ನಡ ಶಿಕ್ಷಕಿ ಅಮಿತಾ ಜಗದೀಶ್ ಕಾರ್ಯಕ್ರಮ ನಿರೂಪಿಸಿದರು. ಸ್ತುತಿ ಹೆಚ್ ಕುಂದರ್ ವಂದಿಸಿದರು. ವನದುರ್ಗ ಟ್ರಸ್ಟ್ ಪಡುಬಿದ್ರಿ ಇವರ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.



Related posts

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವದ ಸಮಾಲೋಚನಾ ಸಭೆ

Mumbai News Desk

ಧನರಾಜ್ ಗಾಣಿಗ IBBFF ActiveFit IFBB MR UNIVERSE 2024 ಇಂಡಿಯಾ ಚಾಂಪಿಯನ್ ಆಫ್ ಚಾಂಪಿಯನ್ಸ್

Mumbai News Desk

ಛತ್ರಪತಿ ಶಿವಾಜಿ ಮಹಾರಾಜರ ಭೂಮಿಯಲ್ಲಿ ಡ್ಯಾನ್ಸ್ ಬಾರ್‌ಗಳಿಗೆ ನಿಷೇಧ ಹೇರಿದ ರಾಜ್ ಠಾಕ್ರೆ ಹೇಳಿಕೆಯ ಬೆನ್ನಲ್ಲೆ ಪನ್ವೇಲ್ ಬಾರ್ ಧ್ವಂಸಗೊಳಿಸಿದ ಎಂಎನ್‌ಎಸ್ ಕಾರ್ಯಕರ್ತರು

Mumbai News Desk

ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಗೆ ಬೆಂಕಿ – 20 ಪ್ರಯಾಣಿಕರು ಸಜೀವ ದಹನ

Mumbai News Desk

ಉಚಿತ ಗ್ಯಾರಂಟಿ ಸಂಸ್ಕೃತಿ ಮತ್ತು ದೇಶದ ಆರ್ಥಿಕತೆ: ಸುಪ್ರೀಂ ಕೋರ್ಟ್ ಎಚ್ಚರಿಕೆ

Mumbai News Desk

ಮೆಹ್ತಾ ಡಿಗ್ರಿ ಕಾಲೇಜ್ ಐರೋಲಿಯಲ್ಲಿ ಪದವಿ ಪ್ರಧಾನ ಸಮಾರಂಭ:

Mumbai News Desk