July 23, 2026
Mumbai News Kannada
ಪ್ರಕಟಣೆ

ಸೃಜನಾ’ ಮುಂಬಯಿ ಕನ್ನಡ ಲೇಖಕಿಯರ ಬಳಗದ ವತಿಯಿಂದ ತಾ.29/11/2025 ರಂದು ಕೃತಿ ಸಮೀಕ್ಷೆ ಕಾರ್ಯಕ್ರಮ







ಮುಂಬಯಿ: ‘ಸೃಜನಾ’ ಮುಂಬಯಿ ಕನ್ನಡ ಲೇಖಕಿಯರ ಬಳಗದ ವತಿಯಿಂದ ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ, ಮುಂಬಯಿ ಇದರ 9 ಕೃತಿಗಳ ಸಮೀಕ್ಷೆ ಕಾರ್ಯಕ್ರಮವು ನವೆಂಬರ್ 29ರಂದು ಸಂಜೆ 5:15ಕ್ಕೆ ಮಾಟುಂಗಾ ಪೂರ್ವದ ಭಾವುದಾಜಿ ರಸ್ತೆಯ ಮೈಸೂರು ಅಸೋಸಿಯೇಷನ್ ಮುಂಬಯಿ ಇದರ ಮೊದಲ ಮಹಡಿಯಲ್ಲಿ ನಡೆಯಲಿದೆ.

ಸೃಜನಾ ಬಳಗದ ಸಂಚಾಲಕಿ ಪದ್ಮಜಾ ಮಣ್ಣೂರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಬಳಗದ ಸದಸ್ಯೆಯರಾದ ಡಾ. ದಾಕ್ಷಾಯಣಿ ಯಡಹಳ್ಳಿ ಅವರು ಸೂರ್ಯ ಪ್ರಭೆ- ಪೌರಾಣಿಕ ನಾಟಕ, ಡಾ. ಜಿ ಪಿ ಕುಸುಮಾ ಅವರು ‘ಹೊರನಾಡಿನಲ್ಲಿ ತುಳುವರು’ ಲಲಿತಾ ಪ್ರಭು ಅಂಗಡಿ ಅವರು ‘ಮುಂಬಯಿ ಕನ್ನಡಿಗರ ದೇವಾಲಯಗಳ ಮಾಹಿತಿ ಕೋಶ’ ಶಾರದಾ ಅಂಬೆಸಂಗೆ ಅವರು ‘ಸೌಹಾರ್ದ ಸೇತು’ ಲತಾ ಸಂತೋಷ್ ಶೆಟ್ಟಿ ಅವರು ‘ಕನ್ನಡ ಶಾಲೆಯ ಸವಿನೆನಪುಗಳು’ ಸುಶೀಲಾ ದೇವಾಡಿಗ ಅವರು ‘ಸನಾತನ ಧರ್ಮವೂ ಪ್ರಕೃತಿಯ ಆರಾಧನೆಯೂ’ ಹಾಗೂ ಅಶ್ವಿತಾ ಶೆಟ್ಟಿ ಅವರು ‘ಯಾರು ಆಳಿದರೇನು ನಾವು ರಾಗಿ ಬೀಸೋದು ತಪ್ಪುತ್ತ’ ಕೃತಿಗಳ ಸಮೀಕ್ಷೆಯನ್ನು ನಡೆಸಲಿದ್ದಾರೆ..

ಬಳಗದ ಸದಸ್ಯೆಯರು, ಸಾಹಿತ್ಯ ಪ್ರೇಮಿಗಳು ಹಾಗೂ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ‘ಸೃಜನಾ’ ಮುಂಬಯಿ ಕನ್ನಡ ಲೇಖಕಿಯರ ಬಳಗದ ಪ್ರಕಟಣೆ ತಿಳಿಸಿದೆ.



Related posts

ಶ್ರೀ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ

Mumbai News Desk

ಡಿ.12 ರಿಂದ 23 ರ ವರಗೆ ಸೂಡ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ

Mumbai News Desk

ಎ. 12ರಂದು ವಿದ್ಯಾವಿಹಾರ್ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪಾದುಕಾ ಪ್ರದಾನ, ಪಂಚವಟಿ ತಾಳಮದ್ದಳೆ ಹಾಗೂ ಸಮ್ಮಾನ

Mumbai News Desk

ಸೆ 15.ಡೊಂಬಿವಲಿ ಶ್ರೀ ಜಗದಂಬಾ ಮಂದಿರದ ಶರನ್ನವರಾತ್ರಿ ಮಹೋತ್ಸವ ಆಚರಣೆ ನಿಮ್ಮಿತ್ತ ವಿಶೇಷ ಮಹಾಸಭೆ

Mumbai News Desk

ಮಲಾಡ್ ಪೂರ್ವದ ಶ್ರೀ ದೇವಿ  ಮಹಮ್ಮಾಯಿ ದೇವಸ್ಥಾನ,  ಎ13 ; ವಾರ್ಷಿಕ ಮಹೋತ್ಸವ ಮತ್ತು ಪಾಲ್ಕಿ ಉತ್ಸವ,

Mumbai News Desk

ಜೂ. 21 : ವಸಯಿ ಕರ್ನಾಟಕ ಸಂಘದ ವತಿಯಿಂದ ವಿಶ್ವ ಯೋಗ ದಿನಾಚರಣೆ

Mumbai News Desk