July 23, 2026
Mumbai News Kannada
ಕ್ರೀಡೆ

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ 5ನೇ ಟಿ20 ಪಂದ್ಯ ರದ್ದು : ಭಾರತದ ಮುಡಿಗೆ ಟಿ20 ಸರಣಿ







ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಮಳೆಗೆ ಆಹುತಿಯಾಗಿದೆ. ಬ್ರಿಸ್ಬೇನ್ ನ ಗಾಬಾ ಕ್ರೀಡಾಂಗಣದಲ್ಲಿ ಶನಿವಾರ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಬ್ಯಾಟಿಂಗ್​ಗೆ ಆಹ್ವಾನ ನೀಡಿತ್ತು. ಭಾರತೀಯ ಇನ್ನಿಂಗ್ಸ್ ನಲ್ಲಿ 4.5 ಓವರ್ ಗಳ ಆಟದ ನಂತರ ಮಳೆ ಆರಂಭವಾಯಿತು. ಆಟ ನಿಲ್ಲುವ ಹೊತ್ತಿಗೆ ಭಾರತ ತಂಡ ವಿಕೆಟ್ ನಷ್ಟವಿಲ್ಲದೆ 52 ರನ್ ಗಳಿಸಿತ್ತು. ಆರಂಭಿಕ ಬ್ಯಾಟ್ಸ್ಮನ್ ಅಭಿಷೇಕ್ ಶರ್ಮಾ 13 ಎಸೆತಗಳಲ್ಲಿ 23 ರನ್ ಗಳಿಸಿದರೆ, ಶುಭ್​ಮನ್ ಗಿಲ್ 16 ಎಸೆತಗಳಲ್ಲಿ ಅಜೇಯ 29 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತು. ಸರಣಿಯ ಮೊದಲ ಪಂದ್ಯವೂ ಮಳೆಯಲ್ಲಿ ಕೊಚ್ಚಿ ಹೋಗಿತ್ತು. ಈ ಪ್ರವಾಸದಲ್ಲಿ ಆಸ್ಟ್ರೇಲಿಯಾ ಏಕದಿನ ಸರಣಿಯನ್ನ 2-1ರಲ್ಲಿ ಗೆದ್ದರೆ, ಭಾರತ ಟಿ20 ಸರಣಿಯನ್ನ ತನ್ನದಾಗಿಸಿಕೊಂಡಿತು
ಕ್ಯಾನ್ಬೆರಾದಲ್ಲಿ ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ನಂತರ 2ನೇ ಪಂದ್ಯದಲ್ಲಿ ಮೆಲ್ಬೋರ್ನ್​​ನಲ್ಲಿ ಭಾರತ ವಿರುದ್ಧ ಸಂಪೂರ್ಣ ಪ್ರಾಬಲ್ಯ ಸಾಧಿಸಿ ಆಸ್ಟ್ರೇಲಿಯಾ 40 ಎಸೆಗಳಿರುವಂತೆಯೇ ಭಾರತ ನೀಡಿದ್ದ 126 ರನ್​ಗಳ ಗುರಿಯನ್ನ ಬೆನ್ನಟ್ಟಿತ್ತು. ನಂತರ ಭಾರತ ತಂಡ ಹೋಬರ್ಟ್​​ನಲ್ಲಿ 3ನೇ ಪಂದ್ಯದಲ್ಲಿ ಆಸೀಸ್ ನೀಡಿದ್ದ 187 ರನ್​ಗಳ ಗುರಿಯನ್ನ 9 ಎಸೆತಗಳಿರುವಂತೆ ಗೆದ್ದು ಸರಣಿಯನ್ನ 1-1ರಲ್ಲಿ ಸಮಬಲ ಸಾಧಿಸಿತ್ತು. ಗೋಲ್ಡ್ ಕಾಸ್ಟ್​​ನಲ್ಲಿ ನಡೆದ 4ನೇ ಪಂದ್ಯದಲ್ಲಿ ಭಾರತ 168 ರನ್​ಗಳ ಗುರಿಯನ್ನ ಯಶಸ್ವಿಯಾಗಿ ಡಿಫೆಂಡ್ ಮಾಡಿಕೊಂಡು 2-1ರಲ್ಲಿ ಸರಣಿ ಮುನ್ನಡೆ ಸಾಧಿಸಿತ್ತು. ಇದೀಗ ಕೊನೆಯ ಪಂದ್ಯ ಮಳೆಯಿಂದ ರದ್ದಾದ ಕಾರಣ ಭಾರತ ಸರಣಿಯನ್ನ ತನ್ನದಾಗಿಸಿಕೊಂಡಿದೆ.



Related posts

ವರ್ಲ್ಡ್ ಮಾಸ್ಟರ್ಸ್ ವೈಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ –ಉದಯ ಶೆಟ್ಟಿ ಯವರ ಮಾರ್ಗದರ್ಶನದಲ್ಲಿ ಭಾರತ ತಂಡ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಮುಂಬಯಿ : ವಾರ್ಷಿಕ ಕ್ರೀಡೋತ್ಸವದ ಉದ್ಘಾಟನೆ

Mumbai News Desk

ಡೊಂಬಿವಲಿ ಕರ್ನಾಟಕ ಸಂಘ:ಕ್ರೀಡಾ ವಿಭಾಗದ ಒಳಾಂಗಣ ಕ್ರೀಡಾಕೂಟಕ್ಕೆ ಅದ್ದೂರಿಯ ಚಾಲನೆ     

Mumbai News Desk

ಉಡುಪಿ : ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ, ಪಡುಬಿದ್ರಿ ಸಾಗರ ವಿದ್ಯಾ ಮಂದಿರ ಶಾಲೆಗೆ ಪ್ರಥಮ ಸ್ಥಾನ.

Mumbai News Desk

ಕರ್ನಾಟಕ ಸಂಘ ಪನ್ವೆಲ್ ನ 32ನೇ ವರುಷದ ವಾರ್ಷಿಕ ಕ್ರೀಡಾ ಕೂಟ.

Mumbai News Desk

ಮುಂಬೈ ಮ್ಯಾರಥಾನ್‌ನಲ್ಲಿ ವೈದ್ಯನ ‘ಗೋಲ್ಡನ್’ ಓಟ: ಆರ್ಥೋಪೆಡಿಕ್ ಸರ್ಜನ್ ಕಾರ್ತಿಕ್ ಕರ್ಕೇರಗೆ ಚಿನ್ನದ ಪದಕ

Mumbai News Desk