32 C
Mumbai
April 23, 2026
Mumbai News Kannada
ಕ್ರೀಡೆ

ಸೈಂಟ್ ಆಗ್ನೆಸ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟ:





“ವಿದ್ಯಾಭ್ಯಾಸದೊಂದಿಗೆ ಕ್ರೀಡೆಯಲ್ಲೂ ಆಸಕ್ತರಾಗಿ”: ಭಾಸ್ಕರ್ ಶೆಟ್ಟಿ ಅವರಿಂದ ವಿದ್ಯಾರ್ಥಿಗಳಿಗೆ ಕರೆ

ಮೀರಾ ರೋಡ್ (ಡಿ6):

​ರೈ ಸುಮತಿ ಎಜುಕೇಷನಲ್ ಟ್ರಸ್ಟ್‌ನ ಆಶ್ರಯದಲ್ಲಿ ನಡೆಯುತ್ತಿರುವ ಸೈಂಟ್ ಆಗ್ನೆಸ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟವು ಮೀರಾ ರೋಡ್‌ನ ಸಚಿನ್ ತೆಂಡೂಲ್ಕರ್ ಮೈದಾನದಲ್ಲಿ ವೈಭವದಿಂದ ಜರುಗಿತು.

​ಈ ಕಾರ್ಯಕ್ರಮಕ್ಕೆ ಮೀರಾ-ಭಯಂದರ್‌ನ ಹೆಸರಾಂತ ಉದ್ಯಮಿ ಭಾಸ್ಕರ್ ಶೆಟ್ಟಿ, ಕಾಶಿಮೀರಾ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಶುಭ ಹಾರೈಸುತ್ತಾ, “ವಿದ್ಯಾಭ್ಯಾಸದಷ್ಟೇ ಕ್ರೀಡೆಯಲ್ಲೂ ಹೆಚ್ಚು ಆಸಕ್ತಿ ವಹಿಸಿ” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

​ಸಂಸ್ಥೆಯ ಸಂಸ್ಥಾಪಕರಾದ ಡಾ. ಅರುಣೋದಯ ಎಸ್. ರೈ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. “ಶಿಕ್ಷಣವು ಬದುಕನ್ನು ರೂಪಿಸಿದರೆ, ಕ್ರೀಡೆಯು ಆರೋಗ್ಯವನ್ನು ಕಾಪಾಡುತ್ತದೆ. ಸ್ಪರ್ಧೆಯಲ್ಲಿ ಗೆಲ್ಲುವುದಕ್ಕಿಂತ ಪಾಲ್ಗೊಳ್ಳುವುದು ಮುಖ್ಯ” ಎಂದು ನುಡಿದರು.

​ಉಪ ಸಂಸ್ಥಾಪಕರಾದ ಮಥಾಯಸ್ ಫರ್ನಾಂಡಿಸ್ ಅವರು ಕ್ರೀಡೆಯ ಮಹತ್ವವನ್ನು ಮನವರಿಕೆ ಮಾಡಿಕೊಟ್ಟರು. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡಾ ಚಟುವಟಿಕೆಗಳು ಅನಿವಾರ್ಯವಾಗಿದ್ದು, ವಿದ್ಯಾರ್ಥಿಗಳು ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಪ್ರೋತ್ಸಾಹಿಸಿದರು.

​ಕ್ರೀಡಾಕೂಟದಲ್ಲಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ವಿದ್ಯಾರ್ಥಿಗಳು ರಿಲೇ ರೇಸ್, ಶಾಟ್‌ಪುಟ್, ಕಬಡ್ಡಿ ಸೇರಿದಂತೆ ಅನೇಕ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು ಮತ್ತು ವಿವಿಧ ಪದಕಗಳನ್ನು ಪಡೆದರು. ಈ ಸಂದರ್ಭದಲ್ಲಿ ಪಾಲಕರ ವರ್ಗವೂ ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಇನ್ನಷ್ಟು ಹುರುಪು ತುಂಬಿದರು.

ಡಾ. ಅರುಣೋದಯ ರೈ ಅವರು ಸ್ಥಾಪಿಸಿದ ರೈ ಸುಮತಿ ಎಜುಕೇಷನಲ್ ಟ್ರಸ್ಟ್ ಶಿಕ್ಷಣ ಕ್ಷೇತ್ರದಲ್ಲಿ ತನ್ನ ಅದ್ಭುತ ಸಾಧನೆಗಳಿಂದ ಪ್ರಸಿದ್ಧಿ ಪಡೆದಿದೆ. ಕಳೆದ 22 ವರ್ಷಗಳಿಂದ, ಟ್ರಸ್ಟ್‌‌ನ ಶಾಲೆಗಳು ಎಸ್.ಎಸ್.ಸಿ. (SSC) ಬೋರ್ಡ್ ಪರೀಕ್ಷೆಗಳಲ್ಲಿ ಸತತವಾಗಿ ಶೇಕಡಾ 100 ರಷ್ಟು ಫಲಿತಾಂಶಗಳನ್ನು ಸಾಧಿಸುತ್ತಾ ಬಂದಿವೆ.



Related posts

ಸುರತ್ಕಲ್ ಬಂಟರ ಸಂಘದ ವಾರ್ಷಿಕ ಕ್ರೀಡಾಕೂಟ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ ದಂಗಲ್ ಕ್ರೀಡಾ ಕೂಟ, : ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ ಪಾಲ್ಗೊಳ್ಳುವುದು ಮುಖ್ಯ- ಡ. ದಿವಾಕರ ಶೆಟ್ಟಿ ಇಂದ್ರಾಳಿ

Mumbai News Desk

ಮಲಾಡ್ ಕನ್ನಡ ಸಂಘ ಒಳಾಂಗಣ ಕ್ರೀಡೆ ಸ್ಪರ್ಧೆ.

Mumbai News Desk

ಶ್ರೀಲಂಕಾದಲ್ಲಿ ನಡೆದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ ಗೆದ್ದ ಬಬಿತಾ ಶೆಟ್ಟಿ

Mumbai News Desk

ಬೊಯಿಸರ್ ನಲ್ಲಿ ತುಂಗಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ ಸಮಾರೋಪ ಸಮಾರಂಭ

Mumbai News Desk

27ನೇ ರಮಾನಾಥ ಪಯ್ಯಡೆ ಸ್ಮಾರಕ ಕಾಲ್ಚೆಂಡು ಲೀಗ್ ಟೂರ್ನಮೆಂಟ್ : ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಭರ್ಜರಿ ಜಯ

Mumbai News Desk