32 C
Mumbai
March 7, 2026
Mumbai News Kannada
ಸುದ್ದಿ

ಮಂಗಳೂರಿನ ಕುಲಾಲ ಭವನದಲ್ಲಿ ಮುಂಬಯಿ ಕುಲಾಲರ ಸ್ನೇಹ ಸಮ್ಮಿಲನ





​ಕುಲಾಲ ಭವನವು ಸಮಾಜದ ಒಗ್ಗಟ್ಟಿನ ಪ್ರತೀಕ: ಕಮಲಾದೇವಿ ಪ್ರಸಾದ ಆಸ್ರಣ್ಣ

ಚಿತ್ರ ವರದಿ: ದಿನೇಶ್ ಕುಲಾಲ್

ಮಂಗಳಾದೇವಿ (ಮಂಗಳೂರು), ಡಿ. 3: “ನಾವು ನಮ್ಮತನವನ್ನು ಮರೆತು ಸಮಾಜದ ಉನ್ನತಿಗೆ ಶ್ರಮಿಸಿದರೆ ಮಾತ್ರ ಸಮಾಜವು ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯ. ಕುಲಾಲ್, ಮೂಲ್ಯ, ಕುಂಬಾರ ಹೆಸರುಗಳು ಹಲವು ಆಂತರಿಕ ಅರ್ಥಗಳನ್ನೊಳಗೊಂಡಿವೆ. ಕುಲಾಲ ಸಮಾಜವು ಸಾಂಘಿಕವಾಗಿ, ಅದರ ತತ್ವ-ಧೈಯಗಳಿಗೆ ಅನುಗುಣವಾಗಿ ಒಗ್ಗಟ್ಟಿನಿಂದ ನೂತನ ಭವನವನ್ನು ನಿರ್ಮಿಸಿರುವುದು ಶ್ಲಾಘನೀಯ ಕಾರ್ಯ” ಎಂದು ಶ್ರೀ ಕ್ಷೇತ್ರ ಕಟೀಲಿನ ಪ್ರಧಾನ ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ ಹೇಳಿದರು.

​ಮಂಗಳಾದೇವಿ ಸಮೀಪದಲ್ಲಿ ನೂತನವಾಗಿ ಉದ್ಘಾಟನೆಗೊಂಡ ಮುಂಬಯಿ ಕುಲಾಲ ಸಂಘದ ಕುಲಾಲ ಭವನದಲ್ಲಿ ನಡೆದ ಮುಂಬಯಿ ಕುಲಾಲರ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

​ಬಂಟರ ಸಂಘ ಮುಂಬಯಿಯ ಕೋಶಾಧಿಕಾರಿ ಹಾಗೂ ನಾಲಸೋಪಾರ ತುಳು ಕೂಟ ಫೌಂಡೇಶನ್‌ನ ಅಧ್ಯಕ್ಷ ಶಶಿಧರ್ ಶೆಟ್ಟಿ ಇನ್ನಂಜೆ ಮಾತನಾಡಿ, ಮುಂಬಯಿ ಕುಲಾಲ ಸಂಘವು ಎಲ್ಲರನ್ನು ಒಗ್ಗೂಡಿಸಿ ಉನ್ನತ ಮಟ್ಟಕ್ಕೆ ಬೆಳೆಯುತ್ತಿರುವುದು ಅಭಿನಂದನೀಯ. ಈ ಭವನವು ಕುಲಾಲರ ಒಗ್ಗಟ್ಟಿಗೆ ಸಾಕ್ಷಿಯಾಗಿದೆ ಎಂದು ಬಣ್ಣಿಸಿದರು.

​ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾದ ಮಯೂರ್ ಉಳ್ಳಾಲ್ ಅವರು ಮುಂಬಯಿ ಕುಲಾಲ ಸಂಘದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿ, ಮುಂಬಯಿ ಮತ್ತು ಮಂಗಳೂರಿನ ಕುಲಾಲರ ಸಂಬಂಧವು ಭವನ ನಿರ್ಮಾಣದ ಮೂಲಕ ಮತ್ತಷ್ಟು ಬಲಿಷ್ಠವಾಗಿದೆ. ಈ ಭವನವು ನಮ್ಮೆಲ್ಲರ ಒಗ್ಗಟ್ಟಿನ ಸಂಕೇತವಾಗಿದೆ ಹಾಗೂ ಈ ಕಾರ್ಯ ಯೋಜನೆಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿರುವುದಾಗಿ ನುಡಿದರು.

