
ಕಳೆದ ಒಂಭತ್ತು ದಶಕಗಳಿಗೂ ಹೆಚ್ಚು ಸಮಯದಿಂದ ಕನ್ನಡ ನಾಡು ಸುಡಿಯ ಸೇವೆಯಲ್ಲಿ ನಿರತವಾಗಿದ್ದು ಇದೀಗ ಶತಮಾನದತ್ತ ಸಾಗುತ್ತಿರುವ ಮಾಟುಂಗಾ ಪೂರ್ವದ ಮುಂಬಯಿ ಕನ್ನಡ ಸಂಘದ ವತಿಯಿಂದ ಪ್ರತೀ ವರ್ಷದಂತೆ ಈ ವರ್ಷವೂ ಎರಡು ದತ್ತಿ ಉಪನ್ಯಾಸಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಖಾಲ್ಸಾ ಕಾಲೇಜು ಕನ್ನಡ ಪ್ರೇಮಿ ಮಂಡಳಿ ದತ್ತಿ ನಿಧಿಯ ಪರವಾಗಿ ಮುಂಬಯಿಯ ಉದಯೋನ್ಮುಖ ಕವಯಿತ್ರಿ, ಲೇಖಕಿ ದೀಪಾ ಹರೀಶ್ ಶೆಟ್ಟಿಯವರು “ಇಂದಿನ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳು” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ.
ದಿ. ಜಿ. ವಿ. ರಂಗಸ್ವಾಮಿ ದತ್ತಿ ನಿಧಿಯ ಪರವಾಗಿ ಮಹಾಪೌರ ಆದರ್ಶ ಶಿಕ್ಷಕ ಪುರಸ್ಕಾರ ಪಡೆದಿರುವ ಶಿಕ್ಷಕ ಮಹದೇವ ಸಿದಮಲ್ಲಾ ಜಾವೀರರು “ನವಭಾರತದ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ.
ಮುಂಬಯಿಯ ಹಿರಿಯ ಸಾಹಿತಿ ಡಾ. ಸುಮಾ ದ್ವಾರಕಾನಾಥ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಮುಂಬಯಿ ಕನ್ನಡ ಸಂಘದ ಅಧ್ಯಕ್ಷ ಗುರುರಾಜ್ ಎಸ್. ನಾಯಕ್ ಅಧ್ಯಕ್ಷತೆ ವಹಿಸಲಿದ್ದು ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸೋಮನಾಥ ಎಸ್. ಕಕೇರರರು ಕಾರ್ಯಕ್ರಮದ ನಿರ್ವಹಣೆ ಮಾಡುತ್ತಾರೆ.
ಇದೇ ಸಂದರ್ಭದಲ್ಲಿ ಮುಂಬಯಿ ವಿಶ್ವವಿದ್ಯಾಲದಿಂದ ಕಳೆದ ಶೈಕ್ಷಣಿಕ ವರ್ಷದಲ್ಲಿ ನಡೆಸಲಾದ ಕನ್ನಡ ಎಂ.ಎ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿಕ್ರಂ ಜೋಶಿಯವರನ್ನು ಸಂಘದ ನಗದು ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ.
ಶನಿವಾರ ದಿನಾಂಕ 20-12-2025 ರಂದು ಸಂಜೆ ಗಂಟೆ 5-00ಕ್ಕೆ ಮೈಸೂರು ಅಸೋಸಿಯೇನ್ನ ತಳಮಹಡಿ ಸಭಾಗೃಹದಲ್ಲಿ ಈ ಕಾರ್ಯಕ್ರಮವು ಜರುಗಲಿದೆ. ಕಾರ್ಯಕ್ರಮದಲ್ಲಿ ಕನ್ನಡಿಗರು ಅಧಿಕ ಸಂಖ್ಯೆಯಲ್ಲಿ ಹಾಜರಿರಬೇಕಾಗಿ ಸಂಘದ ಪ್ರಧಾನ ಕಾರ್ಯದರ್ಶಿ ಸೋಮನಾಥ ಎಸ್. ಕರ್ಕೇರರು ಹಾಗೂ ಗೌರವ ಜೊತೆ ಕಾರ್ಯದರ್ಶಿ ರಾಮಚಂದ್ರ ಭಟ್ ವಿನಂತಿಸಿಕೊಂಡಿದ್ದಾರೆ.
ಸೋಮನಾಥ ಎಸ್. ಕರ್ಕೇರ, ಫೋನ್: 9819321186




