32 C
Mumbai
March 7, 2026
Mumbai News Kannada
ಕ್ರೀಡೆ

ಮುಂಬೈ : 18ನೇ ನ್ಯಾಯವಾದಿ ಎ.ಆರ್. ಕುದ್ರೋಳಿ ಸ್ಮಾರಕ ಫುಟ್ಬಾಲ್ ಪಂದ್ಯಾಟ : ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಗೆ ಚಾಂಪಿಯನ್ ಪಟ್ಟ





​ಕ್ರೀಡಾಪ್ರೇಮಿಗಳ ಬಹುನಿರೀಕ್ಷಿತ 18ನೇ ನ್ಯಾಯವಾದಿ ಎ. ಆರ್. ಕುದ್ರೋಳಿ ಸ್ಮಾರಕ ನಾಕೌಟ್ ಫುಟ್‌ಬಾಲ್ ಪಂದ್ಯಾವಳಿ 2025 ರಲ್ಲಿ ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ತಂಡವು ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡು ಇತಿಹಾಸ ನಿರ್ಮಿಸಿದೆ.


ಕರ್ನಾಟಕ ಸ್ಪೋರ್ಟ್ಸ್ ಅಸೋಸಿಯೇಷನ್, ಚರ್ಚ್ ಗೇಟ್ ಬಳಿಯ ಕರ್ನಾಟಕ ಸ್ಪೋರ್ಟ್ಸ್ ಸೆಂಟರ್ ನಲ್ಲಿ ಆಯೋಜಿಸಿದ ​​ 18ನೇ ನ್ಯಾಯವಾದಿ ಎ. ಆರ್. ಕುದ್ರೋಳಿ ಸ್ಮಾರಕ ಫುಟ್‌ಬಾಲ್ ಪಂದ್ಯಾಟ ತೀವ್ರ ಪೈಪೋಟಿ ಮತ್ತು ರೋಚಕತೆಯಿಂದ ಕೂಡಿದ್ದು, ಫೈನಲ್ ಪಂದ್ಯದಲ್ಲಿ ಜೈ ಹಿಂದ್ ತಂಡವು ಸ್ಟಾರ್ ಆಫ್ ಕೆನರಾ ಸ್ಪೋರ್ಟ್ಸ್ ಕ್ಲಬ್ ತಂಡವನ್ನು ಎದುರಿಸಿತು. ಅತ್ಯುತ್ತಮ ಪ್ರದರ್ಶನ ನೀಡಿದ ಜೈ ಹಿಂದ್ ಆಟಗಾರರು 2–0 ಗೋಲುಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿ, ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

ಈ ಭವ್ಯ ಗೆಲುವು ನಮ್ಮ ಆಟಗಾರರ ಕಠಿಣ ಪರಿಶ್ರಮ, ಪರಿಪೂರ್ಣ ಸಾಮೂಹಿಕ ಆಟ ಮತ್ತು ಅಚಲ ಕ್ರೀಡಾ ಮನೋಭಾವಕ್ಕೆ ಸಾಕ್ಷಿಯಾಗಿದೆ. ಪಂದ್ಯಾವಳಿಯ ಉದ್ದಕ್ಕೂ ತಂಡದ ಪ್ರತಿಯೊಬ್ಬ ಆಟಗಾರನು ತಮ್ಮ ಅತ್ಯುತ್ತಮ ಕೊಡುಗೆಯನ್ನು ನೀಡಿದ್ದಾರೆ.
​ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್, ತಮ್ಮ ಗೆಲುವಿನ ಹಾದಿಯಲ್ಲಿ ಬೆಂಬಲವಾಗಿ ನಿಂತ ಮತ್ತು ಪ್ರತಿ ಕ್ಷಣವೂ ನಮ್ಮನ್ನು ಹುರಿದುಂಬಿಸಿದ ಎಲ್ಲಾ ಅಭಿಮಾನಿಗಳು ಹಾಗೂ ಬೆಂಬಲಿಗರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದೆ.
​ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಹೆಮ್ಮೆ ಮತ್ತು ಉತ್ಸಾಹದೊಂದಿಗೆ ಮುನ್ನಡೆಯುತ್ತಿದೆ ಎಂದು ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ನ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.



Related posts

ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯಿಂದ ಬಂಟ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್

Mumbai News Desk

ವೈಭವ್ ಸೂರ್ಯವಂಶಿ ಬಿರುಗಾಳಿ ಬ್ಯಾಟಿಂಗ್ ಗೆ ಇಂಗ್ಲೆಂಡ್ ನಿರುತ್ತರ; 6ನೇ ಬಾರಿ ಅಂಡರ್ 19 ವಿಶ್ವಕಪ್ ಎತ್ತಿ ಹಿಡಿದ ಭಾರತ

Mumbai News Desk

ಸುರತ್ಕಲ್ :  ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, 

Mumbai News Desk

ತುಳು ಸಂಘ ಬೊರಿವಲಿ ಯುವ ವಿಭಾಗದಿಂದ ಕ್ರಿಕೆಟ್ ಪಂದ್ಯಾಟ, – ಕ್ರೀಡೆಗಳು ಸಂಘದ ಅಭಿವೃದ್ದಿಗೆ ಪೂರಕವಾಗಲಿ – ಹರೀಶ್ ಮೈಂದನ್

Mumbai News Desk

N.E.S ಸೋಸೈಟಿಯ ಅಭಿನವ ಪಬ್ಲಿಕ್ ಸ್ಕೂಲ್ (CBSE Board) ನ ವಾರ್ಷಿಕ ಕ್ರೀಡಾಕೂಟ

Mumbai News Desk

ಬಹುಮುಖ ಪ್ರತಿಭೆಯ ಬಾಲ ಪ್ರತಿಭೆ ಬೆಳ್ತಂಗಂಡಿಯ ಶ್ರೇಯಸ್ ಯೋಗೇಶ್ ಪೂಜಾರಿ.

Mumbai News Desk