30.5 C
Mumbai
June 8, 2026
Mumbai News Kannada
ಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಎಂ.ಎಸ್‌ ಉಮೇಶ್‌ ವಿಧಿವಶ





ಹಿರಿಯ ಹಾಸ್ಯ ನಟ ಎಂ.ಎಸ್‌ ಉಮೇಶ್‌ ಅವರು ಇನ್ನಿಲ್ಲ. 80 ವರ್ಷ ವಯಸ್ಸಿನಲ್ಲಿ, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗೆ ಮನೆಯಲ್ಲಿ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ 4ನೇ ಹಂತದ ಲಿವರ್‌ ಕ್ಯಾನ್ಸರ್‌ ಇರುವುದು ಪತ್ತೆಯಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ, ಎಂ.ಎಸ್‌ ಉಮೇಶ್‌ ಅವರು ಇಹಲೋಕ ತ್ಯಜಿಸಿದ್ದಾರೆ.

ಎಂ.ಎಸ್‌ ಉಮೇಶ್‌ ಅವರು 1945ರ ಏಪ್ರಿಲ್‌ 24ರಂದು ಮೈಸೂರಿನಲ್ಲಿ ಜನಿಸಿದರು. ಬಾಲ್ಯದಿಂದಲೇ ಅಭಿನಯದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು, ತಮ್ಮ 4 ವರ್ಷ ವಯಸ್ಸಿನಲ್ಲೇ ಕಿರಣ್‌ ಹಿರಣ್ಣಯ್ಯರ ನಾಟಕ ಕಂಪನಿಯಲ್ಲಿ ತೊಡಗಿ, ನಂತರ ಗುಬ್ಬಿ ವೀರಣ್ಣರ ಕಂಪನಿಯಲ್ಲಿ ವಿವಿಧ ಪಾತ್ರಗಳಲ್ಲಿ ನಟಿಸಿದರು. 1960ರಲ್ಲಿ ಬಿಆರ್‌ ಪಂಥುಲು ನಿರ್ದೇಶನದ ʻಮಕ್ಕಳ ರಾಜ್ಯʼ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು, ಬಾಲನಟನಾಗಿ ಗಮನ ಸೆಳೆದರು.
350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಉಮೇಶ್ ಅವರು ಅಭಿನಯಿಸಿದ್ದಾರೆ. 1945ರ ಏಪ್ರಿಲ್‌ 24ರಂದು ಮೈಸೂರಿನಲ್ಲಿ ಜನಿಸಿದ ಅವರು 1960ರಲ್ಲಿ ಬಿಆರ್‌ ಪಂಥುಲು ನಿರ್ದೇಶನದ ‘ಮಕ್ಕಳ ರಾಜ್ಯ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದರು. ಬಳಿಕ ಹಲವಾರು ಸಿನಿಮಾಗಳಲ್ಲಿ ನಟಿಸುವ ಅವಕಾಶ ಪಡೆದುಕೊಂಡರು. ‘ನಾಗರ ಹೊಳೆ’, ‘ಗುರು ಶಿಷ್ಯರು’, ‘ಅನುಪಮಾ’, ‘ಕಾಮನ ಬಿಲ್ಲು’, ‘ಅಪೂರ್ವ ಸಂಗಮ’, ‘ಶ್ರುತಿ ಸೇರಿದಾಗ’, ‘ಹಾಲು ಸಕ್ಕರೆ’, ‘ಗೋಲ್​ಮಾಲ್ ರಾಧಾಕೃಷ್ಣ’, ‘ಮಲಯ ಮಾರುತು’, ‘ಗಜಪತಿ ಗರ್ಭಭಂಗ’ ಮುಂತಾದವು ಉಮೇಶ್ ನಟನೆಯ ಪ್ರಮುಖ ಸಿನಿಮಾಗಳು.



Related posts

ಮೂಲ್ಕಿ: ಅಮ್ಮಂಬಾಳ್ ಸುಬ್ಬರಾವ್ ಪೈ ಸಂಸ್ಮರಣಾ ಕಾರ್ಯಕ್ರಮ.

Mumbai News Desk

ಕನ್ಯಾನ ಸದಾಶಿವ ಶೆಟ್ಟಿ, ಐಕಳ ಹರೀಶ್ ಶೆಟ್ಟಿ ವಿವಾದಕ್ಕೆ ತೆರೆ:ಸಮಾಜದ ಉನ್ನತಿಗೆ, ಒಗ್ಗಟ್ಟಿನ ಬದ್ಧತೆಗೆ ನಿರ್ಧಾರ.

Mumbai News Desk

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಎನ್ಐಎ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡ ಆರೋಪಿ ಶಾರೀಕ್

Mumbai News Desk

ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ ವಿಜಯ್ ಬಿ ಹೆಗ್ಡೆ ನಿಧನ

Mumbai News Desk

ಬಂಟರ ಸಂಘ ಮುಂಬೈಯ ನೂತನ ಟ್ರಸ್ಟಿ   ಉಳ್ತೂರು  ಮೋಹನ್ದಾಸ್ ಶೆಟ್ಟಿ ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಭಿನಂದನೆ.

Mumbai News Desk

ಬೋಂಬೆ ಬಂಟ್ಸ್ ಅಸೋಷಿಯೇಶನ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಡಿ ಕೆ ಶೆಟ್ಟಿ ಆಯ್ಕೆ

Mumbai News Desk