27.7 C
Mumbai
July 23, 2026
Mumbai News Kannada
ತುಳುನಾಡು

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ವಿಜೃಂಭಣೆಯ ಮುಷ್ಟಿ ಕಾಣಿಕೆ ಸಮರ್ಪಣೆ







ವರದಿ : ಈಶ್ವರ ಎಂ. ಐಲ್

ಮುಂಬಯಿ : ಮುಲ್ಕಿ ಹಳೆಯಂಗಡಿ ಸಸಿಹಿತ್ತು ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮಹೋತ್ಸವ ಮಾರ್ಚ್ 4 ರಿಂದ 8 ರವರೆಗೆ ನಡೆಯಲಿದ್ದು ಪೂರ್ವಭಾವಿಯಾಗಿ ಮುಷ್ಟಿ ಕಾಣಿಕೆ ಸಮರ್ಪಣೆ ಮತ್ತು ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದ ಆವರಣದಲ್ಲಿ ನ. 9 ರಂದು ಕ್ಷೇತ್ರದಲ್ಲಿ ವಿಜೃಂಭಣೆಯಿಂದ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಶ್ರೀಪತಿ ಭಟ್ ಹೊಯ್ಕೆಗುಡ್ಡೆ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಕ್ಷೇತ್ರದ ಅರ್ಚಕ ಹಾಗೂ ಅನುವಂಶಿಕ ಮೊಕೇಸರ ಅಪ್ಪು ಯಾನೆ ಶ್ರೀನಿವಾಸ ಪೂಜಾರಿ, ಮುಷ್ಟಿ ಕಾಣಿಕೆಗೆ ಚಾಲನೆ ನೀಡಿದರು.

ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮುಂಬಯಿಯ ನ್ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ, ಕ್ಷೇತ್ರದ ಆಡಳಿತ ಮೊಕ್ತೇಸರ ಚಂದ್ರಶೇಖರ ಬೆಳ್ಚಡ, ಆಡಳಿತ ಸಮಿತಿಯ ಅಧ್ಯಕ್ಷ ವಾಮನ್ ಇಡ್ಯಾ, ಮುಂಬಯಿಯ ಉದ್ಯಮಿ ಧರ್ಮಪಾಲ ದೇವಾಡಿಗ, ಬ್ರಹ್ಮಕಲಶೋತ್ಸವ ಮುಂಬಯಿ ಸಮಿತಿಯ ಅಧ್ಯಕ್ಷ ವೇದಪ್ರಕಾಶ್ ಎಂ ಶ್ರೀಯಾನ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಭಾಕರ ಪೂಜಾರಿ,ಹಳೆಯಂಗಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪೂರ್ಣಿಮಾ, ಉದ್ಯಮಿ ಸುನೀಲ್ ಪಾಯಸ್ ಮಂಗಳೂರು ಮತ್ತಿತರರು ಉಪಸ್ಥಿತರಿದ್ದರು. ರಾಜೇಂದ್ರ ಕುಮಾರ್ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.



Related posts

ಮೂಲ್ಕಿ : ಚಿತ್ರಾಪು ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

Mumbai News Desk

ಬಿಲ್ಲವ, ಬಂಟರ ವಿರುದ್ಧ ಅವಹೇಳನಕಾರಿ ಹೇಳಿಕೆ: ಅನಿತಾ ಕಾಸರಗೋಡು ವಿರುದ್ಧ ಕ್ರಮಕ್ಕೆ ದೂರು

Mumbai News Desk

ಮೂಲ್ಕಿ ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜೃಂಭಣೆಯ ದೃಢ ಕಲಶಾಭಿಷೇಕ

Mumbai News Desk

ಕೋಸ್ಟಲ್ ಫಿಲ್ಮ್ ಅವಾರ್ಡ್ಸ್: “ಜೈ” ತುಳು ಚಿತ್ರದ ನಟನೆಗೆ ಅಕ್ಷರ್ ಜಗನ್ನಾಥ್ ಶೆಟ್ಟಿ ಬಾಳಗೆ ಅತ್ಯುತ್ತಮ ಬಾಲನಟ ಪ್ರಶಸ್ತಿ

Mumbai News Desk

ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ 108 ಕ್ಷೇತ್ರ ಪ್ರದಕ್ಷಿಣೆಯ ಅಂಗವಾಗಿ ಕಾಪು ಶ್ರೀ ಮಾರಿಯಮ್ಮನ ದರುಶನ

Mumbai News Desk

ಶ್ರದ್ದಾ ಭಕ್ತಿಯಿಂದ ನೆರೆದ ಜನ ಸಾಗರದೊಂದಿಗೆ ಸಸಿಹಿತ್ಲು ಶ್ರೀ ಭಗವತೀ ದೇವಿಗೆ ಅದ್ದೂರಿಯ ಬ್ರಹ್ಮಕಲಶೋತ್ಸವ

Mumbai News Desk