September 6, 2026
Mumbai News Kannada
ಸುದ್ದಿ

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಆತಂಕ: ಆರೋಗ್ಯ ಇಲಾಖೆಯಿಂದ ಅಯ್ಯಪ್ಪ ಭಕ್ತರಿಗೆ ಮಾರ್ಗಸೂಚಿ ಬಿಡುಗಡೆ





ಕೇರಳದಲ್ಲಿ ಶಬರಿಮಲೆ  ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಭಕ್ತರ ದರ್ಶನಕ್ಕಾಗಿ ತೆರೆಯಲಾಗಿದೆ. ಆದರೆ ಇದೇ ಸಂದರ್ಭದಲ್ಲಿ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ರೋಗದ ಹಾವಳಿಯೂ ಜೋರಾಗಿದೆ. ಈ ವೈರಸ್ ಕರ್ನಾಟಕಕ್ಕೂ ಟೆನ್ಷನ್ ಹೆಚ್ಚಿಸಿದ್ದು, ಸದ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಇದೀಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಬರಿಮಲೆ ಅಯ್ಯಪ್ಪ ಭಕ್ತರಿಗಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಅಯ್ಯಪ್ಪ ಭಕ್ತರಿಗೆ ಮಾರ್ಗಸೂಚಿ :

ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆಗೆ ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆ.

ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ.

ನೇಗ್ಲೇರಿಯಾ ಫೌಲೇರಿ ಅತ್ಯಂತ ವಿಷಕಾರಿ ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್‌ ಎನ್ನುವ ಅಪರೂಪದ ಗಂಭೀರ, ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ. ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್‌ ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸಿ.

ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ, ತೀವು ತಲೆನೋವು, ವಾಕರಿಕೆ, ವಾಂತಿ, ಕುತ್ತಿಗೆ ಬಿಗಿತ, ಗೊಂದಲ, ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆ,ವೈದ್ಯರನ್ನು ಸಂಪರ್ಕಿಸಿ.

ಸಾಮಾನ್ಯವಾಗಿ ನಿಂತ ನೀರು, ಕೊಳಗಳು ಮತ್ತು ಸರೋವರಗಳಲ್ಲಿ ಈ ಅಮೀಬಾ ಬೆಳೆಯುತ್ತೆ. ಒಂದು ವೇಳೆ ಅಂತಹ ನೀರಿನಲ್ಲಿ ಈಜಾಡಿದರೆ, ಆ ಅಮೀಬಾವು ಮೂಗಿನ ಮೂಲಕ ನಮ್ಮ ಮೆದುಳನ್ನ ಹೊಕ್ಕು ನೇರವಾಗಿ ಕೇಂದ್ರ ನರವ್ಯೂಹಕ್ಕೆ ಹಾನಿಯುಂಟು ಮಾಡುತ್ತದೆ. ಕೆಲವೊಮ್ಮೆ ಸೋಂಕಿನ ಪ್ರಮಾಣ ಹೆಚ್ಚಾದರೆ ಸಾವು ಕೂಡ ಸಂಭವಿಸಬಹುದು.



Related posts

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ ಡಿ. ದೇವರಾಜ್ ಅರಸು ರವರ ಜನ್ಮದಿನಾಚರಣೆ ಮತ್ತು ಪರಿಶಿಷ್ಟ ಪಂಗಡದ ಇಬ್ಬರು ಪಿ.ಹೆಚ್.ಡಿ ಪದವಿ ಪಡೆದವರಿಗೆ ಸನ್ಮಾನ ಕಾರ್ಯಕ್ರಮ

Mumbai News Desk

2023-24 ನೇ ಸಾಲಿನ ಎಚ್ ಎಸ್ ಸಿ ಪರೀಕ್ಷೆ ಯಲ್ಲಿ ನಿಶಾ ಸುಂದರ ಪೂಜಾರಿ 82.16%

Mumbai News Desk

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ; ಭಾರಿ ಮಳೆ, ಹಲವೆಡೆ ಭೂಕುಸಿತ,

Mumbai News Desk

ದ್ವಾರಕಾಮಯಿ ಮಠ ಶ್ರೀ ಕ್ಷೇತ್ರ ಶಂಕರಪುರದ ವತಿಯಿಂದ ಪುಲ್ವಾಮ ದಾಳಿಯಲ್ಲಿ ಮಡಿದ ಯೋಧರಿಗೆ ನುಡಿ -ನಮನ

Mumbai News Desk

ಬಂಟ್ಸ್ ಫೋರಮ್ ಮೀರಾ-ಭಾಯಂದರ್ ವತಿಯಿಂದ ತಿರುಪತಿ ಯಾತ್ರೆ

Mumbai News Desk

ಮಂಗಳೂರು – ಸುಬ್ರಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸುವಂತ್ತೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಮನವಿ.

Mumbai News Desk