September 6, 2026
Mumbai News Kannada
ಮುಂಬಯಿ

ಸಾಂತಾಕ್ರೂಜ್ ಶ್ರೀ ಪೇಜಾವರ ಮಠಕ್ಕೆ ಮಹಾರಾಷ್ಟ್ರದ ಉನ್ನತ ಶಿಕ್ಷಣ ಸಚಿವರಾದ ಚಂದ್ರಕಾಂತ್ ಪಾಟೀಲ್ ಭೇಟಿ





ಮುಂಬಯಿ, ನವೆಂಬರ್ 18:

​ಮಹಾರಾಷ್ಟ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವರೂ ಮತ್ತು ಮಹಾರಾಷ್ಟ್ರ ಬಿಜೆಪಿ ಘಟಕದ ಮಾಜಿ ರಾಜ್ಯಾಧ್ಯಕ್ಷರೂ ಆಗಿರುವ ಶ್ರೀ ಚಂದ್ರಕಾಂತ್ ಪಾಟೀಲ್ ಅವರು ಸಾಂತಾಕ್ರೂಜ್ ಪೂರ್ವದಲ್ಲಿರುವ ಪ್ರಭಾತ್ ಕಾಲನಿಯ ಶ್ರೀ ಪೇಜಾವರ ಮಠಕ್ಕೆ ಭೇಟಿ ನೀಡಿದರು.

​ಸಚಿವರು ಮೊದಲು ಮಠದ ಶಿಲಾಮಯ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀಕೃಷ್ಣನ ಸನ್ನಿಧಾನದಲ್ಲಿ ದೇವರ ದರ್ಶನ ಪಡೆದರು. ಬಳಿಕ, ಮಠದ ಕಚೇರಿಯಲ್ಲಿ ವ್ಯವಸ್ಥಾಪಕರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ, ಅವರು ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶರಾಗಿದ್ದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರನ್ನು ಸ್ಮರಿಸಿದರು ಹಾಗೂ ಹಾಲಿ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರ ಸೇವಾ ಕಾರ್ಯಗಳನ್ನು ಶ್ಲಾಘಿಸಿದರು.

​ಸಚಿವರ ಭೇಟಿ ಸಂದರ್ಭದಲ್ಲಿ ಸ್ಥಾನೀಯ ಶಾಸಕರಾದ ನ್ಯಾಯವಾದಿ ಶ್ರೀ ಪರಾಗ್ ಆಳ್ವಣಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಧುರೀಣರಾದ ಶ್ರೀ ಮಹೇಂದ್ರ ಸೋನಿ ಮತ್ತು ಶ್ರೀ ಕೆ. ಸಾವಂತ್ ಉಪಸ್ಥಿತರಿದ್ದರು.

​ಶ್ರೀ ಪೇಜಾವರ ಮಠದ ಪ್ರಧಾನ ವ್ಯವಸ್ಥಾಪಕರಾದ ಶ್ರೀ ರಾಮದಾಸ ಉಪಾಧ್ಯಾಯ ರೆಂಜಾಳ ಅವರು ಸಚಿವರಿಗೆ ಶ್ರೀದೇವರ ಪ್ರಸಾದವನ್ನು ನೀಡಿ ಗೌರವಿಸಿದರು.

​ಮಠದ ವ್ಯವಸ್ಥಾಪಕರಾದ ವಿದ್ವಾನ್ ಶ್ರೀ ಹರಿ ಭಟ್, ಶ್ರೀ ನಿರಂಜನ್ ಗೋಗೈ, ಅರ್ಚಕರು ಮತ್ತು ಮಠದ ಪುರೋಹಿತ ವರ್ಗದವರು ಸಚಿವರನ್ನು ಬರಮಾಡಿಕೊಂಡರು.



Related posts

ಮುಂಬಯಿಯಲ್ಲಿ ಮೊಹಮ್ಮದ್ ಗೌಸ್‌ ನೇತೃತ್ವದ ಯಕ್ಷಗಾನ ಪ್ರವಾಸಕ್ಕೆ ಚಾಲನೆ

Mumbai News Desk

ಬಾಂಬೆ ಬಂಟ್ಸ್ ಅಸೋಸಿಯೇಶನ್ ನ ಬಂಟ್ಸ್ ಸೆಂಟರ್ ನಲ್ಲಿ ಗುರುಪೂರ್ಣಿಮೆ.

Mumbai News Desk

ಬಿಲ್ಲವರ  ಎಸೋಸಿಯೇಶನ್, ಮುಂಬಯಿ ಇದರ 2024-27ನೇ ಸಾಲಿನ ಆಡಳಿತ ಮಂಡಳಿ ಚುನಾವಣೆ, ಹರೀಶ್ ಜಿ. ಅಮೀನ್, ನೇತೃತ್ವದ ಸ್ವಾಭಿಮಾನಿ ಬಿಲ್ಲವವರು ಬಣಕ್ಕೆ ಜಯ

Mumbai News Desk

ನವಿ ಮುಂಬೈ : ಕಾಮೋಥೆ ಕಟ್ಟಡದಲ್ಲಿ ಎರಡು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟ, ಮಹಿಳೆ ಮತ್ತು ಮಗಳು ಸಾವು

Mumbai News Desk

ಬಂಟರ ಸಂಘ ಮುಂಬಯಿ,  ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಅಷ್ಟಾದಶ ಸಂಭ್ರಮ

Mumbai News Desk

ಜಯ ಸಿ. ಸುವರ್ಣರ ಆದರ್ಶ ಪಾಲನೆಯಿಂದ ಸಮಾಜದ ಪ್ರಗತಿ ಸಾಧ್ಯ – ಸೂರ್ಯಕಾಂತ್ ಜಯ ಸುವರ್ಣ

Mumbai News Desk