September 6, 2026
Mumbai News Kannada
ಸುದ್ದಿ

ಕರ್ನಾಟಕ : ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಹೈಕೋರ್ಟ್ನಿಂದ ಷರತ್ತುಬದ್ಧ ಅನುಮತಿ





ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಪಥಸಂಚಲನಕ್ಕೆ ಅನುಮತಿ ನೀಡಿರುವ ಬಗ್ಗೆ ಹೈಕೋರ್ಟ್​ಗೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ನ.16ರ ಮಧ್ಯಾಹ್ನ 3.30ರಿಂದ ಸೂರ್ಯಾಸ್ತದವರೆಗೆ ಅವಕಾಶ ನೀಡಲಾಗಿದೆ. ಪಥಸಂಚಲನದಲ್ಲಿ 300 ಕಾರ್ಯಕರ್ತರು ಹಾಗೂ 25 ಬ್ಯಾಂಡ್ ವಾದಕರಿಗೆ ಅವಕಾಶ ನೀಡಲಾಗಿದ್ದು, ಒಟ್ಟು 325 ಜನ ಮಾತ್ರ ಭಾಗಿಯಾಗಬೇಕು ಎಂದು ತಿಳಿಸಿದೆ

ನವೆಂಬರ್​ 7ರಂದು ಇದೇ ವಿಚಾರವಾಗಿ ಕಲಬುರಗಿ ವಿಭಾಗೀಯ ಪೀಠದಲ್ಲಿ ನಡೆದಿದ್ದ ವಿಚಾರಣೆ ವೇಳೆ, ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದು, ಜಿಲ್ಲಾಡಳಿತಕ್ಕೆ ನಾವು ನಮ್ಮ ಪ್ರಸ್ತಾವನೆ ನೀಡಿದ್ದೇವೆ. ಸರ್ಕಾರದ ನಿರ್ಧಾರವನ್ನು ಅಡ್ವೊಕೆಟ್ ಜನರಲ್ ತಿಳಿಸಬೇಕು ಎಂದು ಹೇಳಿದ್ದರು. ಜಿಲ್ಲಾಡಳಿತ ಪರವಾಗಿ ವಾದ ಮಾಡಿದ್ದ ಅಡ್ವೊಕೆಟ್ ಜನರಲ್ ಶಶಿಕರಣ್​ ಶೆಟ್ಟಿ, ಪಥಸಂಚನಲಕ್ಕಾಗಿ 11 ಅರ್ಜಿಗಳು ಸಲ್ಲಿಕೆಯಾಗಿವೆ. ಅವುಗಳನ್ನು ಪರಿಶೀಲಿಸಲಾಗಿದ್ದು, ಪ್ರತಿಯೊಬ್ಬರಿಗೂ ಪ್ರತ್ಯೇಕ ದಿನ ಅವಕಾಶ ನೀಡಲು ಚಿಂತಿಸಲಾಗಿದೆ. ಇದಕ್ಕಾಗಿಒಂದು ವಾರ ಕಾಲಾವಕಾಶ ನೀಡುವಂತೆ ನ್ಯಾಯಾಲಕ್ಕೆ ಮನವಿ ಮಾಡಿದ್ದರು. ನ. 13 ಅಥವಾ 16ರಂದು ಕಾರ್ಯಕ್ರಮಕ್ಕೆ ಕಲ್ಯಾಣ ಮಂಟಪ ಲಭ್ಯವಿದೆ . ಹೀಗಾಗಿ ಅದೇ ದಿನಾಂಕದಲ್ಲಿ ಅನುಮತಿ ನೀಡಿ ಎಂದು ಈ ವೇಳೆ ಅರ್ಜಿದಾರು ಮನವಿ ಮಾಡಿದ್ದು, ಈ ಬಗ್ಗೆ ನಿರ್ಧರಿಸಲಾಗುವುದು ಎಂದು ಎಜಿ ನ್ಯಾಯಾಲಯಕ್ಕೆ ತಿಳಿಸಿದ್ದರು. ಈಗ ಅರ್ಜಿದಾರರ ಮನವಿಯಂತೆ ನ.16ರಂದು ಪಥಸಂಸಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ.



Related posts

ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ

Mumbai News Desk

ಬೊಯಿಸರ್ ಸೋಮೇಶ್ವರ ಮಂದಿರ :17ನೇ ವರ್ಧಂತ್ಯುತ್ಸವ ಸಂಪನ್ನ  

Mumbai News Desk

ರಹೀಂ ಹತ್ಯೆ ಘಟನೆ ನೆಪದಲ್ಲಿ ಹಿಂದೂ ನಾಯಕರ ಧ್ವನಿ ಅಡಗಿಸುವ ಷಡ್ಯಂತ್ರ, ರಾಜ್ಯ ಪೊಲೀಸ್ ಮಹಾನಿರ್ದೇಶ ರಿಗೆ ಮನವಿ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (02/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಸ್ಥಳೀಯರ ಹಕ್ಕುಗಳ ರಕ್ಷಣೆಗೆ ಬೃಹತ್ ಪ್ರತಿಭಟನೆ: ಹೆಜಮಾಡಿ–ಪಡುಬಿದ್ರಿ ಟೋಲ್ ಹೋರಾಟ ಸಮಿತಿಯಿಂದ ಪೋಸ್ಟರ್ ರಿಲೀಸ್

Mumbai News Desk

ಭಾರತ್ ಬ್ಯಾಂಕ್ ಗೆ ಅತ್ಯುತ್ತಮ ಮಾನವ ಸಂಪನ್ಮೂಲ ನಿರ್ವಹಣಾ ಪ್ರಶಸ್ತಿ ( Best HR Management Award )

Mumbai News Desk