September 6, 2026
Mumbai News Kannada
ಪ್ರಕಟಣೆ

ಸೃಜನಾ’ ಮುಂಬಯಿ ಕನ್ನಡ ಲೇಖಕಿಯರ ಬಳಗದ ವತಿಯಿಂದ ತಾ.29/11/2025 ರಂದು ಕೃತಿ ಸಮೀಕ್ಷೆ ಕಾರ್ಯಕ್ರಮ





ಮುಂಬಯಿ: ‘ಸೃಜನಾ’ ಮುಂಬಯಿ ಕನ್ನಡ ಲೇಖಕಿಯರ ಬಳಗದ ವತಿಯಿಂದ ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ, ಮುಂಬಯಿ ಇದರ 9 ಕೃತಿಗಳ ಸಮೀಕ್ಷೆ ಕಾರ್ಯಕ್ರಮವು ನವೆಂಬರ್ 29ರಂದು ಸಂಜೆ 5:15ಕ್ಕೆ ಮಾಟುಂಗಾ ಪೂರ್ವದ ಭಾವುದಾಜಿ ರಸ್ತೆಯ ಮೈಸೂರು ಅಸೋಸಿಯೇಷನ್ ಮುಂಬಯಿ ಇದರ ಮೊದಲ ಮಹಡಿಯಲ್ಲಿ ನಡೆಯಲಿದೆ.

ಸೃಜನಾ ಬಳಗದ ಸಂಚಾಲಕಿ ಪದ್ಮಜಾ ಮಣ್ಣೂರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಬಳಗದ ಸದಸ್ಯೆಯರಾದ ಡಾ. ದಾಕ್ಷಾಯಣಿ ಯಡಹಳ್ಳಿ ಅವರು ಸೂರ್ಯ ಪ್ರಭೆ- ಪೌರಾಣಿಕ ನಾಟಕ, ಡಾ. ಜಿ ಪಿ ಕುಸುಮಾ ಅವರು ‘ಹೊರನಾಡಿನಲ್ಲಿ ತುಳುವರು’ ಲಲಿತಾ ಪ್ರಭು ಅಂಗಡಿ ಅವರು ‘ಮುಂಬಯಿ ಕನ್ನಡಿಗರ ದೇವಾಲಯಗಳ ಮಾಹಿತಿ ಕೋಶ’ ಶಾರದಾ ಅಂಬೆಸಂಗೆ ಅವರು ‘ಸೌಹಾರ್ದ ಸೇತು’ ಲತಾ ಸಂತೋಷ್ ಶೆಟ್ಟಿ ಅವರು ‘ಕನ್ನಡ ಶಾಲೆಯ ಸವಿನೆನಪುಗಳು’ ಸುಶೀಲಾ ದೇವಾಡಿಗ ಅವರು ‘ಸನಾತನ ಧರ್ಮವೂ ಪ್ರಕೃತಿಯ ಆರಾಧನೆಯೂ’ ಹಾಗೂ ಅಶ್ವಿತಾ ಶೆಟ್ಟಿ ಅವರು ‘ಯಾರು ಆಳಿದರೇನು ನಾವು ರಾಗಿ ಬೀಸೋದು ತಪ್ಪುತ್ತ’ ಕೃತಿಗಳ ಸಮೀಕ್ಷೆಯನ್ನು ನಡೆಸಲಿದ್ದಾರೆ..

ಬಳಗದ ಸದಸ್ಯೆಯರು, ಸಾಹಿತ್ಯ ಪ್ರೇಮಿಗಳು ಹಾಗೂ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ‘ಸೃಜನಾ’ ಮುಂಬಯಿ ಕನ್ನಡ ಲೇಖಕಿಯರ ಬಳಗದ ಪ್ರಕಟಣೆ ತಿಳಿಸಿದೆ.



Related posts

ಡಿ.24 ಕ್ಕೆ ಶ್ರೀ ಅಯ್ಯಪ್ಪ ಭಕ್ತ ಮಂಡಳಿ ಮೀರಾ ,ಭಾರತಿ ಪಾರ್ಕ್ ಮೀರಾರೋಡ್, 27ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ.

Mumbai News Desk

ವಸಾಯಿ ತಾಲೂಕ ಮೊಗವೀರ ಸಂಘ : ಅ. 11ಕ್ಕೆ ಪ್ರತಿಭಾ ಪುರಸ್ಕಾರ ಮತ್ತು ಆಟಿಡೊಂಜಿ ದಿನ

Mumbai News Desk

*11 ನೇ ವರ್ಷದ ಪಟ್ಲ ಸಂಭ್ರಮ 2026**ಮೇ 30 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಕಾರ್ಯಕ್ರಮ**ಡಾ| ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ, ಪೊಲ್ಯರಿಗೆ  ಯಕ್ಷಧ್ರುವ ಪಟ್ಲ ಪ್ರಶಸ್ತಿ*

Mumbai News Desk

ಬಿ.. ಎಸ್ ಕೆ.ಬಿ. ಎಸೋಸಿಯೇಶನ್, ಗೋಕುಲ – ಶತಮಾನೋತ್ಸವ ಸಂಭ್ರಮಾಚರಣೆಗೆ ಸರ್ವಸಿದ್ಧತೆ

Mumbai News Desk

ಸಾರ್ವಜನಿಕ ಶ್ರೀ ಶನಿಶ್ಚರ ಸೇವಾ ಸಮಿತಿ, ವಸಾಯಿ : ಫೆ. 14ರಂದು ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಶ್ರೀ ಶನಿಶ್ಚರ ಮಹಾಪೂಜೆ

Mumbai News Desk

ಭಾಂಡುಪ್ ಶ್ರೀ ಶನೀಶ್ವರ ಭಕ್ತ ವೃಂದ ಮಿತ್ರ ಮಂಡಳಿ ಡಿ. 6 ರಂದು 47ನೇ ವಾರ್ಷಿಕ ಮಹಾಪೂಜೋತ್ಸವ

Mumbai News Desk