July 23, 2026
Mumbai News Kannada
ಪ್ರಕಟಣೆ

ಕರ್ನಾಟಕ ಸಂಘ, ಕಲ್ಯಾಣ: ನ.23 ರಂದು ಕರ್ನಾಟಕ ರಾಜ್ಯೋತ್ಸವ ಮತ್ತು 23ನೇ ವಾರ್ಷಿಕೋತ್ಸವ







12/11/25,ಕಲ್ಯಾಣ (ಪ): ಕರ್ನಾಟಕ ಅಭಿಮಾನಿಗಳೇ, ಪ್ರತಿ ವರ್ಷದಂತೆ ಈ ವರ್ಷ ಕರ್ನಾಟಕ ರಾಜ್ಯೋತ್ಸವ ಹಾಗೂ ಸಂಘದ 23ನೇ ವಾರ್ಷಿಕೋತ್ಸವವನ್ನು 23ನೇ ನವೆಂಬರ್ 2025ರಂದು ಸಂಜೆ ಕಲ್ಯಾಣ(ಪ) ಪರಿಸರದ ಗಿರಿಜಾ ಪಯ್ಯಾಡೆ ಸಭಾಗ್ರಹದಲ್ಲಿ ಸಂಜೆ 5ರಿಂದ ಆಚರಿಸಲಾಗುವುದು. ಅದ್ದೂರಿಯಾಗಿ ಆಚರಿಸಲ್ಪಡುವ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬಂಟರ ಸಂಘ, ಮುಂಬಯಿಯ ಭೀವಂಡಿ – ಬದ್ಲಾಪುರ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಸುಭೋದ ಭಂಡಾರಿ ಹಾಗೂ ಪ್ರತಿಷ್ಠಿತ ಡೊಂಬಿವಲಿ ಕರ್ನಾಟಕ ಸಂಘದ ಗೌರವ ಕಾರ್ಯದರ್ಶಿಗಳಾದ ಪ್ರೊ. ಅಜಿತ್ ಉಮ್ರಾಣಿಯವರು ಗೌರವ ಅತಿಥಿಯಾಗಿ ಆಗಮಿಸಲಿದ್ದಾರೆ. ವಿವಿಧ ಮನೋರಂಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕೂಡಿದ ಈ ಕಾರ್ಯಕ್ರಮದಲ್ಲಿ ಹೋಟೆಲ್ ಉದ್ಯಮ ಕ್ಷೇತ್ರದಲ್ಲಿ ಹೋಟೆಲ್ ಡಾಲ್ಫಿನ್ ಮಾಲಿಕರಾದ ಶ್ರೀ ಸದಾನಂದ ಶೆಟ್ಟಿಯವರನ್ನು, ಕಲಾವಿದೆ ಪ್ರವೀಣಾ ಶೆಟ್ಟಿಯವರನ್ನು ಸಮಾಜ ಸೇವೆ ಕ್ಷೇತ್ರದಲ್ಲಿ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಎಲ್ಲರಿಗೂ ಪರಿಚಿತ ಉದಯವಾಣಿ ಪತ್ರಕರ್ತ ಶ್ರೀ ಗುರುರಾಜ ಪೊಟ್ನಿಸ್ ರವರನ್ನು ಸನ್ಮಾನಿಸಲಾಗುವುದು. ಜೊತೆಗೆ 16 ನವೆಂಬರ್ 25 ಸಂಜೆ 3 ರಿಂದ ಸಂಘದ ಕಾರ್ಯಾಲಯದಲ್ಲಿ ಸಂಘದ ಸದಸ್ಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸಂಘದ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಎಲ್ಲಾ ಕರ್ನಾಟಕ ಬಾಂಧವರು ಆಗಮಿಸಿ ನಮ್ಮ ಆದರಾತಿಥ್ಯವನ್ನು ಸ್ವೀಕರಿಸಿ ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕಾಗಿ ಸಮಸ್ತ ಸಂಘದ ಸದಸ್ಯರ ಪರವಾಗಿ ಅಧ್ಯಕ್ಷ ಶ್ರೀ ಜಯಂತ ದೇಶಮುಖರವರು ವಿನಂತಿಸಿ ಕೊಂಡಿದ್ದಾರೆ.



Related posts

ಮರಳುಗಾಡಿನಿಂದ ಮಹಾನಗರಕ್ಕೆ ಗಮ್ಮತ್ ಕಲಾವಿದೆರ್, ಅ. 27ರಂದು ಕನ್ನಡ ಸಂಘ ಸಯನ್ ನ ವಾರ್ಷಿಕೋತ್ಸವದ ಅಂಗವಾಗಿ ದುಬಾಯಿಯ ಕಲಾವಿದರಿಂದ “ವಾ ಗಳಿಗೆಡ್ ಪುಟುದನಾ” ತುಳು ಹಾಸ್ಯಮಯ ನಾಟಕ ಪ್ರದರ್ಶನ

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್. ಡಿ.27 ರಂದು 14 ನೆಯ ವಾರ್ಷಿಕ ಪ್ರತಿಷ್ಟಾಪನೋತ್ಸವ.

Mumbai News Desk

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು, ಮಹಾರಾಷ್ಟ್ರ ಘಟಕ ವತಿಯಿಂದ ಅಖಿಲ ಭಾರತ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನ

Mumbai News Desk

ಮಲಾಡ್: ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಇಂದು (ಏಪ್ರಿಲ್ 11) ಧರ್ಮ ದೈವಗಳ ಗಗ್ಗರ ಸೇವೆ (ಕೋಲ)

Mumbai News Desk

ಜೂ. 21 : ವಸಯಿ ಕರ್ನಾಟಕ ಸಂಘದ ವತಿಯಿಂದ ವಿಶ್ವ ಯೋಗ ದಿನಾಚರಣೆ

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿಯ ವತಿಯಿಂದ ಆ 15 ರಂದು ಹದಿನೆಂಟನೆಯ ವರ್ಷದ ಸಾಮೂಹಿಕ ಸತ್ಯನಾರಾಯಣ ಮಹಾ ಪೂಜೆ

Mumbai News Desk