September 6, 2026
Mumbai News Kannada
ಪ್ರಕಟಣೆ

ಜ. 04ರಂದು “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ: ಡಾ.ಎಂ. ಅಣ್ಣಯ್ಯ ಕುಲಾಲ್ ಅವರು “ವೈದ್ಯ ಸಿಂಧೂರ” ಪ್ರಶಸ್ತಿ





ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗದ ಕುಲಾಲ-ಕುಂಬಾರ ಸಮುದಾಯದಲ್ಲಿ ಹುಟ್ಟಿ, ಜಾತ್ಯಾತೀತ, ಧರ್ಮಾತೀತ, ಮಾನವೀಯ ಚಿಂತನೆಗಳಿಂದ, ಮೇಲ್ವರ್ಗ ಕೆಳವರ್ಗ ಎಂಬ ಭೇದ ಇಲ್ಲದೇ ನೊಂದ ಬೆಂದ ಬಡವರ ನಿರ್ಗತಿಕರ ಸೇವೆ ಮಾಡಿ, ವೈದ್ಯರ, ಪ್ರಾಧ್ಯಾಪಕರ, ಶಿಕ್ಷಣ ತಜ್ಞರ, ಸಾಹಿತಿಗಳ, ಚಿಂತಕರ, ಸಂಘಟಕರ, ಸಮಾಜ ವಿಜ್ಞಾನಿಗಳ ಗುಂಪಿನ ಗಟ್ಟಿ ಧ್ವನಿ ಆಗಿ, ಅಶಕ್ತರ ಆಶಾಕಿರಣವಾಗಿ, ಸಮಾಜ ಮುಖೀ ಸೇವೆಗೆ ಪ್ರತಿಷ್ಠಿತ ಡಿ. ದೇವರಾಜ್ ಅರಸು ರಾಜ್ಯ ಪುರಸ್ಕಾರ, ಜೀವಮಾನದ ವೈದ್ಯಕೀಯ ಸೇವೆಗಾಗಿ ಭಾರತೀಯ ವೈದ್ಯಕೀಯ ಸಂಘದ ರಾಷ್ಟ್ರೀಯ ಶಾಖೆಯಿಂದ ಪ್ರತಿಷ್ಠಿತ ಡಾ ಬಿ ಸಿ ರಾಯ್ ಸಮಾಜ ಸೇವಾ ಪುರಸ್ಕಾರ ಪಡೆದು, ಪ್ರಸ್ತುತ ಪ್ರತಿಷ್ಠಿತ ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯ ಉಪಾಧ್ಯಕ್ಷರಾಗಿ ಆಯ್ಕೆ ಆಗಿ, ಬಡ ರೋಗಿಗಳಿಗೆ ಉಚಿತ ಸೇವೆ ಸಾಂತ್ವನ ನೀಡುತ್ತಾ,ವೈದ್ಯಕೀಯ ಸೇವೆ ಯ ಜೊತೆ ಆರೋಗ್ಯ ಜಾಗೃತಿ ಹಾಗೂ ಸಂಘಟನೆ ಮಾಡುತ್ತಾ ಕರಾವಳಿ ಮಲೆನಾಡಿನ ಉದ್ದಕ್ಕೂ “ಬಡವರ ವೈದ್ಯ” ಎಂಬ ಖ್ಯಾತಿಯ ಡಾ. ಎಂ ಅಣ್ಣಯ್ಯ ಕುಲಾಲ್  ಅವರಿಗೆ ಅತಿಥಿ ಗಣ್ಯರ ಸಮ್ಮುಖದಲ್ಲಿ “ ವೈದ್ಯ ಸಿಂಧೂರ” ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.



Related posts

ದೊಡ್ಡಣ್ಣ ಗುಡ್ಡೆಯ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಮೇ 9 ರಿಂದ ಮೇ 13 ಪ್ರತಿಷ್ಠಾ ವರ್ಧಂತಿ ಮಹೋತ್ಸವ

Mumbai News Desk

ಶ್ರೀ ವಿಠೋಬ ಗೋಪಾಲಕ್ರಷ್ಣ ಭಜನಾ ಮಂದಿರ ಹೆಜಮಾಡಿ : ಎ. 21(ಇಂದು) ರಂದು ವಾರ್ಷಿಕ ಮಂಗಳೋತ್ಸವ, ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ

Mumbai News Desk

ಮೆಹತಾ ಕಾಲೇಜ್ ಐರೋಲಿ: ಜೂನ್ 27 ರಂದು ಬೆಳ್ಳಿ ಹಬ್ಬದ ನಿಮಿತ್ತ ವಿಶೇಷ ಕಾರ್ಯಕ್ರಮ: ಪರಂಪರೆಯಿಂದ ಪ್ರಗತಿಗೆ ಸಂವಾದ, ಸಾಧಕರಿಗೆ ಗೌರವಾರ್ಪಣೆ

Mumbai News Desk

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಮಾ. 8 ರಂದು : ಮಹಾ ಶಿವರಾತ್ರಿ ಆಚರಣೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ದೀಪಾವಳಿ ಹಬ್ಬದ ಪ್ರಯುಕ್ತ ಭಜನಾ ಸಂಕೀರ್ತನೆ

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ, ಜೋಗೇಶ್ವರಿ ಪೂರ್ವ – ಸೆ. 22ರಿಂದ ಶರನ್ನವರಾತ್ರಿ ಹಾಗೂ ವಿಜಯದಶಮಿ ಮಹೋತ್ಸವ

Mumbai News Desk