September 6, 2026
Mumbai News Kannada
ತುಳುನಾಡು

ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಿದ ಲಕ್ಷದೀಪೋತ್ಸವ





​ಮೂಲ್ಕಿ ಸೀಮೆಯ 9 ಮಾಗಣೆಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 9 ಮಾಗಣೆಯ ಭಕ್ತ ವೃಂದದ ಸಹಕಾರದಿಂದ ನ.19ರ, ಬುಧವಾರ ಲಕ್ಷ ದೀಪೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.
ಅಂದು ಸೂಕ್ತ ಹೋಮ, ಲಕ್ಷ ಕುಂಕುಮರ್ಚನೆ, ಮಧ್ಯಾಹ್ನ ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಿತು.
ಸಂಜೆ 5 ಗಂಟೆಗೆ ಸಾಮೂಹಿಕ ದುರ್ಗ ನಮಸ್ಕಾರ, ಲಲಿತ ಸಹಸ್ರನಾಮ ಪಾರಾಯಣ, ರಾತ್ರಿ 7:30ಕ್ಕೆ ಮಹಾಪೂಜೆ ಲಕ್ಷ ದೀಪ ಉತ್ಸವ, ಅಷ್ಟಾವಧಾನ ಸೇವೆ ಜರಗಿತು.


ಕ್ಷೇತ್ರದ ತಂತ್ರಿಗಳಾದ ಶೀಬರೂರು ಗುಣಪಾಲಕೃಷ್ಣ ತಂತ್ರಿ ಹಾಗೂ ಅರ್ಚಕರಾದ ಶ್ರೀಪತಿ ಉಪಾಧ್ಯಾಯ ಹಾಗೂ ನರಸಿಂಹ ಭಟ್ ನೇತೃತ್ವದಲ್ಲಿ ಎಲ್ಲ ಧಾರ್ಮಿಕ ಕಾರ್ಯಗಳು ವಿಧಿವತ್ತಾಗಿ ನಡೆಯಿತು.
​ ಈ ಸಂದರ್ಭ ಶಾಸಕ ಉಮಾನಾಥ್ ಕೋಟ್ಯಾನ್, ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಸಾದ್, ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಮಾಜಿ ಮೊಕ್ತೇಸರ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಕಟೀಲು ಕ್ಷೇತ್ರದ ಅರ್ಚಕ ಹರಿನಾರಾಯಣ ದಾಸ ಅಸ್ರಣ್ಣ, ಬಪ್ಪನಾಡು ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ ಮತ್ತು ಭಕ್ತದಿಗಳು ಉಪಸ್ತಿತರಿದ್ದರು.



Related posts

ಮಾಡೂರು ಭಗವತೀ ಕ್ಷೇತ್ರದ ಗೌರವ ಅಧ್ಯಕ್ಷರಾಗಿ ಮುಂಬಯಿಯ ಉದ್ಯಮಿ ಕುಮಾರ್ ಎನ್. ಬಂಗೇರ ಆಯ್ಕೆ

Mumbai News Desk

ಕರ್ನಿರೆ: ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಕಾಲಾವಧಿ ನೇಮೋತ್ಸವ ಸಂಪನ್ನ

Mumbai News Desk

ಪ್ರಪಂಚದಾದ್ಯಂತ ನೆಲೆಸಿರುವ ಭಕ್ತರಿಗೆ ರಕ್ಷಣಾಪುರ ಕಾಪುವಿನ ಅಮ್ಮ ರಕ್ಷೆಯಾಗಿದ್ದಾಳೆ : ಕೇರಳ ಕೈಮುಕ್ಕು ನಾರಾಯಣನ್ ನಂಬೂದರಿ

Mumbai News Desk

ಮೂಲ್ಕಿ : ವಿಜಯಾ ಕಾಲೇಜು 1994-97ರ ಬಿಕಾಂ ಬ್ಯಾಚ್ ವತಿಯಿಂದ SSLC, PUC ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ

Mumbai News Desk

ಮುಲ್ಕಿ : ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದಲ್ಲಿ ‘ವನ ಮಹೋತ್ಸವ’ ದಿನಾಚರಣೆ, ಹಸಿರು ಕ್ರಾಂತಿಗೆ ಕರೆ

Mumbai News Desk

ಯುವಕ ಸಂಘ ತೋಕೂರು,ಮಹಿಳಾ ಮಂಡಲ ತೋಕೂರು, ಹಾಗೂ ಪತಂಜಲಿ ಯೋಗ ಸಮಿತಿ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk