32 C
Mumbai
March 7, 2026
Mumbai News Kannada
ಕ್ರೀಡೆ

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ 5ನೇ ಟಿ20 ಪಂದ್ಯ ರದ್ದು : ಭಾರತದ ಮುಡಿಗೆ ಟಿ20 ಸರಣಿ





ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಮಳೆಗೆ ಆಹುತಿಯಾಗಿದೆ. ಬ್ರಿಸ್ಬೇನ್ ನ ಗಾಬಾ ಕ್ರೀಡಾಂಗಣದಲ್ಲಿ ಶನಿವಾರ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಬ್ಯಾಟಿಂಗ್​ಗೆ ಆಹ್ವಾನ ನೀಡಿತ್ತು. ಭಾರತೀಯ ಇನ್ನಿಂಗ್ಸ್ ನಲ್ಲಿ 4.5 ಓವರ್ ಗಳ ಆಟದ ನಂತರ ಮಳೆ ಆರಂಭವಾಯಿತು. ಆಟ ನಿಲ್ಲುವ ಹೊತ್ತಿಗೆ ಭಾರತ ತಂಡ ವಿಕೆಟ್ ನಷ್ಟವಿಲ್ಲದೆ 52 ರನ್ ಗಳಿಸಿತ್ತು. ಆರಂಭಿಕ ಬ್ಯಾಟ್ಸ್ಮನ್ ಅಭಿಷೇಕ್ ಶರ್ಮಾ 13 ಎಸೆತಗಳಲ್ಲಿ 23 ರನ್ ಗಳಿಸಿದರೆ, ಶುಭ್​ಮನ್ ಗಿಲ್ 16 ಎಸೆತಗಳಲ್ಲಿ ಅಜೇಯ 29 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತು. ಸರಣಿಯ ಮೊದಲ ಪಂದ್ಯವೂ ಮಳೆಯಲ್ಲಿ ಕೊಚ್ಚಿ ಹೋಗಿತ್ತು. ಈ ಪ್ರವಾಸದಲ್ಲಿ ಆಸ್ಟ್ರೇಲಿಯಾ ಏಕದಿನ ಸರಣಿಯನ್ನ 2-1ರಲ್ಲಿ ಗೆದ್ದರೆ, ಭಾರತ ಟಿ20 ಸರಣಿಯನ್ನ ತನ್ನದಾಗಿಸಿಕೊಂಡಿತು
ಕ್ಯಾನ್ಬೆರಾದಲ್ಲಿ ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ನಂತರ 2ನೇ ಪಂದ್ಯದಲ್ಲಿ ಮೆಲ್ಬೋರ್ನ್​​ನಲ್ಲಿ ಭಾರತ ವಿರುದ್ಧ ಸಂಪೂರ್ಣ ಪ್ರಾಬಲ್ಯ ಸಾಧಿಸಿ ಆಸ್ಟ್ರೇಲಿಯಾ 40 ಎಸೆಗಳಿರುವಂತೆಯೇ ಭಾರತ ನೀಡಿದ್ದ 126 ರನ್​ಗಳ ಗುರಿಯನ್ನ ಬೆನ್ನಟ್ಟಿತ್ತು. ನಂತರ ಭಾರತ ತಂಡ ಹೋಬರ್ಟ್​​ನಲ್ಲಿ 3ನೇ ಪಂದ್ಯದಲ್ಲಿ ಆಸೀಸ್ ನೀಡಿದ್ದ 187 ರನ್​ಗಳ ಗುರಿಯನ್ನ 9 ಎಸೆತಗಳಿರುವಂತೆ ಗೆದ್ದು ಸರಣಿಯನ್ನ 1-1ರಲ್ಲಿ ಸಮಬಲ ಸಾಧಿಸಿತ್ತು. ಗೋಲ್ಡ್ ಕಾಸ್ಟ್​​ನಲ್ಲಿ ನಡೆದ 4ನೇ ಪಂದ್ಯದಲ್ಲಿ ಭಾರತ 168 ರನ್​ಗಳ ಗುರಿಯನ್ನ ಯಶಸ್ವಿಯಾಗಿ ಡಿಫೆಂಡ್ ಮಾಡಿಕೊಂಡು 2-1ರಲ್ಲಿ ಸರಣಿ ಮುನ್ನಡೆ ಸಾಧಿಸಿತ್ತು. ಇದೀಗ ಕೊನೆಯ ಪಂದ್ಯ ಮಳೆಯಿಂದ ರದ್ದಾದ ಕಾರಣ ಭಾರತ ಸರಣಿಯನ್ನ ತನ್ನದಾಗಿಸಿಕೊಂಡಿದೆ.



Related posts

ಗಿರೀಶ್ ಶೆಟ್ಟಿ ತೆಳ್ಳಾರ್ ನೇತೃತ್ವದಲ್ಲಿ ಮೇ 3 ರಂದು  ಮುನಿಯಾಲಿನಲ್ಲಿ ರಾಷ್ಟ್ರೀಯ ಕಬ್ಬಡಿ ಆಟಗಾರ ಪ್ರೀತಂ ಶೆಟ್ಟಿ ಸ್ಮರಣಾರ್ಥ ರಾಷ್ಟ್ರ ಮಟ್ಟದ ಪ್ರೊ ಕಬಡ್ಡಿ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ (ಮೀರಾ-ಭಾಯಂದರ್ ಶಾಖೆ): ಕ್ರೀಡಾಕೂಟ – 2026 ಸಂಭ್ರಮ

Mumbai News Desk

ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್: ಥಾಣೆಯ ಆರೋಹಿ ಎಸ್ ಪೂಜಾರಿಗೆ ಚಿನ್ನ ಮತ್ತು ಕಂಚಿನ ಪದಕಗಳ ಸಾಧನೆ

Mumbai News Desk

ಆಸ್ಟ್ರೇಲಿಯಾದಲ್ಲಿ ಟೀಮ್ ಇಂಡಿಯಾಗೆ ಮಹಾಮೋಸ – ಅನ್ಯಾಯದ ತೀರ್ಪಿಗೆ ಯಶಸ್ವಿ ಜೈಸ್ವಾಲ್ ಬಲಿ.

Mumbai News Desk

ಸುರತ್ಕಲ್ ಬಂಟರ ಸಂಘದ ವಾರ್ಷಿಕ ಕ್ರೀಡಾಕೂಟ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬೈ ‘ಸಾಫಲ್ಯ ಕ್ರೀಡಾ ಸ್ಪರ್ಧೆ – 2026’

Mumbai News Desk