32 C
Mumbai
April 24, 2026
Mumbai News Kannada
ಪ್ರಕಟಣೆ

ಮೂಲ್ಕಿ : ನ. 30ರಂದು ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ಮುಲ್ಕಿಯ ಕೀರ್ತಿಶೇಷ ಸಾಧಕರು ” ಕ್ರತಿ ಬಿಡುಗಡೆ ಸಮಾರಂಭ





ಹೊಸ ಅಂಗಣ ಪ್ರಕಟಣಾಲಯ, ಮೂಲ್ಕಿ ಪ್ರಕಟಿತ, ಜಾನಪದ ಲೇಖಕ, ಸಂಘಟಕ ಹರಿಶ್ಚಂದ್ರ ಪಿ ಸಾಲ್ಯಾನ್ ಅವರ 22ನೇ ಕೃತಿ ” ಮುಲ್ಕಿಯ ಕೀರ್ತಿ ಶೇಷ ಸಾಧಕರು ” ಕ್ರತಿ ಬಿಡುಗಡೆ ಸಮಾರಂಭವು ನವಂಬರ್ 30ರಂದು ಆದಿತ್ಯವಾರ ಸಂಜೆ 4.30ಕ್ಕೆ ಮೂಲ್ಕಿಯ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ಜರಗಲಿದೆ.
ಕೆ. ಪಿ. ಸಿ. ಸಿ ಯ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ ರೈ ಅವರು ಕೃತಿಯನ್ನು ಬಿಡುಗಡೆ ಮಾಡಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು, ಇದರ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ, ಕೆ. ಪಿ. ಸಿ. ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮುಲ್ಕಿ ನರ್ಸಿಂಗ್ ಹೋಂ, ವೈದ್ಯ ಡಾ.ಅರುಣ್ ಕುಡ್ವ, ಧನಂಜಯ್ ಅಂಚನ್ ಕೆ.ಎಸ್. ರಾವ್ ನಗರ ಮುಲ್ಕಿ ಉಪಸ್ಥಿತರಿರುವರು.
ಹೊಸ ಅಂಗಣ ಪ್ರಕಾಶನದ ಹರಿಶ್ಚಂದ್ರ ಪಿ ಸಾಲ್ಯಾನ್ ಕಾರ್ಯಕ್ರಮಕ್ಕೆ ಎಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ.



Related posts

ಜಗಜ್ಯೋತಿ ಕಲಾವೃಂದ ಡೊಂಬಿವಲಿ : ಫೆ. 26ಕ್ಕೆ ಮಹಾಶಿವರಾತ್ರಿ ಪೂಜೆ

Mumbai News Desk

ಜ.13ಕ್ಕೆ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 63ನೇ ವಾರ್ಷಿಕ ದಿನಾಚರಣೆ

Mumbai News Desk

ಬಿಲ್ಲವ ಸಮಾಜ ಸೇವಾ ಸಂಘ (ರಿ) ಕೊಡೇರಿ : ನ. 21 ರಂದು ಕೊಡೇರಿಯಲ್ಲಿ ಹಕ್ರೆಮಠ ಶ್ರೀ ಜೈನಜಟ್ಟಿಗೇಶ್ವರ ದೇವರ 78 ನೇ ವರ್ಷದ ಕಂಬಳೋತ್ಸವ

Mumbai News Desk

ಜ.20 ಕ್ಕೆ ಉಡುಪಿಯಲ್ಲಿ ಡೈಕಿನ್ ಸೊಲ್ಯೂಷನ್ ಪ್ಲಾಜ ಷೋರೂಮ್ ಶುಭಾರಂಭ

Mumbai News Desk

ನ 9ಮತ್ತು 10: ಮುಂಬಯಿಯಲ್ಲಿ ಶಿವಪುರ್ಸಾದ ಬಬ್ಬರ್ಯೆ ತುಳು ನಾಟಕ. ಮಾಯಾನಗರಿಯಲ್ಲಿ ಬಬ್ಬರ್ಯನ ಮಾಯೆ

Mumbai News Desk

ರಾಜಲಕ್ಷ್ಮೀ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ 41ನೇ ವಾರ್ಷಿಕ ಸಭೆ

Mumbai News Desk