September 6, 2026
Mumbai News Kannada
ಪ್ರಕಟಣೆ

ಕರ್ನಾಟಕ ಸಂಘ, ಕಲ್ಯಾಣ: ನ.23 ರಂದು ಕರ್ನಾಟಕ ರಾಜ್ಯೋತ್ಸವ ಮತ್ತು 23ನೇ ವಾರ್ಷಿಕೋತ್ಸವ





12/11/25,ಕಲ್ಯಾಣ (ಪ): ಕರ್ನಾಟಕ ಅಭಿಮಾನಿಗಳೇ, ಪ್ರತಿ ವರ್ಷದಂತೆ ಈ ವರ್ಷ ಕರ್ನಾಟಕ ರಾಜ್ಯೋತ್ಸವ ಹಾಗೂ ಸಂಘದ 23ನೇ ವಾರ್ಷಿಕೋತ್ಸವವನ್ನು 23ನೇ ನವೆಂಬರ್ 2025ರಂದು ಸಂಜೆ ಕಲ್ಯಾಣ(ಪ) ಪರಿಸರದ ಗಿರಿಜಾ ಪಯ್ಯಾಡೆ ಸಭಾಗ್ರಹದಲ್ಲಿ ಸಂಜೆ 5ರಿಂದ ಆಚರಿಸಲಾಗುವುದು. ಅದ್ದೂರಿಯಾಗಿ ಆಚರಿಸಲ್ಪಡುವ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬಂಟರ ಸಂಘ, ಮುಂಬಯಿಯ ಭೀವಂಡಿ – ಬದ್ಲಾಪುರ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಸುಭೋದ ಭಂಡಾರಿ ಹಾಗೂ ಪ್ರತಿಷ್ಠಿತ ಡೊಂಬಿವಲಿ ಕರ್ನಾಟಕ ಸಂಘದ ಗೌರವ ಕಾರ್ಯದರ್ಶಿಗಳಾದ ಪ್ರೊ. ಅಜಿತ್ ಉಮ್ರಾಣಿಯವರು ಗೌರವ ಅತಿಥಿಯಾಗಿ ಆಗಮಿಸಲಿದ್ದಾರೆ. ವಿವಿಧ ಮನೋರಂಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕೂಡಿದ ಈ ಕಾರ್ಯಕ್ರಮದಲ್ಲಿ ಹೋಟೆಲ್ ಉದ್ಯಮ ಕ್ಷೇತ್ರದಲ್ಲಿ ಹೋಟೆಲ್ ಡಾಲ್ಫಿನ್ ಮಾಲಿಕರಾದ ಶ್ರೀ ಸದಾನಂದ ಶೆಟ್ಟಿಯವರನ್ನು, ಕಲಾವಿದೆ ಪ್ರವೀಣಾ ಶೆಟ್ಟಿಯವರನ್ನು ಸಮಾಜ ಸೇವೆ ಕ್ಷೇತ್ರದಲ್ಲಿ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಎಲ್ಲರಿಗೂ ಪರಿಚಿತ ಉದಯವಾಣಿ ಪತ್ರಕರ್ತ ಶ್ರೀ ಗುರುರಾಜ ಪೊಟ್ನಿಸ್ ರವರನ್ನು ಸನ್ಮಾನಿಸಲಾಗುವುದು. ಜೊತೆಗೆ 16 ನವೆಂಬರ್ 25 ಸಂಜೆ 3 ರಿಂದ ಸಂಘದ ಕಾರ್ಯಾಲಯದಲ್ಲಿ ಸಂಘದ ಸದಸ್ಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸಂಘದ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಎಲ್ಲಾ ಕರ್ನಾಟಕ ಬಾಂಧವರು ಆಗಮಿಸಿ ನಮ್ಮ ಆದರಾತಿಥ್ಯವನ್ನು ಸ್ವೀಕರಿಸಿ ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕಾಗಿ ಸಮಸ್ತ ಸಂಘದ ಸದಸ್ಯರ ಪರವಾಗಿ ಅಧ್ಯಕ್ಷ ಶ್ರೀ ಜಯಂತ ದೇಶಮುಖರವರು ವಿನಂತಿಸಿ ಕೊಂಡಿದ್ದಾರೆ.



Related posts

ಕಾಪು ಹೊಸ ಮಾರಿಗುಡಿಯಲ್ಲಿ ಫೆ. 28ರಿಂದ ‘ಪ್ರತಿಷ್ಠಾ ವರ್ಧಂತಿ ಮಹೋತ್ಸವ’: ಶ್ರೀಚಕ್ರ ಯಂತ್ರ ದರ್ಶನಕ್ಕೆ ಅಪರೂಪದ ಅವಕಾಶ

Mumbai News Desk

ಮುಲ್ಕಿ: ಉಚಿತ ಆರೋಗ್ಯ ತಪಾಸಣಾ ಶಿಬಿರ: ಸಾರ್ವಜನಿಕರಿಗೆ ಸೇವೆಯ ಸದುಪಯೋಗ ಪಡೆದುಕೊಳ್ಳಲು ಕರೆ

Mumbai News Desk

ನ. 1ರಂದು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋದಯ 70ರ ಸಂಭ್ರಮ.

Mumbai News Desk

ಮಹತೋಭಾರ ಶನೀಶ್ವರ ದೇವಸ್ಥಾನ – ಸುವರ್ಣ ಸಂಭ್ರಮದ ಸರಣಿ ಕಾರ್ಯಕ್ರಮ 

Mumbai News Desk

ಅ. 5 ರಂದು ಸಾಂತಾಕ್ರೂಸ್ ಪೇಜಾವರ ಮಠದಲ್ಲಿ ಕುಲಾಲ ಭವನ ಮಂಗಳೂರು ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಫೆ. 22 ರಂದು ಬಿಲ್ಲವರ ಅಸೋಸಿಯೇಶನ್ ಮುಂಬಯಿ, ಡೊಂಬಿವಲಿ ಸ್ಥಳೀಯ ಕಛೇರಿಯಲ್ಲಿ ವಾರ್ಷಿಕ ಶನಿಗ್ರಂಥ ಪಾರಾಯಣ

Mumbai News Desk