July 23, 2026
Mumbai News Kannada
ಸುದ್ದಿ

ಕೃಷ್ಣನೂರು ಉಡುಪಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಲಕ್ಷಾಂತರ ಜನರಿಂದ ಹೂಮಳೆ ಸುರಿಸಿ ಸ್ವಾಗತ







ದೇಶದ ಪ್ರಧಾನಮಂತ್ರಿಗಳಾದ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಆಗಮಿಸಿರುವ ನರೇಂದ್ರ ಮೋದಿಯವರನ್ನು ಕರಾವಳಿಯ ಮಂದಿ ಹೂಮಳೆ ಸುರಿಸಿ ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ.

ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ ಮೋದಿಯವರು, ಅಲ್ಲಿಂದ ಸೇನಾ ಹೆಲಿಕಾಪ್ಟರ್’ನಲ್ಲಿ ಉಡುಪಿಯ ಹೆಲಿಪ್ಯಾಡ್’ಗೆ ಬಂದಿಳಿದರು.

ಅಲ್ಲಿಂದ ರೋಡ್ ಶೋ ಆರಂಭವಾಗಿದ್ದು, ದಾರಿಯುದ್ದಕ್ಕೂ ಲಕ್ಷಾಂತರ ಮಂದಿ ಹೂಮಳೆ ಸುರಿಸಿ, ನೆಚ್ಚಿನ ನಾಯಕನಿಗೆ ಸ್ವಾಗತ ಕೋರಿದ್ದಾರೆ.

ಉಡುಪಿಯಿಂದ ಕೃಷ್ಣ ಮಠದವರೆಗೂ ನಡೆಯುತ್ತಿರುವ ರೋಡ್ ಶೋದಲ್ಲಿ ಪ್ರಧಾನಿ ಮೋದಿಯವರು ಅಭಿಮಾನಿಗಳತ್ತ ಕೈ ಬೀಸಿ ಸಾಗಿದ್ದಾರೆ.

ರೋಡ್ ಶೋ ಆರಂಭವಾದಾಗಿನಿಂದಲೂ ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಮಂದಿ ನಿಂತು ಜೈಘೋಷ ಹಾಕಿ, ಹೂಮಳೆ ಸುರಿಸಿ, ನೆಚ್ಚಿನ ನಾಯಕನನ್ನು ಹತ್ತರದಿಂದ ನೋಡಿ ಕಣ್ತುಂಬಿಕೊಂಡರು.

ವಿವಿಧ ಜಾನಪದ ಕಲಾತಂಡಗಳಿಂದ ಮೋದಿಗೆ ಅದ್ಧೂರಿ ಸ್ವಾಗತಕೋರಲಾಯ್ತು. ಮೋದಿ ಮೋದಿ ಅಂತ ಹರ್ಷೋದ್ಘಾರ ಮೊಳಗಿಸಿದ ಅಭಿಮಾನಿಗಳ ಮೋದಿ ಕಂಡು ಖುಷಿಪಟ್ಟರು.. ಈ ವೇಳೆ ಪ್ರಧಾನಿ ಮೋದಿ ಸಹ ಅಭಿಮಾನಿಗಳನ್ನ ಕೈಬೀಸಿ ಮಂದಹಾಸದ ನಗೆ ಬೀರಿದರು.



Related posts

ಹಿರಿಯ ರಂಗಕರ್ಮಿ, ಚಿತ್ರ ನಿರ್ಮಾಪಕ ಸದಾನಂದ ಸುವರ್ಣ ನಿಧನ

Mumbai News Desk

*ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ, ಸೇವಕರ್ತ ಪ್ರೇಮಾನಂದ ಕುಲಾಲ್ ವರಿಗೆ ಗೌರವ,

Mumbai News Desk

ಗುಜರಾತ್ ಭರುಚ್ ಶ್ರೀ ಗುಮನ್ ದೇವ್ ಮಂದಿರದಲ್ಲಿ ಅದ್ದೂರಿಯ ಶ್ರೀ ಬಾಲಾಜಿ ವೆಂಕಟೇಶ್ವರ ಸ್ವಾಮಿ ಪ್ರಾಣಪ್ರತಿಷ್ಠೆ , ಬ್ರಹ್ಮಕಲಶೋತ್ಸವ , ಶ್ರೀನಿವಾಸ ಕಲ್ಯಾಣ.

Mumbai News Desk

ತಮಿಳುನಾಡು : ನಟ-ರಾಜಕಾರಣಿ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 31 ಮಂದಿ ಬಲಿ, 40 ಜನರ ಸ್ಥಿತಿ ಚಿಂತಾಜನಕ

Mumbai News Desk

ಪುಷ್ಪ 2 ಯಶಸ್ಸಿನ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ಬಂಧನ, ಅಭಿಮಾನಿಗಳು ಶಾಕ್

Mumbai News Desk

ಅಯೋಧ್ಯೆಯಲ್ಲಿ ರಾಮಲಲ್ಲನ ಮೂರ್ತಿ ಪ್ರತಿಷ್ಠಾಪಿಸಿದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳಿಗೆ ಮುಂಬೈ ಜನತೆಯ ಭವ್ಯ ಸ್ವಾಗತ,

Mumbai News Desk