30.9 C
Mumbai
June 8, 2026
Mumbai News Kannada
ಪ್ರಕಟಣೆ

ಕರ್ನಾಟಕ ಸಂಘ, ಕಲ್ಯಾಣ: 23 ರಂದು ಕರ್ನಾಟಕ ರಾಜ್ಯೋತ್ಸವ ಮತ್ತು 23ನೇ ವಾರ್ಷಿಕೋತ್ಸವ





ಕರ್ನಾಟಕ ಸಂಘ, ಕಲ್ಯಾಣ
ಕರ್ನಾಟಕ ರಾಜ್ಯೋತ್ಸವ ಮತ್ತು 23ನೇ ವಾರ್ಷಿಕೋತ್ಸವ
12/11/25,ಕಲ್ಯಾಣ (ಪ): ಕರ್ನಾಟಕ ಅಭಿಮಾನಿಗಳೇ, ಪ್ರತಿ ವರ್ಷದಂತೆ ಈ ವರ್ಷ ಕರ್ನಾಟಕ ರಾಜ್ಯೋತ್ಸವ ಹಾಗೂ ಸಂಘದ 23ನೇ ವಾರ್ಷಿಕೋತ್ಸವವನ್ನು 23ನೇ ನವೆಂಬರ್ 2025ರಂದು ಸಂಜೆ ಕಲ್ಯಾಣ(ಪ) ಪರಿಸರದ ಗಿರಿಜಾ ಪಯ್ಯಾಡೆ ಸಭಾಗ್ರಹದಲ್ಲಿ ಸಂಜೆ 5ರಿಂದ ಆಚರಿಸಲಾಗುವುದು. ಅದ್ದೂರಿಯಾಗಿ ಆಚರಿಸಲ್ಪಡುವ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬಂಟರ ಸಂಘ, ಮುಂಬಯಿಯ ಭೀವಂಡಿ – ಬದ್ಲಾಪುರ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಸುಭೋದ ಭಂಡಾರಿ ಹಾಗೂ ಪ್ರತಿಷ್ಠಿತ ಡೊಂಬಿವಲಿ ಕರ್ನಾಟಕ ಸಂಘದ ಗೌರವ ಕಾರ್ಯದರ್ಶಿಗಳಾದ ಪ್ರೊ. ಅಜಿತ್ ಉಮ್ರಾಣಿಯವರು ಗೌರವ ಅತಿಥಿಯಾಗಿ ಆಗಮಿಸಲಿದ್ದಾರೆ. ವಿವಿಧ ಮನೋರಂಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕೂಡಿದ ಈ ಕಾರ್ಯಕ್ರಮದಲ್ಲಿ ಹೋಟೆಲ್ ಉದ್ಯಮ ಕ್ಷೇತ್ರದಲ್ಲಿ ಹೋಟೆಲ್ ಡಾಲ್ಫಿನ್ ಮಾಲಿಕರಾದ ಶ್ರೀ ಸದಾನಂದ ಶೆಟ್ಟಿಯವರನ್ನು, ಕಲಾವಿದೆ ಪ್ರವೀಣಾ ಶೆಟ್ಟಿಯವರನ್ನು ಸಮಾಜ ಸೇವೆ ಕ್ಷೇತ್ರದಲ್ಲಿ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಎಲ್ಲರಿಗೂ ಪರಿಚಿತ ಉದಯವಾಣಿ ಪತ್ರಕರ್ತ ಶ್ರೀ ಗುರುರಾಜ ಪೊಟ್ನಿಸ್ ರವರನ್ನು ಸನ್ಮಾನಿಸಲಾಗುವುದು. ಅಲ್ಲದೆ ವರಿಷ್ಠ ನಾಗರಿಕ ಹಾಗೂ ಹಿಂದುಸ್ತಾನೀ ಸಂಗೀತ ಶಿಕ್ಷಕಿಯಾದ ಶ್ರೀಮತಿ ನಳಿನಿ ಕೊಟ್ಟಲಗಿಯವರನ್ನು ಸನ್ಮಾನಿಸಲಾಗುವುದು. ಜೊತೆಗೆ 16 ನವೆಂಬರ್ 25 ಸಂಜೆ 3 ರಿಂದ ಸಂಘದ ಕಾರ್ಯಾಲಯದಲ್ಲಿ ಸಂಘದ ಸದಸ್ಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸಂಘದ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಎಲ್ಲಾ ಕರ್ನಾಟಕ ಬಾಂಧವರು ಆಗಮಿಸಿ ನಮ್ಮ ಆದರಾತಿಥ್ಯವನ್ನು ಸ್ವೀಕರಿಸಿ ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕಾಗಿ ಸಮಸ್ತ ಸಂಘದ ಸದಸ್ಯರ ಪರವಾಗಿ ಅಧ್ಯಕ್ಷ ಶ್ರೀ ಜಯಂತ ದೇಶಮುಖರವರು ವಿನಂತಿಸಿ ಕೊಂಡಿದ್ದಾರೆ.



Related posts

ಜ.14 ರಿಂದ 23ರ ತನಕ ಶ್ರೀ ಕ್ಷೇತ್ರ ಕಾಂತಾವರದ ವರ್ಷಾವಧಿ ಜಾತ್ರಾ ಮಹೋತ್ಸವ.

Mumbai News Desk

ಬೊರಿವಿಲಿ ಶ್ರೀ ಮಹೀಷಮರ್ದಿನಿ ದೇವಸ್ಥಾನ ದಲ್ಲಿ ಶ್ರೀ ರಾಮ ಪ್ರತಿಷ್ಠಾ ಮಹೋತ್ಸವ

Mumbai News Desk

ಮರಳುಗಾಡಿನಿಂದ ಮಹಾನಗರಕ್ಕೆ ಗಮ್ಮತ್ ಕಲಾವಿದೆರ್, ಅ. 27ರಂದು ಕನ್ನಡ ಸಂಘ ಸಯನ್ ನ ವಾರ್ಷಿಕೋತ್ಸವದ ಅಂಗವಾಗಿ ದುಬಾಯಿಯ ಕಲಾವಿದರಿಂದ “ವಾ ಗಳಿಗೆಡ್ ಪುಟುದನಾ” ತುಳು ಹಾಸ್ಯಮಯ ನಾಟಕ ಪ್ರದರ್ಶನ

Mumbai News Desk

ಜ.10ಕ್ಕೆ ಪುರಭವನದಲ್ಲಿ “ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ

Mumbai News Desk

ತೋಕೂರು ಮದ್ದೇರಿ ದೈವಸ್ಥಾನ. ಮೇ 7 ರಿಂದ 9 ವರೆಗೆ ಪ್ರತಿಷ್ಠಿತೆ, ನೇಮೋತ್ಸವ.

Mumbai News Desk

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ ಪೂರ್ವ, ಇಂದು ಶ್ರೀ ಶನಿ ಗ್ರಂಥ ಪಾರಾಯಣ.

Mumbai News Desk