​ಕುಲಾಲ ಸಂಘ ಮುಂಬಯಿಯ ಅಧ್ಯಕ್ಷ ರಘು ಮೂಲ್ಯ ಅಧ್ಯಕ್ಷತೆ ವಹಿಸಿದ್ದರು. ಭವನ ನಿರ್ಮಾಣಕ್ಕಾಗಿ ವಿವಿಧ ನೆಲೆಯಲ್ಲಿ ಸೇವೆ ಹಾಗೂ ದಾನ ನೀಡಿದ ಗಣ್ಯರನ್ನು ಈ ಸಂದರ್ಭದಲ್ಲಿ ಸಮ್ಮಾನಿಸಲಾಯಿತು. ಇದೇ ವೇಳೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಪರವಾಗಿ ಅಧ್ಯಕ್ಷರಾದ ಮಯೂರ್ ಉಳ್ಳಾಲ್ ಅವರನ್ನು ಅಭಿನಂದಿಸಲಾಯಿತು.

​ಕಾರ್ಯಕ್ರಮದಲ್ಲಿ ಕುಲಾಲ ಸಂಘ ಮುಂಬಯಿಯ ಗೌರವಾಧ್ಯಕ್ಷ ಪಿದೇವದಾಸ್ ಎಲ್. ಕುಲಾಲ್, ಕಟ್ಟಡ ಸಮಿತಿ ಕಾರ್ಯಾಧ್ಯಕ್ಷ ಗಿರೀಶ್ ಬಿ. ಸಾಲ್ಯಾನ್, ಉಪಕಾರ್ಯಾಧ್ಯಕ್ಷ ಸುನಿಲ್ ಆರ್. ಸಾಲ್ಯಾನ್, ಮುಂಬಯಿ ಕುಲಾಲ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಸುಚಿತಾ ಡಿ. ಬಂಜನ್ ಅಭಿನಂದನ ನುಡಿಗಳನ್ನಾಡಿದರು.

​ವೇದಿಕೆಯಲ್ಲಿ ಸಂಘದ ಪದಾಧಿಕಾರಿಗಳು, ಉಪ ಸಮಿತಿಗಳ ಪದಾಧಿಕಾರಿಗಳು, ಸಂಘದ ಆರು ಸ್ಥಳೀಯ ಸಮಿತಿಗಳ ಪದಾಧಿಕಾರಿಗಳು ಹಾಗೂ ‘ಅಮೂಲ್ಯ’ ಸಂಪಾದಕೀಯ ಮಂಡಳಿಯವರು ಉಪಸ್ಥಿತರಿದ್ದರು. ಮಕ್ಕಳು ಮತ್ತು ಹಿರಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

​ಕಟ್ಟಡ ಉದ್ಘಾಟನ ಸಮಿತಿ ಅಧ್ಯಕ್ಷ ಬಿ. ದಿನೇಶ್ ಕುಲಾಲ್ ಸ್ವಾಗತಿಸಿದರು. ಕುಲಾಲ ಸಂಘ ಮುಂಬಯಿಯ ಪ್ರಧಾನ ಕಾರ್ಯದರ್ಶಿ ಕರುಣಾಕರ್ ಬಿ. ಸಾಲ್ಯಾನ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಘದ ಉಪಾಧ್ಯಕ್ಷ ಡಿ. ಐ. ಮೂಲ್ಯ ಧನ್ಯವಾದ ಸಮರ್ಪಿಸಿದರು.



Related posts

ಮೂಲ್ಕಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಖ್ಯಾತ ನಾದಸ್ವರ ವಾದಕ ನಾಗೇಶ್ ಬಪ್ಪನಾಡು ಅವರಿಗೆ ಆದ್ಯಾತ್ಮಿಕ ಗುರು ಶ್ರೀ ಚಂದ್ರಶೇಖರ್ ಸ್ವಾಮೀಜಿ ಅವರಿಂದ ಗೌರವ.

Mumbai News Desk

ಕಾಪು ತಾಲೂಕು ಪಂಚಾಯತ್ : ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆ.

Mumbai News Desk

ಕರ್ನಾಟಕ ಮೀನುಗಾರಿಕಾ ನಿಗಮದ ಅಧ್ಯಕ್ಷರಾಗಿ ಮಾಲಾ ನಾರಾಯಣ ರಾವ್ ನಿಯುಕ್ತಿ

Mumbai News Desk

ವಿಧಾನ ಪರಿಷತ್ ಉಪಚುನಾವಣೆ – ಬಿಜಿಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024 ಪ್ರತೀಕ್ಷಾ ಪ್ರಕಾಶ್ ಆಚಾರ್ಯ ಉತ್ತೀರ್ಣ

Mumbai News Desk

ಮೀರಾ ಡಹಾಣೂ ಬಂಟ್ಸ್ (ರಿ) . ವಾರ್ಷಿಕ ಟರ್ಫ್ ಫುಟ್ ಬಾಲ್ ಟೂರ್ನಮೆಂಟ್.

Mumbai News Desk